Home / ಕಥೆ / ಕಾದಂಬರಿ / ಮಲ್ಲಿ – ೪೦

ಮಲ್ಲಿ – ೪೦

ಬರೆದವರು: Thomas Hardy / Tess of the d’Urbervilles

ತಿಲಕರ ಜಯಂತಿಯದಿನ ಹುಡುಗರು ತಿಲಕರ ಪಟ ಮೆರ ವಣಿಗೆ ಮಾಡಬೇಕೆಂದಿದ್ದಾರೆ. ಅದಕ್ಕೆ ಎಲ್ಲಾ ಸಿದ್ಧತೆಗಳೂ ನಡೆದಿದೆ.

“ತಿಲಕರ ಪಟವೊಂದೇ ಸಾಕೇನೋ ? ” ಒಬ್ಬ ಕೇಳಿದ.

“ಉಂಟೇ? ಇಲ್ಲಿಂದ ಹತ್ತು ಹೆಜ್ಜೆ ಹೋಗುವುದರೊಳಗಾಗಿ ಪೋಲೀಸಿನವರು ಬಂದು ನಮ್ಮನ್ನು ರಾಜದ್ರೋಹಿಗಳು ಎಂದು ಹಿಡಿದುಹಾಕಿಬಿಡುತ್ತಾರೆ.”

“ಓ ಬಿಟ್ಟೆ! “ಹಾಗೇನಾದರೂ ಆದರೆ ನಮಗೆ ಎರಡು ಮದ್ದಾ ನೆಗಳಿವೆ ಹೋರಾಡುವುದಕ್ಕೆ.”

“ಯಾರಪ್ಪಾ ! ಕಾಂಗ್ರೆಸ್ ಅನ್ನುವುದಕ್ಕೆ ಮೈಸೂರಿನಲ್ಲಿ ಇನ್ನು ಕಾಂಗ್ರೆಸ್ ಬಂದಿಲ್ಲ. ಬೆಂಗಳೂರಿನಲ್ಲಿ ಹುಟ್ಟಿದ ಕಾಂಗ್ರೆಸ್ ಕೆಂಪಾಂ ಬುಧಿಯಲ್ಲಿ ಹತ್ತು ಸಾವಿರ ಜನದ ಕೈಲಿ ತಿಲಕರಿಗೆ “ಧರ್ಮೋದಕ ಕೊಡಿಸಿತು. ತಾನೂ ಧರ್ಮೋದಕ ತೆಗೆದುಕೊಂಡಿತು. ಇನ್ನು ಯಾವುದು ?”

“ಅಲ್ಲಯ್ಯಾ, ನಮ್ಮಲ್ಲಿ ಹೆತ್ತು ಜನಕ್ಕಾಗಿ ಹೋರಾಡುವ ಸಂಘ ಗಳು ಯಾವವೂ ಇಲ್ಲ. ಆದಕ್ಕೆ. ಅದೃಷ್ಟ ಇಬ್ಬರು ಗಂಡುಗಳು ಇದ್ದಾರೆ.”

“ಒಂದು ತಾತಯ್ಯ ಇನ್ನೊಂದು ರಾವ್‌ಬಹದ್ದೂರ್ರೋ ?”

“ಮತ್ತೆಯಾರು? ಹೌದು. ಇನ್ನೊಂದು ಗೊತ್ತೇನು ? ಮಿಲ್ಲರ್ ಕಮಿಟಿ ರಿಪೋರ್ಟ್ ಬಂತಲ್ಲಾ! ಆಗಲೂ ಆತ ಇದು ಬೇಡ ಅಂದನಂತೆ. ಚಾಕರಿ ಅಂದರೆ ಕೂಲಿ. ಕೂಲಿ ಮಾಡೋಕೆ ಜಾತಿ ಏನು ಎಂದನಂತೆ. ಆದರೆ ಆತನಮಾತು ನಡೆಯಲಿಲ್ಲವಂತೆ. ಆಗಿ ನಿಂದ ಆತ ಹಿಂದೆ ಹಿಂದೆ ಇದ್ದಾನೆ ಅಂತಾರೆ”

“ಡಯಾರ್ಕಿ ಬಂತು ಸಜ್ಜನರೆಲ್ಲ ಹಿಂದೆ ಬಿದ್ದರು. ನೋಡು. ಕಾಂಗ್ರೆಸ್ಸಿನವರಂತೂ ಸರಕಾರಕ್ಕೆ ವಿರುದ್ಧ. ಲಿಬರಲ್ಸ್‌ನಾದರೂ ಮಾಡರೇಟ್ಸನಾದರೂ ಮಂತ್ರಿಗಳನ್ನು ಮಾಡಬಾರದಾಗಿತ್ತೇ ? ಎಲ್ಲಾ ಬಿಟ್ಟು, ಔಟ್ ಅಂಡ್ ಔಟ್ ಕಮ್ಯೂನಲಿಸ್ಟನೇ ಮಂತ್ರಿ ಗಳನ್ನು ಮಾಡಬೇಕಾಗಿತ್ತೇ ?”

“ಬಿಡೋ ಹುಚ್ಚ. ಇವೆಲ್ಲ ಡಿವೈಡ್ ಎಂಡ್ ರೂಲ್ ಪಾಲಿ ಸಿಯ ಪ್ರಭಾವ.”

“ಅದೆಲ್ಲ ಇರಲಿ. ಸಧ್ಯದ ಕೆಲಸ ಹೇಳಯ್ಯ ! ?

“ನಾವು ಬರಿಯ ತಿಲಕರ ಫೋಟೋ ತೆಗೆದುಕೊಂಡು ಹೋದರೆ ಆಗುವುದಿಲ್ಲ… ಮಹಾರಾಜರ ಫೋಟೋನೂ ತೆಗೆದುಕೊಂಡು ಹೋಗ ಬೇಕು.?

“ಅಷ್ಟೇ ಅಲ್ಲ ಸಾರ್. ಬೆಂಗಳೂರು ಹುಡುಗರು ಗಾಂಧಿಯವರ ಫೋಟೋನೂ ತೆಗೆದುಕೊಂಡು ಹೋಗುವರಂತೆ. ನಾವೂ ಹಾಗೇ ಮಾಡೋಣ.”

“ಸರಿ ಸರಿ. ಒಂದು ಸತ್ತವರಿಗೆ ಭಕ್ತಿ. ಇನ್ನೊಂದು ಮೈಸೂರಿನ ರಾಜಭಕ್ತ : ಮತ್ತೊಂದು ಮುಂದಿನ ಇಂಡಿಯದ ಭಕ್ತಿ.”

“ಆಯಿತು ಒಂದು ಫೋಟೋಗೆ ನಮ್ಮಲ್ಲಿ ದುಡ್ಡಿಲ್ಲ. ಇನ್ನು ಮೂರು ಫೋಟೋ ಎಲ್ಲಿಂದ ತರುವುದು? ”

“ಒಂದು ಜಾಗಾ ಇದೆ. ಚ

“ನಾಯಕರ ಚಿಕ್ಕ ಹೆಂಡತಿ ಮ್ಲಮ್ಮಣ್ಣಿ ಇದ್ದಾರಲ್ಲ. ಅವರು ಈಚೆಗೆ ಸಾರ್ವಜನಿಕ ಚಳುವಳಿಯೆಂದು ಯಾರು ಹೋದರೂ ಇಲ್ಲ ವೆನ್ನುವುದಿಲ್ಲ. ಅದರಲ್ಲೂ ತಾತಯ್ಯನವರು ಹೇಳಿದರೆ ಎಂದರೆ ಕೈ ತುಂಬಾ ಕೊಡುತ್ತಾರೆ.”

“ತಾತಯ್ಯ ಊರಲ್ಲಿಯೇ ಇಲ್ಲವಲ್ಲ?”

“ಅದಕ್ಕೇನು? ತಾತಯ್ಯನವರು ಬರುತ್ತಾರೆಂದು ಇದುವರೆಗೂ ಕಾದೆವು. ಅವರು ಬರಲಿಲ್ಲ. ನಾವೇ ಬಂದಿದ್ದೇವೆ. ಅನ್ನೋಣ. ಅದೃಷ್ಟವಿದ್ದಂತೆ ಆಗಲಿ.”

“ಅದೀಗ ಸೈ”
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...