Home / ಕಥೆ / ಕಾದಂಬರಿ / ಮಲ್ಲಿ – ೪೮

ಮಲ್ಲಿ – ೪೮

ಬರೆದವರು: Thomas Hardy / Tess of the d’Urbervilles

ನಾಯಕನು ಮಲ್ಲಿಯನ್ನು ಒಂದು ಕ್ಷಣ ಬಿಟ್ಟಿರಲಾರ. ಅವನಿಗೆ ಈಗ ಲೋಕದಲ್ಲಿ ಯಾರೂ ಬೇಡ. ಮಲ್ಲಿಯೂ ಒಂದು ತೂಕ: ಲೋಕವೆಲ್ಲ ಇನ್ನೊಂದು ತೂಕ. ಊಟದಲ್ಲಿ ಮಲ್ಲಿಯ ಜೊತೆ: ಕುಳಿತಿದ್ದರೆ ಮಲ್ಲಿಯೊಡನೆ. ಓದಿದರೆ ಅವಳ ಮಗ್ಗುಲಲ್ಲಿ. ಬೆಳಗಿಂದ ಬೆಳಗಿನವರೆಗೂ ಎಲ್ಲೋ ಒಂದೆರಡು ಗಂಟೆ ಆಗಾಗ ಅವಳನ್ನು ಬಿಟ್ಟಿ ದ್ದರೆ ಅದೇ ಹೆಚ್ಚು.

ಮಲ್ಲಿ ಆ ಮಗುವನ್ನು ಒಂದು ಗಳಿಗೆ ಬಿಟ್ಟರುವುದಿಲ್ಲ; ರಾಣಿಯು ಯಾವಾಗಲಾದರೂ ಮಗುವಿನ ಕಡೆ ನೋಡಿದರೆ, “ತೆಂಗಿನ ಸೊಸಿ ಬೆಳೆಸಿದಂಗೆ ಬೆಳೆಸಿಕೊಡ್ತೀನಿ ಬುದ್ಧಿ” ಎನ್ನುತ್ತಾಳೆ. ತಾನು ಚಿಕ್ಕ ತಾಯಿಯ ಹಾಗೆ ಅವನ್ನ ನೋಡುತ್ತಿಲ್ಲ. ಅವನಿಗಾಗಿ ಗೊತ್ತಾಗಿರುವ ದಾದಿಯಂತೆ ಆ ಮಗುವಿಗೆ ಉಪಚಾರಮಾಡುತ್ತಾಳೆ. ರಾತ್ರಿಯಲ್ಲಿ ಅವನು ಎದ್ದರೆ, ರಾಣಿಗೆ ಎಚ್ಚರವಾಗುವುದಕ್ಕಿಂತ ಮುಂಚೆ ಅವಳಿಗೆ ಎಚ್ಚರವಾಗುತ್ತದೆ. ಆ ಮಗುವಿಗೆ ಸ್ನಾನ ಉಡುಪು ಊಟ, ನಿದ್ದೆ, ಎಲ್ಲದಕ್ಕೂ ಅವನ ಭಾಗ್ಯದೇವತೆಗಿಂತ. ಹೆಚ್ಚಾಗಿ ಗಮನ ಕೊಟ್ಟು ಕಾಪಾಡುತ್ತಿದ್ದಾಳೆ.

ಒಂದು ದಿನ ಆನಂದಮ್ಮನು ಬಂದು ಕುಳಿತಿದ್ದಾಳೆ, ಮಲ್ಲಿಯು ಮಗುವನ್ನು ಎತ್ತಿಕೊಂಡು ಬಂದಳು. ಆನಂದಮ್ಮನು ಕರೆದಳು: ಮಗು ಬರಲಿಲ್ಲ. ಮಲ್ಲಿಯು ನಗುನಗುತ್ತಾ “ನಮ್ಮ ಪುಟ್ಟ ಬುದ್ಧಿ ಶುದ್ಧ ಕಳ್ಳ, ಅಮ್ಮಾ ! ದೊಡ್ಡಮ್ಮನೋರು ಕರೆದರೂ ಹೋಗೋದಿಲ್ಲ.” ಎಂದು, ಮಗುವನ್ನು ಕೆಳಗೆ ಇಳಿಸಿ “ಪುಟ್ಟ ಬುದ್ದೀನ ನೋಡಿಕೊಳ್ಳಿ ಬುದ್ಧಿ, ನಾನು ಹೋಗುತ್ತೇನೆ” ಎಂದು ಹೊಗಿ ಮರದ ತೆರೆಯ ಮರೆ ಯಲ್ಲಿ ನಿಂತುಕೊಂಡಳು.

ಪುಟ್ಟಬುದ್ದಿಯು ಅತ್ತಕಡೆ ಇತ್ತಕಡೆ ನೋಡಿ ಮಲ್ಲಿಯು ಕಣ್ಣಿಗೆ ಬೀಳದಿರಲು ಅಳುವುದಕ್ಕೆ ಆರಂಭಿಸಿತು. ಅದನ್ನು ಕೇಳಿ ರಾಣಿಯು ಎಲ್ಲಿದ್ದಳೋ ಓಡಿ ಬಂದಳು. ಮರೆಯಲ್ಲಿದ್ದ ಮಲ್ಲಿಯನ್ನು ಕಾಣದೆ ತಾನೇ ಹೋಗಿ ಎತ್ತಿಕೊಳ್ಳುವುದಕ್ಕೆ ಕೈ ನೀಡಿದಳು. ಮಗುವು ಬರಲಿಲ್ಲ. “ನೋಡಿದಿರಾ ತಾಯಿ, ಈ ಮಲ್ಲೀ ಮಾಟಾನಾ! ನಾನು ಹೆತ್ತವಳು. ನಮ್ಮ ಪುಟ್ಟಬುದ್ದೀಗೆ ನಾನು ಬೇಡ. ಅವಳು ಬೇಕು. ಅವಳು ಪಾಪ! ಎಲ್ಲಿ ಹೋಗಿದ್ದಾಳೋ! ಅವಳು ಅತ್ತ ಇತ್ತ ಹೋಗಕೂಡದು. ಈ ಕಳ್ಳನ ಮುಂದೆಯೇ” ಕೂತಿರಬೇಕೇನೋ? ಎಂದು ಸಣ್ಣಗೆ ಮೂತಿ ಹಾಗೆಂದಳು.

ಮಗು ಇನ್ನೂ ಬಲವಾಗಿ ಅತ್ತಿತು.

ಕೂಡಲೇ ಮರೆಯಿಂದ ಮಲ್ಲಿಯು ಓಡಿಬಂದಳು: ಎತ್ತಿ ಕೊಂಡಳು. ಮಗುವು ಸುಮ್ಮನಾಯಿತು.

ರಾಣಿಯು “ಓಹೋ! ತಾಯಿ ಮಕ್ಕಳ ಕಣ್ಣುಮುಚ್ಚಾಲೆಯೋ ಇದು? ನಾನು ಅರೀದೇ ಮಾಡುತ್ತಿದ್ದ ಕೆಲಸ ಬಿಟ್ಟು ಬಂದೆ” ಎಂದು ಹೊರಟಳು.

ಆನಂದಮ್ಮನು ನಕ್ಕಳು.

ಮಲ್ಲಿಯು “ಯಾಕೆ ಗೊತ್ತಾ ಅಮ್ಮ! ನನ್ನ ಹೊಟ್ಟೇಲಿ ಹುಟ್ಟಿ ತ್ತಲ್ಲಾ ಅದೇ ನಮ್ಮ ದೊಡ ಬುದ್ಧಿಯೋರ ಹೊಟ್ಟೇಲಿ ಗಂಡಾಗಿ ಹುಟ್ಟಿದೆ. ಅದಕ್ಕೇ ನನ್ನ ಮೇಲೆ ಇಷ್ಟು ಅಭಿಮಾನ ಲೋ ಪುಟ್ಟ ಬುದ್ಧೀ ನಿಂಗೆ ಬುದ್ಧಿಯಿಲ್ಲ. ಇನ್ನೊಂದು ವರ್ಷ, ನಾನು ನಿಮ್ಮನ್ನೆಲ್ಲ ಬಿಟ್ಟು ಓಡಿ ಹೋಗೋಳು ಕಣಪ್ಪ. ಅತ್ತತಿರುಗಿಕೋ” ಎಂದು ಅದನ್ನು ಮುದ್ದಿಸಿದಳು.

ರಾಣಿಯು “ನೋಡಿ ತಾಯಿ, ನೋಡಿ. ಆ ಮಗೂನ ಕೈಲೂ ಇದೇ ಮಾತಾ? ಛೇ, ಬುಡ್ತು ಅನ್ನು” ಎಂದು ಹುಸಿಕೋಪದಿಂದ ಗದರಿಕೊಂಡಳು.

“ಸದಾಶಿವನಿಗೆ ಅದೇ ಜ್ಞಾನ ಬುದ್ದಿ. ನದಿ ಕಟ್ಟೆ ದಾಟದಿದ್ದರೆ ಸಮುದ್ರ ಸೇರೀತಾ? ಅದಕ್ಕೆ ತನ್ಕ ಅಭಿಮಾನದ ಕಟ್ಟೆದಾಟಿ ನಾನು ಹೊರಡುತೀನಿ” ಎಂದು ಮಲ್ಲಿಯು ಅನ್ಯಮನಸ್ಕಳಾಗಿ ನುಡಿದಳು.

ಆನಂದಮ್ಮನಿಗೆ ಬಾಯಿ ಕೊನೆಯವರೆಗೂ ಬಂತು: “ಮಲ್ಲೀ ನೀನು ನನ್ನ ಮಗಳು. ಇದುವರೆಗೆ ನಾನು ನಿನಗೆ ಹೇಳಿರಲಿಲ್ಲ. ನಾನು ನಿನ್ನನ್ನು ಬೇಡವೆಂದು ಒತ್ತರಿಸಿದೆ. ದೈವ ಮತ್ತೆ ನಿನ್ನನ್ನು ಕೊಟ್ಟಿದೆ. ನನಗೆ ಕೊನೆಗಾಲ, ಕೊನೆಗಾಲದಲ್ಲಿ ನನ್ನ ಬಾಯಿಗೆ ಅಷ್ಟು ನೀರು ಬಿಟ್ಟು ಹೋಗುವೆಯಂತೆ. ಇರು” ಎನ್ನಬೇಕು ಎನ್ನಿಸಿತು.

ಎದೆ ಡವದಡ ಎಂದಿತು. ಕಣ್ಣಿನಲ್ಲಿ ನೀರು ತುಂಬಿತು: ಅವಳ ಬಾಯಲ್ಲಿ ಆ ಮಾತು ಬರಲಿಲ್ಲ. “ಅವಳು ನುಂಗಿದ ಬಾಯಿನೀರಿ ನೊಡನೆ ಆ ಮಾತು ಹೊಟ್ಟೆಯೊಳಕ್ಕೆ ಹೊರಟು ಹೋಯಿತು.

ಅದೆಲ್ಲ ಶಂಭುರಾಮಯ್ಯನಿಗೂ ತಿಳಿಯಿತು. ಅವನೂ ನಗು ನಗುತ್ತ ತನಗೆ ಬೇಕಾದುದನ್ನು ತಪ್ಪದೆ, ಎಳ್ಳಷ್ಟೂ ಲೋಪವಿಲ್ಲದೆ ಸಾಧಿಸುವ ಮಲ್ಲಿಯ ವಿಚಕ್ಷಣತೆಯನ್ನು ಬಲ್ಲನಾಗಿ ಅವನು ಏನೂ ಹೇಳಲಿಲ್ಲ.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...