Home / ಕಥೆ / ಕಾದಂಬರಿ / ಮಲ್ಲಿ – ೪೯

ಮಲ್ಲಿ – ೪೯

ಬರೆದವರು: Thomas Hardy / Tess of the d’Urbervilles

ನಾಯಕನು ಮಹಾರಾಜರನ್ನು ನೋಡುವುದಕ್ಕೆಂದು ಮೈಸೂರಿಗೆ ಹೋಗಿದ್ದಾನೆ. ಮಜ್ಜಿಗೆ ಹಳ್ಳಿಯ ಅರಮನೆಯಲ್ಲಿ ಗದ್ದಲವೋ ಗದ್ದಲ, ಆ ರಾತ್ರಿ ಮಲ್ಲಿಯು ಮಂಚದ ಮೇಲೆ ಮಲಗಬೇಕು ಎಂದು ರಾಣಿಯ ಆಸೆ. ಬುದ್ದಿಯವರಿಲ್ಲದೆ ತಾನು ಮಂಚದ ಮೇಲೆ ಮಲಗು ವುದಿಲ್ಲವೆಂದು ಅವಳ ಹಟ.

“ಹಾಗಾದರೆ ಎಲ್ಲಿ ಮಲಗುತ್ತೀಯೇ?”

“ಇಲ್ಲೇ ಒಂದು ಚಾಪೆಯ ಮೇಲೆ!”

“ಕೂಡದು. ನಾನೂ ನಿನ್ನ ಜೊತೆಗೇ ಬರುತ್ತೇನೆ.”

ಉಂಟಾ ಬುದ್ಧಿ, ತಮ್ಮ ಮೈ ಒತ್ತುತ್ತದೆ. ಕೂಡದು.”

“ನಿನಗೆ ಒತ್ತೋಕಿಲ್ಲವಾ?”

“ಬಾಳೇಹಣ್ಣಿನ ಗುಡಾಣದಲ್ಲಿ ಬೆಳೆದದ್ದು ಅಲ್ವಾ!”

“ಅಲ್ಲಾ, ಮಲ್ಲಮ್ಮಣ್ಕಿ ನೀನು ಹಿಂಗನ್ನೋದು ನ್ಯಾಯವಾ? ಜೊತೆ ಜೊತೆ ಎತ್ತುಗಳ ಹಂಗಲ್ಲವಾ ನಾವು. ನಿನಗೆ ಬೇಡವಾದ್ದು ನನಗೆ ಬೇಕಾದೀತಾ? ಬುಡು.?

“ಬುದ್ಧಿ, ತಾವು ಹಂಗನ್ನಬಾರದು. ತಾವು ಮಹಾಲಕ್ಷ್ಮಿ ಹಂಗೆ ದೊಡ್ಡ ಮನೆಯಲ್ಲಿ ಹುಟ್ಟಿ ಅರಮನೆ ಸೇರಿದವರು. ತಮ್ಮ ಮನಸ್ಸಿಗೆ ನೋವಾಗೋ ಹಂಗಿದ್ದರೆ, ಆಗಲಿ. ತಮ್ಮ ಪಾದದಲ್ಲಿ ಉರುಟು ಕೋತೀನಿ. ಆದರೂ ಬುದ್ದಿ, ಅಭ್ಯಾಸ ಆಗಲಿ, ಬಿಡಬಾರದಾ?”

ಅವಳ ಪ್ರಾರ್ಥನೆಯಲ್ಲಿ ಏನೋ ಗುರುತಿಸುವುದಕ್ಕೂ ಕಷ್ಟವಾದ ಭಾವವಿತ್ತು. ರಾಣಿಯು ಅದನ್ನು ಸಹಿಸಲಾರದೆ ಅವಳನ್ನು ಬಿಟ್ಟು ಎರಡು ಹೆಜ್ಜೆ ಹೋಗಿದ್ದವಳು ಒಂದಿರುಗಿ ಬಂದು ಮಾತೇ ಆಡದೆ ಅವಳ ನಡುವಿಗೆ ಕೈಹಾಕಿ ಕೆರೆದುಕೊಂಡು ಹೋಗಿ ಹಾಸುಗೆಯ ಮೇಲೆ ಮಲಗಿಸಿ ಕೊಂಡಳು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...