Home / ಕಥೆ / ಕಾದಂಬರಿ / ಮಲ್ಲಿ – ೪೯

ಮಲ್ಲಿ – ೪೯

ಬರೆದವರು: Thomas Hardy / Tess of the d’Urbervilles

ನಾಯಕನು ಮಹಾರಾಜರನ್ನು ನೋಡುವುದಕ್ಕೆಂದು ಮೈಸೂರಿಗೆ ಹೋಗಿದ್ದಾನೆ. ಮಜ್ಜಿಗೆ ಹಳ್ಳಿಯ ಅರಮನೆಯಲ್ಲಿ ಗದ್ದಲವೋ ಗದ್ದಲ, ಆ ರಾತ್ರಿ ಮಲ್ಲಿಯು ಮಂಚದ ಮೇಲೆ ಮಲಗಬೇಕು ಎಂದು ರಾಣಿಯ ಆಸೆ. ಬುದ್ದಿಯವರಿಲ್ಲದೆ ತಾನು ಮಂಚದ ಮೇಲೆ ಮಲಗು ವುದಿಲ್ಲವೆಂದು ಅವಳ ಹಟ.

“ಹಾಗಾದರೆ ಎಲ್ಲಿ ಮಲಗುತ್ತೀಯೇ?”

“ಇಲ್ಲೇ ಒಂದು ಚಾಪೆಯ ಮೇಲೆ!”

“ಕೂಡದು. ನಾನೂ ನಿನ್ನ ಜೊತೆಗೇ ಬರುತ್ತೇನೆ.”

ಉಂಟಾ ಬುದ್ಧಿ, ತಮ್ಮ ಮೈ ಒತ್ತುತ್ತದೆ. ಕೂಡದು.”

“ನಿನಗೆ ಒತ್ತೋಕಿಲ್ಲವಾ?”

“ಬಾಳೇಹಣ್ಣಿನ ಗುಡಾಣದಲ್ಲಿ ಬೆಳೆದದ್ದು ಅಲ್ವಾ!”

“ಅಲ್ಲಾ, ಮಲ್ಲಮ್ಮಣ್ಕಿ ನೀನು ಹಿಂಗನ್ನೋದು ನ್ಯಾಯವಾ? ಜೊತೆ ಜೊತೆ ಎತ್ತುಗಳ ಹಂಗಲ್ಲವಾ ನಾವು. ನಿನಗೆ ಬೇಡವಾದ್ದು ನನಗೆ ಬೇಕಾದೀತಾ? ಬುಡು.?

“ಬುದ್ಧಿ, ತಾವು ಹಂಗನ್ನಬಾರದು. ತಾವು ಮಹಾಲಕ್ಷ್ಮಿ ಹಂಗೆ ದೊಡ್ಡ ಮನೆಯಲ್ಲಿ ಹುಟ್ಟಿ ಅರಮನೆ ಸೇರಿದವರು. ತಮ್ಮ ಮನಸ್ಸಿಗೆ ನೋವಾಗೋ ಹಂಗಿದ್ದರೆ, ಆಗಲಿ. ತಮ್ಮ ಪಾದದಲ್ಲಿ ಉರುಟು ಕೋತೀನಿ. ಆದರೂ ಬುದ್ದಿ, ಅಭ್ಯಾಸ ಆಗಲಿ, ಬಿಡಬಾರದಾ?”

ಅವಳ ಪ್ರಾರ್ಥನೆಯಲ್ಲಿ ಏನೋ ಗುರುತಿಸುವುದಕ್ಕೂ ಕಷ್ಟವಾದ ಭಾವವಿತ್ತು. ರಾಣಿಯು ಅದನ್ನು ಸಹಿಸಲಾರದೆ ಅವಳನ್ನು ಬಿಟ್ಟು ಎರಡು ಹೆಜ್ಜೆ ಹೋಗಿದ್ದವಳು ಒಂದಿರುಗಿ ಬಂದು ಮಾತೇ ಆಡದೆ ಅವಳ ನಡುವಿಗೆ ಕೈಹಾಕಿ ಕೆರೆದುಕೊಂಡು ಹೋಗಿ ಹಾಸುಗೆಯ ಮೇಲೆ ಮಲಗಿಸಿ ಕೊಂಡಳು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...