Home / ಲೇಖನ / ವಿಜ್ಞಾನ / ಕೃತಕ ಮಾನವ ಸೃಷ್ಟಿ

ಕೃತಕ ಮಾನವ ಸೃಷ್ಟಿ

ವಿಜ್ಞಾನಿಗಳು ಇಷ್ಟರಲ್ಲಿಯೇ ಮಾನವನ ಜಿನ್ಸ್‌ಗಳನ್ನು ಅಧ್ಯಯನ ಮಾಡಿ ಅವುಗಳ ಒಂದು ಬೃಹತ್ ಸಂಗ್ರಹಾಲಯವನ್ನು ನಿರ್ಮಿಸಬಹುದು. ಈ ಜಿನ್ಸ್ ಸಂಗ್ರಹಾಲಯದಲ್ಲಿ ಪ್ರತಿಯೊಂದು ಜಿನ್ಸ್‌ಗಳ ವಿವರಗಳಿದ್ದು ಯಾವ ಜಿನ್ಸ್ ಯಾವ ಕಾರ್‍ಯಕ್ಕೆ ಯೋಗ್ಯ? ಜೀವಿಗಳಲ್ಲಿ ಕಾಣುವ ನ್ಯೂನ್ಯತೆಗಳಿಗೆ ಕಾರಣವೇನು? ಇದೇ ಮೊದಲಾದ ಪ್ರಶ್ನೆಗಳಿಗೆ ಸಮಂಜಸ ಉತ್ತರವನ್ನು ನೀಡಲು ಸಾಧ್ಯವಾಗಲೂ ಬಹುದು. ಈ ಬೃಹತ್ ಜಿನ್ಸ್ ವಿಶ್ವಕೋಶ ನಿರ್‍ಮಾಣವಾದ ನಂತರ ಕೃತಕ ಮಾನವನ ಸೃಷ್ಟಿ ಸುಲಭ ಸಾಧ್ಯವೆಂದು ವಿಜ್ಞಾನಿಗಳು ಹೇಳುತ್ತಾರೆ.

ಮಾನವನನ್ನು ಪೀಡಿಸುವ ಎಷ್ಟೋ ರೋಗಗಳು ಅನುವಂಶೀಯವಾಗಿ ತಂದೆ ತಾಯಿಗಳಿಂದ, ಅವರ ಸಂತತಿಯಿಂದ ಬರಬಹುದು. ಈ ರೋಗಗಳಿಗೆ ಅವುಗಳಲ್ಲಿರುವ ಜಿನ್ಸ್‌ಗಳಲ್ಲಿನ ನ್ಯೂನ್ಯತೆಗಳೇ ಕಾರಣ. ನ್ಯೂನ್ಯತೆಗಳುಳ್ಳ ರೋಗಕಾರಕ ಜಿನ್ಸ್‌ಗಳನ್ನು ಶರೀರದಿಂದ ಹೊರಹಾಕಲಾಗದಿದ್ದರೂ ಅದರ ಬದಲು ಸುಧಾರಿತ ಜಿನ್ಸ್‌ಗಳನ್ನು ಬಳಸಿ ನ್ಯೂನ್ಯತೆಗಳನ್ನು ಸರಿಪಡಿಸಲು ಸಾಧ್ಯ. ಆದರೆ ಇದು ಇಷ್ಟರಲ್ಲಿಯೇ ಕಾರ್ಯಸಾಧ್ಯವೇನು ಅಲ್ಲ. ವಿಜ್ಞಾನಿಗಳು ಮಾನವನ ಜಿನ್ಸ್‌ಗಳನ್ನು ಶರೀರದೊಳಕ್ಕೆ ಹೇಗೆ ಸೇರಿಸಬಹುದೆಂಬ ವಿಚಾರ ಇನ್ನೂ ತಿಳಿದಿಲ್ಲ ಮತ್ತು ಜೀವಕೋಶದೊಳಗೆ ಮೊದಲೇ ಬಿಡಾರ ಹೂಡಿರುವ ನ್ಯೂನ್ಯತೆ ಇರುವ ಜಿನ್ ಅನ್ನು ಅಲ್ಲಿಂದ ಹೇಗೆ ಉಚ್ಚಾಟನೆ ಮಾಡಬಹುದು ಎಂಬುವುದು ತಿಳಿದಿಲ್ಲ. ಇದೆಲ್ಲದರ ಅರಿವು ವಿಜ್ಞಾನಿಗಳಿಗಾದಾಗ ಜೀನ್ ಚುಚ್ಚು ಮದ್ದಿನಿಂದ ಬಯಸಿದ ಗುಣ ಲಕ್ಷಣಗಳನ್ನು ಸ್ವಭಾವಗಳನ್ನು ಬದಲಿಸಲು ಸಾಧ್ಯವಾಗಬಹುದು. ಕೃತಕ ಜೀನ್ ಸೃಷ್ಟಯಿಂದಾಗಿ ಈ ಕನಸುಗಳು ನನಸಾಗುವ ಕಾಲ ಇಷ್ಟರಲ್ಲಿಯೇ ಬರಬಹುದೆಂದು ಕೆಲವರು ನಿರೀಕ್ಷಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...