Home / ಲೇಖನ / ವಿಜ್ಞಾನ / ಕೃತಕ ಮಾನವ ಸೃಷ್ಟಿ

ಕೃತಕ ಮಾನವ ಸೃಷ್ಟಿ

ವಿಜ್ಞಾನಿಗಳು ಇಷ್ಟರಲ್ಲಿಯೇ ಮಾನವನ ಜಿನ್ಸ್‌ಗಳನ್ನು ಅಧ್ಯಯನ ಮಾಡಿ ಅವುಗಳ ಒಂದು ಬೃಹತ್ ಸಂಗ್ರಹಾಲಯವನ್ನು ನಿರ್ಮಿಸಬಹುದು. ಈ ಜಿನ್ಸ್ ಸಂಗ್ರಹಾಲಯದಲ್ಲಿ ಪ್ರತಿಯೊಂದು ಜಿನ್ಸ್‌ಗಳ ವಿವರಗಳಿದ್ದು ಯಾವ ಜಿನ್ಸ್ ಯಾವ ಕಾರ್‍ಯಕ್ಕೆ ಯೋಗ್ಯ? ಜೀವಿಗಳಲ್ಲಿ ಕಾಣುವ ನ್ಯೂನ್ಯತೆಗಳಿಗೆ ಕಾರಣವೇನು? ಇದೇ ಮೊದಲಾದ ಪ್ರಶ್ನೆಗಳಿಗೆ ಸಮಂಜಸ ಉತ್ತರವನ್ನು ನೀಡಲು ಸಾಧ್ಯವಾಗಲೂ ಬಹುದು. ಈ ಬೃಹತ್ ಜಿನ್ಸ್ ವಿಶ್ವಕೋಶ ನಿರ್‍ಮಾಣವಾದ ನಂತರ ಕೃತಕ ಮಾನವನ ಸೃಷ್ಟಿ ಸುಲಭ ಸಾಧ್ಯವೆಂದು ವಿಜ್ಞಾನಿಗಳು ಹೇಳುತ್ತಾರೆ.

ಮಾನವನನ್ನು ಪೀಡಿಸುವ ಎಷ್ಟೋ ರೋಗಗಳು ಅನುವಂಶೀಯವಾಗಿ ತಂದೆ ತಾಯಿಗಳಿಂದ, ಅವರ ಸಂತತಿಯಿಂದ ಬರಬಹುದು. ಈ ರೋಗಗಳಿಗೆ ಅವುಗಳಲ್ಲಿರುವ ಜಿನ್ಸ್‌ಗಳಲ್ಲಿನ ನ್ಯೂನ್ಯತೆಗಳೇ ಕಾರಣ. ನ್ಯೂನ್ಯತೆಗಳುಳ್ಳ ರೋಗಕಾರಕ ಜಿನ್ಸ್‌ಗಳನ್ನು ಶರೀರದಿಂದ ಹೊರಹಾಕಲಾಗದಿದ್ದರೂ ಅದರ ಬದಲು ಸುಧಾರಿತ ಜಿನ್ಸ್‌ಗಳನ್ನು ಬಳಸಿ ನ್ಯೂನ್ಯತೆಗಳನ್ನು ಸರಿಪಡಿಸಲು ಸಾಧ್ಯ. ಆದರೆ ಇದು ಇಷ್ಟರಲ್ಲಿಯೇ ಕಾರ್ಯಸಾಧ್ಯವೇನು ಅಲ್ಲ. ವಿಜ್ಞಾನಿಗಳು ಮಾನವನ ಜಿನ್ಸ್‌ಗಳನ್ನು ಶರೀರದೊಳಕ್ಕೆ ಹೇಗೆ ಸೇರಿಸಬಹುದೆಂಬ ವಿಚಾರ ಇನ್ನೂ ತಿಳಿದಿಲ್ಲ ಮತ್ತು ಜೀವಕೋಶದೊಳಗೆ ಮೊದಲೇ ಬಿಡಾರ ಹೂಡಿರುವ ನ್ಯೂನ್ಯತೆ ಇರುವ ಜಿನ್ ಅನ್ನು ಅಲ್ಲಿಂದ ಹೇಗೆ ಉಚ್ಚಾಟನೆ ಮಾಡಬಹುದು ಎಂಬುವುದು ತಿಳಿದಿಲ್ಲ. ಇದೆಲ್ಲದರ ಅರಿವು ವಿಜ್ಞಾನಿಗಳಿಗಾದಾಗ ಜೀನ್ ಚುಚ್ಚು ಮದ್ದಿನಿಂದ ಬಯಸಿದ ಗುಣ ಲಕ್ಷಣಗಳನ್ನು ಸ್ವಭಾವಗಳನ್ನು ಬದಲಿಸಲು ಸಾಧ್ಯವಾಗಬಹುದು. ಕೃತಕ ಜೀನ್ ಸೃಷ್ಟಯಿಂದಾಗಿ ಈ ಕನಸುಗಳು ನನಸಾಗುವ ಕಾಲ ಇಷ್ಟರಲ್ಲಿಯೇ ಬರಬಹುದೆಂದು ಕೆಲವರು ನಿರೀಕ್ಷಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...