Home / ಲೇಖನ / ವಿಜ್ಞಾನ / ಕೃತಕ ಮಾನವ ಸೃಷ್ಟಿ

ಕೃತಕ ಮಾನವ ಸೃಷ್ಟಿ

ವಿಜ್ಞಾನಿಗಳು ಇಷ್ಟರಲ್ಲಿಯೇ ಮಾನವನ ಜಿನ್ಸ್‌ಗಳನ್ನು ಅಧ್ಯಯನ ಮಾಡಿ ಅವುಗಳ ಒಂದು ಬೃಹತ್ ಸಂಗ್ರಹಾಲಯವನ್ನು ನಿರ್ಮಿಸಬಹುದು. ಈ ಜಿನ್ಸ್ ಸಂಗ್ರಹಾಲಯದಲ್ಲಿ ಪ್ರತಿಯೊಂದು ಜಿನ್ಸ್‌ಗಳ ವಿವರಗಳಿದ್ದು ಯಾವ ಜಿನ್ಸ್ ಯಾವ ಕಾರ್‍ಯಕ್ಕೆ ಯೋಗ್ಯ? ಜೀವಿಗಳಲ್ಲಿ ಕಾಣುವ ನ್ಯೂನ್ಯತೆಗಳಿಗೆ ಕಾರಣವೇನು? ಇದೇ ಮೊದಲಾದ ಪ್ರಶ್ನೆಗಳಿಗೆ ಸಮಂಜಸ ಉತ್ತರವನ್ನು ನೀಡಲು ಸಾಧ್ಯವಾಗಲೂ ಬಹುದು. ಈ ಬೃಹತ್ ಜಿನ್ಸ್ ವಿಶ್ವಕೋಶ ನಿರ್‍ಮಾಣವಾದ ನಂತರ ಕೃತಕ ಮಾನವನ ಸೃಷ್ಟಿ ಸುಲಭ ಸಾಧ್ಯವೆಂದು ವಿಜ್ಞಾನಿಗಳು ಹೇಳುತ್ತಾರೆ.

ಮಾನವನನ್ನು ಪೀಡಿಸುವ ಎಷ್ಟೋ ರೋಗಗಳು ಅನುವಂಶೀಯವಾಗಿ ತಂದೆ ತಾಯಿಗಳಿಂದ, ಅವರ ಸಂತತಿಯಿಂದ ಬರಬಹುದು. ಈ ರೋಗಗಳಿಗೆ ಅವುಗಳಲ್ಲಿರುವ ಜಿನ್ಸ್‌ಗಳಲ್ಲಿನ ನ್ಯೂನ್ಯತೆಗಳೇ ಕಾರಣ. ನ್ಯೂನ್ಯತೆಗಳುಳ್ಳ ರೋಗಕಾರಕ ಜಿನ್ಸ್‌ಗಳನ್ನು ಶರೀರದಿಂದ ಹೊರಹಾಕಲಾಗದಿದ್ದರೂ ಅದರ ಬದಲು ಸುಧಾರಿತ ಜಿನ್ಸ್‌ಗಳನ್ನು ಬಳಸಿ ನ್ಯೂನ್ಯತೆಗಳನ್ನು ಸರಿಪಡಿಸಲು ಸಾಧ್ಯ. ಆದರೆ ಇದು ಇಷ್ಟರಲ್ಲಿಯೇ ಕಾರ್ಯಸಾಧ್ಯವೇನು ಅಲ್ಲ. ವಿಜ್ಞಾನಿಗಳು ಮಾನವನ ಜಿನ್ಸ್‌ಗಳನ್ನು ಶರೀರದೊಳಕ್ಕೆ ಹೇಗೆ ಸೇರಿಸಬಹುದೆಂಬ ವಿಚಾರ ಇನ್ನೂ ತಿಳಿದಿಲ್ಲ ಮತ್ತು ಜೀವಕೋಶದೊಳಗೆ ಮೊದಲೇ ಬಿಡಾರ ಹೂಡಿರುವ ನ್ಯೂನ್ಯತೆ ಇರುವ ಜಿನ್ ಅನ್ನು ಅಲ್ಲಿಂದ ಹೇಗೆ ಉಚ್ಚಾಟನೆ ಮಾಡಬಹುದು ಎಂಬುವುದು ತಿಳಿದಿಲ್ಲ. ಇದೆಲ್ಲದರ ಅರಿವು ವಿಜ್ಞಾನಿಗಳಿಗಾದಾಗ ಜೀನ್ ಚುಚ್ಚು ಮದ್ದಿನಿಂದ ಬಯಸಿದ ಗುಣ ಲಕ್ಷಣಗಳನ್ನು ಸ್ವಭಾವಗಳನ್ನು ಬದಲಿಸಲು ಸಾಧ್ಯವಾಗಬಹುದು. ಕೃತಕ ಜೀನ್ ಸೃಷ್ಟಯಿಂದಾಗಿ ಈ ಕನಸುಗಳು ನನಸಾಗುವ ಕಾಲ ಇಷ್ಟರಲ್ಲಿಯೇ ಬರಬಹುದೆಂದು ಕೆಲವರು ನಿರೀಕ್ಷಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...