Home / ಲೇಖನ / ವಿಜ್ಞಾನ / ಕೃತಕ ಮಾನವ ಸೃಷ್ಟಿ

ಕೃತಕ ಮಾನವ ಸೃಷ್ಟಿ

ವಿಜ್ಞಾನಿಗಳು ಇಷ್ಟರಲ್ಲಿಯೇ ಮಾನವನ ಜಿನ್ಸ್‌ಗಳನ್ನು ಅಧ್ಯಯನ ಮಾಡಿ ಅವುಗಳ ಒಂದು ಬೃಹತ್ ಸಂಗ್ರಹಾಲಯವನ್ನು ನಿರ್ಮಿಸಬಹುದು. ಈ ಜಿನ್ಸ್ ಸಂಗ್ರಹಾಲಯದಲ್ಲಿ ಪ್ರತಿಯೊಂದು ಜಿನ್ಸ್‌ಗಳ ವಿವರಗಳಿದ್ದು ಯಾವ ಜಿನ್ಸ್ ಯಾವ ಕಾರ್‍ಯಕ್ಕೆ ಯೋಗ್ಯ? ಜೀವಿಗಳಲ್ಲಿ ಕಾಣುವ ನ್ಯೂನ್ಯತೆಗಳಿಗೆ ಕಾರಣವೇನು? ಇದೇ ಮೊದಲಾದ ಪ್ರಶ್ನೆಗಳಿಗೆ ಸಮಂಜಸ ಉತ್ತರವನ್ನು ನೀಡಲು ಸಾಧ್ಯವಾಗಲೂ ಬಹುದು. ಈ ಬೃಹತ್ ಜಿನ್ಸ್ ವಿಶ್ವಕೋಶ ನಿರ್‍ಮಾಣವಾದ ನಂತರ ಕೃತಕ ಮಾನವನ ಸೃಷ್ಟಿ ಸುಲಭ ಸಾಧ್ಯವೆಂದು ವಿಜ್ಞಾನಿಗಳು ಹೇಳುತ್ತಾರೆ.

ಮಾನವನನ್ನು ಪೀಡಿಸುವ ಎಷ್ಟೋ ರೋಗಗಳು ಅನುವಂಶೀಯವಾಗಿ ತಂದೆ ತಾಯಿಗಳಿಂದ, ಅವರ ಸಂತತಿಯಿಂದ ಬರಬಹುದು. ಈ ರೋಗಗಳಿಗೆ ಅವುಗಳಲ್ಲಿರುವ ಜಿನ್ಸ್‌ಗಳಲ್ಲಿನ ನ್ಯೂನ್ಯತೆಗಳೇ ಕಾರಣ. ನ್ಯೂನ್ಯತೆಗಳುಳ್ಳ ರೋಗಕಾರಕ ಜಿನ್ಸ್‌ಗಳನ್ನು ಶರೀರದಿಂದ ಹೊರಹಾಕಲಾಗದಿದ್ದರೂ ಅದರ ಬದಲು ಸುಧಾರಿತ ಜಿನ್ಸ್‌ಗಳನ್ನು ಬಳಸಿ ನ್ಯೂನ್ಯತೆಗಳನ್ನು ಸರಿಪಡಿಸಲು ಸಾಧ್ಯ. ಆದರೆ ಇದು ಇಷ್ಟರಲ್ಲಿಯೇ ಕಾರ್ಯಸಾಧ್ಯವೇನು ಅಲ್ಲ. ವಿಜ್ಞಾನಿಗಳು ಮಾನವನ ಜಿನ್ಸ್‌ಗಳನ್ನು ಶರೀರದೊಳಕ್ಕೆ ಹೇಗೆ ಸೇರಿಸಬಹುದೆಂಬ ವಿಚಾರ ಇನ್ನೂ ತಿಳಿದಿಲ್ಲ ಮತ್ತು ಜೀವಕೋಶದೊಳಗೆ ಮೊದಲೇ ಬಿಡಾರ ಹೂಡಿರುವ ನ್ಯೂನ್ಯತೆ ಇರುವ ಜಿನ್ ಅನ್ನು ಅಲ್ಲಿಂದ ಹೇಗೆ ಉಚ್ಚಾಟನೆ ಮಾಡಬಹುದು ಎಂಬುವುದು ತಿಳಿದಿಲ್ಲ. ಇದೆಲ್ಲದರ ಅರಿವು ವಿಜ್ಞಾನಿಗಳಿಗಾದಾಗ ಜೀನ್ ಚುಚ್ಚು ಮದ್ದಿನಿಂದ ಬಯಸಿದ ಗುಣ ಲಕ್ಷಣಗಳನ್ನು ಸ್ವಭಾವಗಳನ್ನು ಬದಲಿಸಲು ಸಾಧ್ಯವಾಗಬಹುದು. ಕೃತಕ ಜೀನ್ ಸೃಷ್ಟಯಿಂದಾಗಿ ಈ ಕನಸುಗಳು ನನಸಾಗುವ ಕಾಲ ಇಷ್ಟರಲ್ಲಿಯೇ ಬರಬಹುದೆಂದು ಕೆಲವರು ನಿರೀಕ್ಷಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...