Home / ಲೇಖನ / ವಿಜ್ಞಾನ / ಅಂಗ ವೈಕಲ್ಯತೆಗಳಿಗೆ ವೈಜ್ಞಾನಿಕ ಕಾರಣಗಳು

ಅಂಗ ವೈಕಲ್ಯತೆಗಳಿಗೆ ವೈಜ್ಞಾನಿಕ ಕಾರಣಗಳು

ಇತ್ತೀಚೆಗೆ ಮನುಷ್ಯನಲ್ಲಿ ಉಂಟಾಗುವ ಅಂಗ ವೈಕಲ್ಯತೆಗಳ ಬಗೆಗೆ ಹಲವು ಶೋಧನೆಗಳು ನಡೆದಿದ್ದು ಕೆಲವು ಸತ್ಯಗಳು ಈ ರೀತಿ ಹೊರಬಿದ್ದಿವೆ.
೧. ಹೆಣ್ಣಿನ ಅಂಡಾಣುವು ಗಂಡಿನ ರೇತುಕಣವು ಹೊರಬಿದ್ದ ಮೇಲೆ ಹೊತ್ತುಕಳೆದಂತೆಲ್ಲ ಅವುಗಳ ಚೈತನ್ಯ ಕುಂದುತ್ತ ಬರುತ್ತದೆ. ಸಾಕಷ್ಟು ಚೈತನ್ಯವಿಲ್ಲದಂತಹ ಇಂಥವು ಒಂದುಗೂಡಿದರೆ ಹುಟ್ಟುವ ಪಿಂಡ ಸರಿಯಾಗಿ ಬೆಳೆಯದೇ ದುರ್ಬಲವಾಗುವದು ಇಲ್ಲವೇ ವಿಕಲಾಂಗವಾಗುವದು.

೨. ಗರ್‍ಭವತಿಯು ಔಷಧಿಯ ಪೂರ್‍ವಾಪರ ತಿಳಿಯದೇ ಸೇವಿಸುವದರಿಂದ ವಿಕಲಾಂಗ ಶಿಶುವಿಗೆ ಜನ್ಮಕೊಡುವ ಸಂಬಂಧಗಳು ಹೆಚ್ಚು.

೩. ಗರ್‍ಭಿಣಿ ಸ್ತ್ರೀಯ ಒಳಾಂಗಣವನ್ನು ಪರೀಕ್ಷಿಸುವ ಸಲುವಾಗಿ ಕ್ಷ-ಕಿರಣ ಸಹಾಯದಿಂದ ಛಾಯಾಚಿತ್ರ ತೆಗೆಯಬೇಕಾಗಬಹುದು. ಬೆಳೆಯುವ ಭ್ರೂಣದ ಮೇಲೆ ಈ ಕ್ಷ- ಕಿರಣಗಳು ಕೆಲವು ಸಲ ದುಷ್ಪರಿಣಾಮ ಬೀರಿ ವಿಕಲತೆನ್ನುಂಟು ಮಾಡಬಹುದು.

೪. ಗರ್‍ಭಧಾರಣೆಯ ಸಮಯದಲ್ಲಿ ಈ ವರ್ಣ ತಂತುಗಳ ಸಮ್ಮಿಲನ ಅಸ್ವಾಭಾವಿಕ ರೀತಿಯಲ್ಲಿ ಉಂಟಾದರೆ ಅಥವಾ ಪ್ರಕೃತಿಗೆ ವಿರುದ್ದವಾದ ಕ್ರಮದಲ್ಲಿ ಉಂಟಾದರೆ ವಿಕಲಾಂಗ ಶಿಶುಗಳು ಜನಿಸುವುದೆಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ.

೫. ವಿವಿಧ ಅಂಟುರೋಗಗಳಿಂದ ನರಳುತ್ತಿರುವ ಸ್ತ್ರೀಯು ವಿಕಲಾಂಗ ಶಿಶುಗಳಿಗೆ ಜನ್ಮ ನೀಡುವ ಸಂಭವವಿದೆ. ಗರ್ಭಿಣಿಸ್ತ್ರೀಯು ಕೋಪಿಷ್ಟೆಯಾದರೆ ಅವಳ ಮಾನಸಿಕ ಒತ್ತಡ ಹಾಗೂ ರಕ್ತದ ಒತ್ತಡಗಳು ಜನಿಸುವ ಶಿಶುವಿನ ಮೇಲೆ ಭೀಕರ ಪರಿಣಾಮ ಬೀರಬಲ್ಲವು. ಸ್ತ್ರೀಯು ನಿರ್ನಾಳ ಗ್ರಂಥೀಗಳಲ್ಲಿ ಪ್ರಮುಖವಾದ ಪಿಟ್ಯುಟರಿ ಗ್ರಂಥಿಯ ಸ್ರಾವದಲ್ಲಿನ ಹೆಚ್ಚಳ ಅಥವಾ ಇಳುವರಿಯಿಂದಾಗಿ ಉದ್ದನೆಯ ಅಥವಾ ತೆಳ್ಳನೆಯ ಶಿಶುವಿಗೆ ಜನ್ಮನೀಡಬಹುದು.

೬. ಕೂಡಿದ ಅಂಡಾಣುಗಳು (ಯುಗ್ಮ ಜೀವಕಣಗಳು) ಬೇರೆ ಬೇರೆಯಾಗಿದ್ದರೆ ಅವು ಅವಳಿ ಜವಳಿಯಾಗುತ್ತವೆ.

೭. ಅನೇಕ ಬಾರಿ ಗರ್ಭದಲ್ಲಿ ಕೂಡಿದ ಯುಗ್ಮಜೀವಕಣಗಳು ಕೋಶ ವಿಭಜನೆಯ ವಿವಿಧ ಹಂತಗಳಲ್ಲಿ ಬೇರ್ಪಡದೆ ಜೊತೆಗೂಡಿ ಇರುತ್ತವೆ. ಇದರಿಂದ ಹುಟ್ಟುವ ಶಿಶುಗಳಲ್ಲಿ ಸಾಮಾನ್ಯವಾಗಿ ತಲೆ, ಹೊಟ್ಟೆ, ಬೆನ್ನು ಮುಂತಾದ ಅಂಗಗಳು ಒಂದುಗೂಡುವ ಸಂಭವವಿದೆ.

೮. ಕಡುಬಡ ಜನರು ಆರೋಗ್ಯವಿಲ್ಲದೇ, ಜೀವಸತ್ವಗಳ ಆಹಾರಗಳ ಕೊರತೆ ಇದ್ದವರು ಪೌಷ್ಟಕಾಂಶಗಳ ಕೊರತೆ ಇದ್ದವರೂ ಜೀವ ಧಾತುಗಳ ಕೊರತೆ ಇದ್ದವರು ಇಂದಿನ ವಿಷಕಾರ ಮದ್ದುಗಳ ಗೊತ್ತು ಗುರಿ ಇಲ್ಲದ ಸೇವನೆ ಮಾಡುವ ಗಂಡ ಹೆಂಡಿರಿಂದ ಹುಟ್ಟುವ ಮಕ್ಕಳು ವಿಕಲಾಂಗವಾಗುತ್ತವೆ.

೯. ಇಂಥಹ ವೈಕಲ್ಯತೆಗಳಿಗೆ ಪ್ರಮುಖ ಕಾರಣಗಳನ್ನೂ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅನುವಂಶೀಯ ಮತ್ತು ಪರಿಸರದ ಪರಿಣಾಮಗಳು, ಕೆಲವು ವೈಕಲ್ಯತೆಗಳು ತಂದೆ, ಅಥವಾ ತಾಯಿಯಿಂದ ಕಾರಣವಾಗಿರಬಹುದು. ಮಗುವು ಕೈ ಬೆರಳು ಇಲ್ಲವೇ ಕಾಲುಬೆರಳಗಳನ್ನು ಮಾಮೂಲಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪಡೆದಿರುವುದು ಸಂತತಿಯಿಂದ ಸಂತತಿಗೆ ಸಾಗಣೆಯಾಗಬಹುದು.

೧೦. ಅಂಗವೈಕಲ್ಯತೆಗೆ ಇನ್ನೊಂದು ಕಾರಣ ಸುತ್ತಲಿನ ಪರಿಸರ ಪರಮಾಣು ವಿಕಿರಣಗಳ ಪರಿಣಾಮಗಳು ಭ್ರೂಣದ ಮೇಲೆ ಬಹಳ ಪ್ರಭಾವ ಬೀರುವವು. ಅಂಥಹ ಪ್ರಭಾವವನ್ನು ಈಗಲೂ ನಾವು ಜಪಾನ್‌ನಲ್ಲಿ ಕಾಣಬಹುದು. ಮನುಷ್ಯ ಇಂದು ಕೃತಕವಾಗಿ ನಿರ್ಮಿಸುತ್ತಿರುವ ವಿಕಿರಣ ಕ್ರಿಯಾಶಕ್ತಿಯು ಸುತ್ತಲಿನ ಪರಿಸರವನ್ನು ಮಲೀನಗೊಳಿಸಿ ಭ್ರೂಣಗಳ ವಿಕಸನದ ಮೇಲೆ ದುಷ್ಪರಿಣಾಮ ಬೀರುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...