Home / ಲೇಖನ / ವಿಜ್ಞಾನ / ಸಮುದ್ರದ ನೀರನ್ನು ಸಿಹಿಗೊಳಿಸಬಹುದು

ಸಮುದ್ರದ ನೀರನ್ನು ಸಿಹಿಗೊಳಿಸಬಹುದು

ಸಮುದ್ರ ನೀರಿನಿಂದ ತುಂಬಿದ್ದರು ಅದು ಉಪ್ಪು ನೀರಾದ್ದರಿಂದ ಯಾರೂ ಕುಡಿಯಲಾರರು. ನಮ್ಮ ಪೃಥ್ವಿಯನ್ನು ಆವರಿಸಿರುವ ನೀರಿನಲ್ಲಿ ಶೇ. ೯೭ ರಷ್ಟು ಭಾಗ ಸಾಗರಗಳಿಂದಲೇ ತುಂಬಿದೆ ಶೇ. ೨ ರಷ್ಟು ಮಾತ್ರನೀರು ದ್ರವ ಪ್ರದೇಶದಲ್ಲಿ ಮಂಜಿನ ಟೋಪಿಗಳಂತೆ ನಿಂತಿದೆ. ಉಳಿದ ಶೇ. ಒಂದು ಭಾಗ ಮಾತ್ರ ಕುಡಿಯಲು ಯೋಗ್ಯವಾಗಿದೆ. ಆದಾಗ್ಯೂ ಈ ಒಂದು ಪರ್ಸಂಟು ನೀರಿನಲ್ಲೂ ಹಲವು ಭಾಗ ಭೂಗರ್ಭದಲ್ಲಿ ಸೇರಿರುವುದರಿಂದ ನಾವು ಉಪಯೋಗಿಸುವುದು ಕೇವಲ ೦.೬ ಭಾಗ ಮಾತ್ರವೆಂದರೆ ಆಶ್ಚರ್ಯವೇ? ಶೇ. ೯೭ ರಷ್ಟು ವ್ಯಾಪಿಸಿರುವ ಸಮುದ್ರದ ನೀರನ್ನು ಸಿಹಿಗೊಳಿಸಿ ಉಪಯೋಗಿಸುವುದು ಹೇಗೆ? ಸಾಗರ ಜಲದಿಂದ ಉಪ್ಪನ್ನು ಬೇರ್ಪಡಿಸುವುದು ಭೌತಶಾಸ್ತ್ರ, ರಸಾಯನಶಾಸ್ತ್ರ ಜೀವಶಾಸ್ತ್ರ, ಮತ್ತು ಅರ್ಥಶಾಸ್ತ್ರಗಳ ಮೆಧಾವಂತರು ಒಟ್ಟಿಗೆ ಕುಳಿತು ಪ್ರಯತ್ನಿಸಿದರೆ ಈ ಉಪ್ಪು ನೀರು ಸಿಹಿಯಾಗಬಹುದು. ನಿರಂತರ ಸಂಶೋಧನೆಗಳ ಫಲವಾಗಿ ಸಮುದ್ರದಿಂದ ಕುಡಿಯುವ ನೀರನ್ನು ತಯಾರಿಸುವ ಹಲವು ವಿಧಾನಗಳು ಬೆಳಕಿಗೆ ಬಂದಿವೆ. ಅವು ಈಗ ಅಚ್ಚರಿಯಲ್ಲಿಯೂ ಇವೆ. ನಿಲವರ್ಣೀಕರಣ ವಿಧಾನದಲ್ಲಿ ಮುಖ್ಯವಾಗಿ ದ್ರಾವಣದಿಂದ (ಉಪ್ಪು ನೀರಿನಿಂದ) ಶುದ್ಧನೀರನ್ನು ಬೇರ್‍ಪಡಿಸುವ ಮತ್ತು ದ್ರಾವಣದಿಂದ ಲವಣಗಳನ್ನು ಬೇರ್ಪಡಿಸುವ ವಿಧಾನಗಳೇ ಪ್ರಧಾನವಾಗಿದೆ. ಭಟ್ಟಿ ಇಳಿಸುವಿಕೆ ಅಥವಾ ಆವಿ ಗೊಳಿಸುವಿಕೆ, ಹೆಪ್ಪುಗಟ್ಟಿಸುವಿಕೆ ಮತ್ತು ಸೌರ ಶಕ್ತಿಯಿಂದ ಆವಿಗೊಳಿಸುವಿಕೆ ಇವು ಮೊದಲನೆ ವರ್ಗಕ್ಕೆ ಸೇರಿದ ಮುಖ್ಯವಿಧಾನಗಳು. ದ್ರಾವಣದಿಂದ ಲವಣಗಳನ್ನು ಬೇರ್ಪಡಿಸುವ ವಿಧಾನಗಳಲಿ ಪ್ರಮುಖವಾದುದು ವಿದ್ಯುತ್‌ಶಕ್ತಿಯ ಸಹಾಯದಿಂದ ನಡೆಸುವ ಪಾರ ಪೃಥಕ್ಕ್ರರಣ (ಎಲೆಕ್ಟ್ರೋಡಯಾಲಿಸಿಸ್)

ಭಟ್ಟಿ ಇಳಿಸುವಿಕೆ : ಸಮುದ್ರದ ನೀರನ್ನು ಒಂದು ಪಾತ್ರೆಯೊಳಗಿಟ್ಟು (ಬಾಯ್ಲರ್) ಕುದಿಸಿದರೆ ಆವಿಯು ಮೇಲೇರಿ ಅಡಿಯಲ್ಲಿ ಲವಣಗಳು ಉಳಿಯುತ್ತವೆ. ಕುಡಿಯುವ ನೀರಿನಿಂದೆದ್ದ ಆವಿಯನ್ನು ತಂಪು ಮಾಡುವುದರಿಂದ ಕುಡಿಯಲು ಯೋಗ್ಯವಾದ ಶುದ್ದನೀರು ದೊರೆಯುತ್ತದೆ.

ಸೂರ್ಯನ ಶಕ್ತಿಯಿಂದ: ಸಮುದ್ರದ ನೀರನ್ನು ಕುಡಿಯುವ ನೀರಾಗಿ ಪರಿವರ್ತಿಸಲು ಸೌರಶಕ್ತಿಯನ್ನು ಉಪಯೋಗಿಸಬಹುದು. ಇದಕ್ಕೆ ಉರುವಲು ಖರ್ಚು ಇಲ್ಲ. ವಿದ್ಯುತ್ ಶಕ್ತಿಯೂ ಬೇಕಿಲ್ಲ ಸೂರ್ಯನ ಬೆಳಕನ್ನು ಹೀರುವಂತೆ ಕಪ್ಪು ಬಣ್ಣವನ್ನು ಸಮುದ್ರದ ನೀರಿನಿಂದ ತುಂಬಿದ ಪಾತ್ರೆಯ ತಳಭಾಗಕ್ಕೆ ಲೇಪಿಸಿ ಆ ಪಾತ್ರೆಯನ್ನು ಶಾಖನಿರೊಧಕ ಕವಚದಲ್ಲಿ ಕೂಡಿಸಬೇಕು. ಇದರ ಮುಚ್ಚಳ ಗಾಜಿನದಿದ್ದು ಓಲುವಂತೆ ಕೂಡಿಸಲಾಗುತ್ತದೆ. ಸೂರ್ಯನ ಶಾಖದ ಪರಿಣಾಮದಿಂದ ಉತ್ಪತ್ತಿಯಾಗುವ ನೀರಿನ ಆವಿಯು ಮೇಲೆರುತ್ತಿದ್ದಂತೆ ಇಳಿಜಾರಿನಂತಿದ್ದ ಗಾಜಿನ ಮುಚ್ಚಿಳದಿಂದ ತಡೆಯಲ್ಪಟ್ಟು ನೀರಿನ ಹನಿಗಳಾಗಿ ಹರಿದು ಅಡಿಯಲ್ಲಿಟ್ಟಿರುವ ವಿಶೇಷ ಪಾತ್ರೆಯಲ್ಲಿ ಶೇಖರವಾಗುತ್ತದೆ. ಈ ವಿಧಾನದ ಮುಖ್ಯ ಅನಾನುಕೂಲವೆನೆಂದರೆ ಇದು ಪ್ರಕೃತಿ ನಿಯಂತ್ರಿತವಾದುದು. ಸೂರ್ಯನ ಬೆಳಕಿದ್ದಾಗ ಈ ವಿಧಾನ ಕಾರ್ಯ ಸಾಧ್ಯ.

ಹೆಪ್ಪುಗಟಿಸುವಿಕೆ : ಸಮುದ್ರದ ನೀರನ್ನು ಹೆಪ್ಪುಗಟ್ಟಿಸುವುದರಿಂದ ಲವಣ ರಹಿತ ಮಂಜಿನ ಹರಳುಗಳು ಲವಣಗಳಿಂದ ಬೇರೆಯುತ್ತವೆ. ಕೊಂಚವೇ ಶಾಖವನ್ನು ಉಪಯೋಗಿಸಿದರೆ ಸಾಕು. ಸಮುದ್ರದ ನೀರು ಮಂಜುಗಡ್ಡೆಯಾಗುತ್ತದೆ. ಈ ಮಂಜುಗಡ್ಡೆಯನ್ನು ಮಾಡಿ ಕರಗಿಸಿದರೆ ಒಳ್ಳೆಯ ಕುಡಿಯುವ ನೀರು ಲಭಿಸುತ್ತದೆ.

ವಿದ್ಯುತ್ ಶಕ್ತಿ ಸಹಾಯದಿಂದ : ಅತಿಸೂಕ್ಷ್ಮವಾದ ಪೊರೆಯಂತಹ ಪದರುಗಳನ್ನು ರಾಸಾಯನಿಕವಾಗಿ ಸಿದ್ಧಗೊಳಿಸಿ ಅದರ ಮೂಲಕ ಸಮುದ್ರದ ನೀರನ್ನು ಹಾಯಿಸಿ ಒಳ್ಳೆಯ ನೀರನ್ನು ಪಡೆಯಬಹುದು. ಈ ವಿಧಾನಕ್ಕೆ “ಪಾರಪೃಧಕ್ಕರಣ” ಎಂದು ಹೆಸರು. ಪೊರೆಗಳ ಮೂಲಕ ಸಮುದ್ರದ ನೀರನ್ನು ಪಂಪ್‍ಮಾಡಿ ವಿದ್ಯುತ್ತನ್ನು ಹರಿಸುವುದರಿಂದ ಅವುಗಳ ಒಂದು ಪಕ್ಕಕ್ಕೆ ಲವಣಾಂಶರಹಿತ ಕುಡಿಯುವ ನೀರು, ಮತ್ತೊಂದು ಪಕ್ಕಕ್ಕೆ ಲವಣಗಳು ಶೇಖರವಾಗುತ್ತವೆ. ಇದಕ್ಕೆ ಕಾರಣ ಲವಣಗಳನ್ನು ವಿದ್ಯುತ್ತು ಆಕರ್ಷಿಸುವುದೇ ಆಗಿದೆ. ಈ ಪೂರೆಗಳು ಆಯಾಣು ವಿನಿಮಯ ರಾಳಗಳಂತೆ ಕೆಲಸ ಮಾಡುತ್ತವೆ. ಈ ವಿಧಾನವು ಇನ್ನು ಪರಿಶೋಧನೆಯ ಘಟ್ಟದಲ್ಲಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...