Home / ಕಥೆ / ಕಿರು ಕಥೆ / ಹಿತ್ತಾಳೆ ಕಿವಿ

ಹಿತ್ತಾಳೆ ಕಿವಿ

ಬಿಜ್ಜಳ ಮಹಾರಾಜರ ಬಳಿ ಅಣ್ಣ ಬಸವಣ್ಣನವರು ಮಹಾ ಮಂತ್ರಿಯಾದ ಹೊಸದರಲ್ಲಿ ಕಲ್ಯಾಣ ನಗರಿಯಲ್ಲಿದ್ದ ಚಾಡಿ ಕೋರರಾದ ಮಲ್ಲಪ್ಪ ಶೆಟ್ಟಿ ಕೊಂಡಿ ಮಂಚಣ್ಣ ಮುಂತಾದವರೆಲ್ಲ ಸೇರಿಕೊಂಡು ಒಮ್ಮೆ ಅಣ್ಣ ಬಸವಣ್ಣನವರು ಏಕಾಂತವಾಗಿದ್ದಾಗ ಅಲ್ಲಿಗೆ ಬಂದರು.

‘ಬಿಜ್ಜಳ ಮಹಾರಾಜರು ನಿಮ್ಮ ಬಗ್ಗೆ ಮೊನ್ನೆ ದಿನ ಎಲ್ಲರ ಎದುರಿಗೆ ನಿಮ್ಮನ್ನು ಕೇವಲವಾಗಿ ನಿಂದಿಸಿದರು!’ ಎಂದು ಬಂದವರು ಪೀಠಿಕೆ ಹಾಕಿ ಮಾತಿಗೆ ಮಾತು ಪೋಣಿಸುತ್ತಾ ಕುಳಿತರು.

“ನೀವು ಬಿಜ್ಜಳ ಮಹಾರಾಜರ ಮಾತುಗಳನ್ನು ಸತ್ಯವೆಂದು ನಂಬುವಿರೇನು ? ಅವರು ನಮ್ಮ ಬಗ್ಗೆ ಪ್ರೀತಿಯಿರುವವರು. ನಿಮ್ಮ ಮನಸ್ಥಿತಿ ಹಾಗೆ ಆಲೋಚಿಸಿರಬಹುದು. ಇಲ್ಲವೆ ನೀವು ಪೂರ್‍ವಗ್ರಹ ಪೀಡಿತರಿರಬಹುದು. ನಿಮಗೆ ಯಾವುದು ಸತ್ಯವೆನಿಸುವುದು?” ಅಣ್ಣ ಬಸವಣ್ಣನವರು ಬಂದಿದ್ದವರನ್ನು ಪ್ರಶ್ನಿಸಿ ಅವರ ಮುಖ ನೋಡುತ್ತಾ ಕುಳಿತರು.

ಅಲ್ಲಿದ್ದವರೆಲ್ಲ ಬೆವರ ತೊಡಗಿದರು. ತೊದಲ ತೊಡಗಿದರು.

‘ಮಹಾ ಮಂತ್ರಿಗಳೇ… ಬಿಜ್ಜಳ ಮಹಾರಾಜರು ಏನೆಂದು ನಮಗೇನು ತಿಳಿಯದು. ಸತ್ಯಾಸತ್ಯತೆ ಕುರಿತು ನಾವು ಆಲೋಚಿಸಿಲ್ಲ. ನಿಮ್ಮ ಬಗ್ಗೆ ಹಾಗೆ ಅಂದಿದ್ದನ್ನು ಹೇಳಲು ಬಂದಿದ್ದೆವು’ ಎಂದರು.

“ನಿಮ್ಮ ಚಾಡಿ ಮಾತುಗಳಿಂದೇನು ಲಾಭವಿಲ್ಲ. ಕಲ್ಯಾಣದ ಜನತೆಗೆ ಬಿಜ್ಜಳ ಮಹಾರಾಜರ ಬೊಕ್ಕಸ ತುಂಬಿಸಲು ಚಿಂತಿಸಿ, ಮಹಾರಾಜರ ಜನರ ತಲೆ ತುಂಬಿಸಿ ನೀವೂ ಹಾಳಾಗಬೇಡಿ ! ನೀವು ಮೊದಲು ಹೊರಡಿ. ಇನ್ನೆಂದು ನನ್ನ ಬಳಿ ಅವರಿವರ ಸುದ್ದಿ ತಂದು ನನ್ನ ಸಮಯ ವ್ಯರ್‍ಥ ಮಾಡಬೇಡಿ’ ಎಂದು ಅಣ್ಣ ಬಸವಣ್ಣನವರು ಖಾರವಾಗಿ ಪ್ರತಿಕ್ರಿಯಿಸಿದರು.

‘ನಾವು ನಿಮಗೆ ಉಪಕಾರ ಮಾಡಲು ಬಂದಿದ್ದೆವು. ನೀವು ನಮ್ಮನ್ನು ಅವಮಾನಿಸಿ ಕಳಿಸಿದ್ದು ಸರಿಯಿಲ್ಲ. ಇದರ ಪ್ರತಿಫಲ ಉಂಡೇ ಉಣ್ಣುವಿರಿ…’ ಎಂದು ಬಂದಿದ್ದವರು ಕೂಗಾಡಿದರು.

ಅಣ್ಣ ಬಸವಣ್ಣನವರು ಬಂದಿದ್ದವರನ್ನು ಮೌನ ವ್ರತದಿ ಸಾಗ ಹಾಕಿದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...