Home / ಕಥೆ / ಕಿರು ಕಥೆ / ಹಿತ್ತಾಳೆ ಕಿವಿ

ಹಿತ್ತಾಳೆ ಕಿವಿ

ಬಿಜ್ಜಳ ಮಹಾರಾಜರ ಬಳಿ ಅಣ್ಣ ಬಸವಣ್ಣನವರು ಮಹಾ ಮಂತ್ರಿಯಾದ ಹೊಸದರಲ್ಲಿ ಕಲ್ಯಾಣ ನಗರಿಯಲ್ಲಿದ್ದ ಚಾಡಿ ಕೋರರಾದ ಮಲ್ಲಪ್ಪ ಶೆಟ್ಟಿ ಕೊಂಡಿ ಮಂಚಣ್ಣ ಮುಂತಾದವರೆಲ್ಲ ಸೇರಿಕೊಂಡು ಒಮ್ಮೆ ಅಣ್ಣ ಬಸವಣ್ಣನವರು ಏಕಾಂತವಾಗಿದ್ದಾಗ ಅಲ್ಲಿಗೆ ಬಂದರು.

‘ಬಿಜ್ಜಳ ಮಹಾರಾಜರು ನಿಮ್ಮ ಬಗ್ಗೆ ಮೊನ್ನೆ ದಿನ ಎಲ್ಲರ ಎದುರಿಗೆ ನಿಮ್ಮನ್ನು ಕೇವಲವಾಗಿ ನಿಂದಿಸಿದರು!’ ಎಂದು ಬಂದವರು ಪೀಠಿಕೆ ಹಾಕಿ ಮಾತಿಗೆ ಮಾತು ಪೋಣಿಸುತ್ತಾ ಕುಳಿತರು.

“ನೀವು ಬಿಜ್ಜಳ ಮಹಾರಾಜರ ಮಾತುಗಳನ್ನು ಸತ್ಯವೆಂದು ನಂಬುವಿರೇನು ? ಅವರು ನಮ್ಮ ಬಗ್ಗೆ ಪ್ರೀತಿಯಿರುವವರು. ನಿಮ್ಮ ಮನಸ್ಥಿತಿ ಹಾಗೆ ಆಲೋಚಿಸಿರಬಹುದು. ಇಲ್ಲವೆ ನೀವು ಪೂರ್‍ವಗ್ರಹ ಪೀಡಿತರಿರಬಹುದು. ನಿಮಗೆ ಯಾವುದು ಸತ್ಯವೆನಿಸುವುದು?” ಅಣ್ಣ ಬಸವಣ್ಣನವರು ಬಂದಿದ್ದವರನ್ನು ಪ್ರಶ್ನಿಸಿ ಅವರ ಮುಖ ನೋಡುತ್ತಾ ಕುಳಿತರು.

ಅಲ್ಲಿದ್ದವರೆಲ್ಲ ಬೆವರ ತೊಡಗಿದರು. ತೊದಲ ತೊಡಗಿದರು.

‘ಮಹಾ ಮಂತ್ರಿಗಳೇ… ಬಿಜ್ಜಳ ಮಹಾರಾಜರು ಏನೆಂದು ನಮಗೇನು ತಿಳಿಯದು. ಸತ್ಯಾಸತ್ಯತೆ ಕುರಿತು ನಾವು ಆಲೋಚಿಸಿಲ್ಲ. ನಿಮ್ಮ ಬಗ್ಗೆ ಹಾಗೆ ಅಂದಿದ್ದನ್ನು ಹೇಳಲು ಬಂದಿದ್ದೆವು’ ಎಂದರು.

“ನಿಮ್ಮ ಚಾಡಿ ಮಾತುಗಳಿಂದೇನು ಲಾಭವಿಲ್ಲ. ಕಲ್ಯಾಣದ ಜನತೆಗೆ ಬಿಜ್ಜಳ ಮಹಾರಾಜರ ಬೊಕ್ಕಸ ತುಂಬಿಸಲು ಚಿಂತಿಸಿ, ಮಹಾರಾಜರ ಜನರ ತಲೆ ತುಂಬಿಸಿ ನೀವೂ ಹಾಳಾಗಬೇಡಿ ! ನೀವು ಮೊದಲು ಹೊರಡಿ. ಇನ್ನೆಂದು ನನ್ನ ಬಳಿ ಅವರಿವರ ಸುದ್ದಿ ತಂದು ನನ್ನ ಸಮಯ ವ್ಯರ್‍ಥ ಮಾಡಬೇಡಿ’ ಎಂದು ಅಣ್ಣ ಬಸವಣ್ಣನವರು ಖಾರವಾಗಿ ಪ್ರತಿಕ್ರಿಯಿಸಿದರು.

‘ನಾವು ನಿಮಗೆ ಉಪಕಾರ ಮಾಡಲು ಬಂದಿದ್ದೆವು. ನೀವು ನಮ್ಮನ್ನು ಅವಮಾನಿಸಿ ಕಳಿಸಿದ್ದು ಸರಿಯಿಲ್ಲ. ಇದರ ಪ್ರತಿಫಲ ಉಂಡೇ ಉಣ್ಣುವಿರಿ…’ ಎಂದು ಬಂದಿದ್ದವರು ಕೂಗಾಡಿದರು.

ಅಣ್ಣ ಬಸವಣ್ಣನವರು ಬಂದಿದ್ದವರನ್ನು ಮೌನ ವ್ರತದಿ ಸಾಗ ಹಾಕಿದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...