Home / ಕವನ / ಕವಿತೆ / ಅರ್‍ಪಣ-ತರ್‍ಪಣ

ಅರ್‍ಪಣ-ತರ್‍ಪಣ

“ಪುಷ್ಪವಿದ್ದಂತೆ ಮೊಗ್ಗೆಯನರ್‍ಪಿಸಿಕೊಂಡ ಶಿವನು!
ಪಕ್ವವಾದ ಫಳವಿದ್ದಂತೆ ಕಸುಗಾಯ ಕೊಯ್ಯನು ಶಿವನು!
-(ಬಾಲ ಸಂಗಯ್ಯನ ಮರಣ ಕಾಲಕ್ಕೆ ಬಸವದೇವನ ವಿಲಾಪ)
ಕೊಳಲಾಗಬಹುದಾಗಿತ್ತು, ಕಳಿಲಿದ್ದಾಗಲೇ ಕಡಿದ ಕಾಳ!
ದೇವ! ಮಗುವೆಂದು ತಿಳಿದಿದ್ದೆ ಆದಾಯಿತು ನೀರ್‍ಗುಳ್ಳಿ!
ಮನೆಯವನೆಂದು ತಿಳಿದಿದ್ದೆ ಅವನಾದ ಅತಿಥಿ!
ಕಣ್ತುಂಬ ಕಾಣಲಿಲ್ಲ; ಬಾಯ್ತುಂಬ ಮುದ್ದಿಡಲಿಲ್ಲ;
ಮನೆಯ ಮಮತೆಯ ಮೂರ್‍ತಿಯಾದೀತೆಂದಿದ್ದೆ-
ಆದರೆ-ಎಂಜಲು ಮಾಡಿದ್ದಿಲ್ಲ! ಆಯ್ತು-ಮಸಣದ-
ಮಹಾದೇವನ ಮುಡಿಯೊಳಗಿನ ಮೀಸಲ ಮದಗುಣಕಿ.
ಹುಳಹುಪ್ಪಡಿಯ ತಿನಸಾಯಿತು ಮೋಹದ ಮುದ್ದೆ !
ಜೀವಗಳೆದ ದೇಹವನ್ನು ಕಣ್ಣೀರ್‍ಸುರಿಸಿ ಕೊಟ್ಟೆ ಕೃಷ್ಣಾ-
ರ್‍ಪಣವೆಂದು. ಪಿತನ ಪಾಪದ ಪಿಂಡ ಕಣ್ಮರೆಗಾಯಿತು;
ಮಣ್ಮರೆಯಾಯ್ತು; ಕಂಗೊಳಿಸಲಕಲ್ಪನೆಯ ಪುಣ್ಯ ಪುಂಜ.
ಮಾತೆಯ ಶಾಪದ ಮೂರ್‍ತಿ ಬಯಲಾಯಿತು;
ಮುಸುಕಲಿ ಮಮತೆಯ ಧೂಪ ಮನೋರಾಜ್ಯದಲ್ಲಿ.
ನಿಮಿತ್ತ ಮಾತ್ರ, ಕ್ಷಣಿಕವಾಗಿ ಬಂದ ಕೂಸೇ!
ಸಂಸಾರದ ಸವಿ ಸುಖ ದುಃಖದ ಸರಿಬೆರಿಕೆಯೆಂದು ಕಲಿಸಿದೆ.
ಆದರೆ, ನಿಜವಾದ ಅಖಂಡ ಪ್ರೀತಿಝರಿಯನ್ನು ಪ್ರವಹಿಸಿದೆ.
ಅದರ ತೀರನಿವಾಸಿಯಾದ ಈ ವಾಣಿ ಹಾಡುವದು,
ಕ್ಷೇಮೇಂದ್ರ!
ನಿನ್ನ ನಾಮಾಂಕಿತ ನಾಮದ ಸನ್ಮಾನಕ್ಕಾಗಿ,
ಅಜ್ಜಿ ಅಮ್ಮಂದಿರ ಸಮಾಧಾನಕ್ಕಾಗಿ,
ನನ್ನ ಮನದ ಸುಮ್ಮಾನಕ್ಕಾಗಿ,
ಈ ಕಾವ್ಯ ತಂದೆ ಕೊಟ್ಟ ಮುದ್ದು.
*****
Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...