Home / ಕವನ / ಕವಿತೆ / ಅರ್‍ಪಣ-ತರ್‍ಪಣ

ಅರ್‍ಪಣ-ತರ್‍ಪಣ

“ಪುಷ್ಪವಿದ್ದಂತೆ ಮೊಗ್ಗೆಯನರ್‍ಪಿಸಿಕೊಂಡ ಶಿವನು!
ಪಕ್ವವಾದ ಫಳವಿದ್ದಂತೆ ಕಸುಗಾಯ ಕೊಯ್ಯನು ಶಿವನು!
-(ಬಾಲ ಸಂಗಯ್ಯನ ಮರಣ ಕಾಲಕ್ಕೆ ಬಸವದೇವನ ವಿಲಾಪ)
ಕೊಳಲಾಗಬಹುದಾಗಿತ್ತು, ಕಳಿಲಿದ್ದಾಗಲೇ ಕಡಿದ ಕಾಳ!
ದೇವ! ಮಗುವೆಂದು ತಿಳಿದಿದ್ದೆ ಆದಾಯಿತು ನೀರ್‍ಗುಳ್ಳಿ!
ಮನೆಯವನೆಂದು ತಿಳಿದಿದ್ದೆ ಅವನಾದ ಅತಿಥಿ!
ಕಣ್ತುಂಬ ಕಾಣಲಿಲ್ಲ; ಬಾಯ್ತುಂಬ ಮುದ್ದಿಡಲಿಲ್ಲ;
ಮನೆಯ ಮಮತೆಯ ಮೂರ್‍ತಿಯಾದೀತೆಂದಿದ್ದೆ-
ಆದರೆ-ಎಂಜಲು ಮಾಡಿದ್ದಿಲ್ಲ! ಆಯ್ತು-ಮಸಣದ-
ಮಹಾದೇವನ ಮುಡಿಯೊಳಗಿನ ಮೀಸಲ ಮದಗುಣಕಿ.
ಹುಳಹುಪ್ಪಡಿಯ ತಿನಸಾಯಿತು ಮೋಹದ ಮುದ್ದೆ !
ಜೀವಗಳೆದ ದೇಹವನ್ನು ಕಣ್ಣೀರ್‍ಸುರಿಸಿ ಕೊಟ್ಟೆ ಕೃಷ್ಣಾ-
ರ್‍ಪಣವೆಂದು. ಪಿತನ ಪಾಪದ ಪಿಂಡ ಕಣ್ಮರೆಗಾಯಿತು;
ಮಣ್ಮರೆಯಾಯ್ತು; ಕಂಗೊಳಿಸಲಕಲ್ಪನೆಯ ಪುಣ್ಯ ಪುಂಜ.
ಮಾತೆಯ ಶಾಪದ ಮೂರ್‍ತಿ ಬಯಲಾಯಿತು;
ಮುಸುಕಲಿ ಮಮತೆಯ ಧೂಪ ಮನೋರಾಜ್ಯದಲ್ಲಿ.
ನಿಮಿತ್ತ ಮಾತ್ರ, ಕ್ಷಣಿಕವಾಗಿ ಬಂದ ಕೂಸೇ!
ಸಂಸಾರದ ಸವಿ ಸುಖ ದುಃಖದ ಸರಿಬೆರಿಕೆಯೆಂದು ಕಲಿಸಿದೆ.
ಆದರೆ, ನಿಜವಾದ ಅಖಂಡ ಪ್ರೀತಿಝರಿಯನ್ನು ಪ್ರವಹಿಸಿದೆ.
ಅದರ ತೀರನಿವಾಸಿಯಾದ ಈ ವಾಣಿ ಹಾಡುವದು,
ಕ್ಷೇಮೇಂದ್ರ!
ನಿನ್ನ ನಾಮಾಂಕಿತ ನಾಮದ ಸನ್ಮಾನಕ್ಕಾಗಿ,
ಅಜ್ಜಿ ಅಮ್ಮಂದಿರ ಸಮಾಧಾನಕ್ಕಾಗಿ,
ನನ್ನ ಮನದ ಸುಮ್ಮಾನಕ್ಕಾಗಿ,
ಈ ಕಾವ್ಯ ತಂದೆ ಕೊಟ್ಟ ಮುದ್ದು.
*****
Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...