Home / ಕವನ / ಕವಿತೆ / ಅರ್‍ಪಣ-ತರ್‍ಪಣ

ಅರ್‍ಪಣ-ತರ್‍ಪಣ

“ಪುಷ್ಪವಿದ್ದಂತೆ ಮೊಗ್ಗೆಯನರ್‍ಪಿಸಿಕೊಂಡ ಶಿವನು!
ಪಕ್ವವಾದ ಫಳವಿದ್ದಂತೆ ಕಸುಗಾಯ ಕೊಯ್ಯನು ಶಿವನು!
-(ಬಾಲ ಸಂಗಯ್ಯನ ಮರಣ ಕಾಲಕ್ಕೆ ಬಸವದೇವನ ವಿಲಾಪ)
ಕೊಳಲಾಗಬಹುದಾಗಿತ್ತು, ಕಳಿಲಿದ್ದಾಗಲೇ ಕಡಿದ ಕಾಳ!
ದೇವ! ಮಗುವೆಂದು ತಿಳಿದಿದ್ದೆ ಆದಾಯಿತು ನೀರ್‍ಗುಳ್ಳಿ!
ಮನೆಯವನೆಂದು ತಿಳಿದಿದ್ದೆ ಅವನಾದ ಅತಿಥಿ!
ಕಣ್ತುಂಬ ಕಾಣಲಿಲ್ಲ; ಬಾಯ್ತುಂಬ ಮುದ್ದಿಡಲಿಲ್ಲ;
ಮನೆಯ ಮಮತೆಯ ಮೂರ್‍ತಿಯಾದೀತೆಂದಿದ್ದೆ-
ಆದರೆ-ಎಂಜಲು ಮಾಡಿದ್ದಿಲ್ಲ! ಆಯ್ತು-ಮಸಣದ-
ಮಹಾದೇವನ ಮುಡಿಯೊಳಗಿನ ಮೀಸಲ ಮದಗುಣಕಿ.
ಹುಳಹುಪ್ಪಡಿಯ ತಿನಸಾಯಿತು ಮೋಹದ ಮುದ್ದೆ !
ಜೀವಗಳೆದ ದೇಹವನ್ನು ಕಣ್ಣೀರ್‍ಸುರಿಸಿ ಕೊಟ್ಟೆ ಕೃಷ್ಣಾ-
ರ್‍ಪಣವೆಂದು. ಪಿತನ ಪಾಪದ ಪಿಂಡ ಕಣ್ಮರೆಗಾಯಿತು;
ಮಣ್ಮರೆಯಾಯ್ತು; ಕಂಗೊಳಿಸಲಕಲ್ಪನೆಯ ಪುಣ್ಯ ಪುಂಜ.
ಮಾತೆಯ ಶಾಪದ ಮೂರ್‍ತಿ ಬಯಲಾಯಿತು;
ಮುಸುಕಲಿ ಮಮತೆಯ ಧೂಪ ಮನೋರಾಜ್ಯದಲ್ಲಿ.
ನಿಮಿತ್ತ ಮಾತ್ರ, ಕ್ಷಣಿಕವಾಗಿ ಬಂದ ಕೂಸೇ!
ಸಂಸಾರದ ಸವಿ ಸುಖ ದುಃಖದ ಸರಿಬೆರಿಕೆಯೆಂದು ಕಲಿಸಿದೆ.
ಆದರೆ, ನಿಜವಾದ ಅಖಂಡ ಪ್ರೀತಿಝರಿಯನ್ನು ಪ್ರವಹಿಸಿದೆ.
ಅದರ ತೀರನಿವಾಸಿಯಾದ ಈ ವಾಣಿ ಹಾಡುವದು,
ಕ್ಷೇಮೇಂದ್ರ!
ನಿನ್ನ ನಾಮಾಂಕಿತ ನಾಮದ ಸನ್ಮಾನಕ್ಕಾಗಿ,
ಅಜ್ಜಿ ಅಮ್ಮಂದಿರ ಸಮಾಧಾನಕ್ಕಾಗಿ,
ನನ್ನ ಮನದ ಸುಮ್ಮಾನಕ್ಕಾಗಿ,
ಈ ಕಾವ್ಯ ತಂದೆ ಕೊಟ್ಟ ಮುದ್ದು.
*****
Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...