Home / ಕವನ / ಕವಿತೆ / ಬಡವರ ಕಾಮಧೇನು

ಬಡವರ ಕಾಮಧೇನು

ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಬಾಲ್ಯದಲಿ ಪಶುಗಳನು ಸಲಹುತ್ತ ಬೆಳೆದೆ
ಬಳಿಕೆಯಾಗಿಹ ಪ್ರಾಣಿಒಳಗಂಗಳರಿದೆ
ವನಮೃಗಖಗಂಗಳನು ನೋಡುತ್ತ ನಲಿದೆ
ಜನಪದಂಗಳನೆಲ್ಲ ಬಳಸುತ್ತ ತಿಳಿದೆ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತ್ತಿದೆ ಯಾಕಂದು ಕಾಣೆ
ಬೇಡಾದ ವಸ್ತುಗಳ ಮೆಲುತಿರುವ ಪ್ರಾಣಿ
ಬೇಕಾದ ಗೆಯ್ಮೆಗಳ ಗೆಯ್ಯುತಿಹ ತ್ರಾಣಿ
ಕಡಿದಾದ ಗುಡ್ಡದಲಿ ನಿಡಿದಾಗಿ ನಡೆವ
ಬಿರುಸಾದ ಮರಳಲ್ಲಿ ಸುಖವಾಗಿ ಸುಳಿವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಇರುಕಾದ ಸರುವಿನೊಳು ಸರಸಾಗಿ ಸಾಗಿ
ಎರೆಯಂಗೆ ತೋಷವನು ಬೀರುತ್ತ ಸಾರಿ
ಪರಿಚರ್ಯೆಕೈಕೊಂಬ ಪರಿಯನ್ನು ಕಳೆದು
ನಿಷ್ಕಾಮ ಕರ್ಮವನು ಮನದಿಂದ ಮಾಳ್ಪ
ನಾ ಕ೦ದ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಹೊರೆಯನ್ನು ಹೇರಿರುವ ಪರಿಯನ್ನು ತಿಳಿದು
ಕೊರಗುತ್ತ ಕರಗದಲೆ ಮನವನ್ನು ಬಿಗಿದು
ಎರೆಯಂಗೆ ಎರೆಯಳಿಗೆ ಹರುಷವನು ತರುವ
ಕಷ್ಟದಿಂ ಕಾಯವನು ನೂಕುತ್ತ ನಡೆವ
ನಾ ಕಂಡ ಜೀವಿಯನ್ನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕಂದು ಕಾಣೆ
ಕಲ್ಲನ್ನು ಕಾಳನ್ನು ಕಟ್ಟಿಗೆಯ ಹೊರೆಯ
ಮಣ್ಣನ್ನು ಮುಂತಾಗಿ ಒಯ್ಯುತಿಹ ಪರಿಯ
ಕಾಸನ್ನು ಕಳೆಯದಲೆ ಸಾಕುತಿಹ ಬಗೆಯ
ಪಶುಜೀವ ಕೋಟಿಯಲಿ ಬಡಜನರ ಸಿರಿಯ
ನಾ ಕ೦ಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಗುಜರಾತ ನಾಡಿನಲಿ ಜನರಾಡಿಕೊಳುವ
“ರಾವಣನ ಗಡಿಯಾಳ” ಬಿರುದಾಗಿ ಮೆರೆವ
ಪ್ರತಿ ಮೂರು ತಾಸಿನಲಿ ಪರಮನನು ಸ್ಮರಿಸಿ
ಧರೆಗೊಂದು ಗಡಿಯಾಳ ತೆರನಾಗಿ ಮೆರೆವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಸ್ವರವನ್ನು ಕರ್ಕಶದ ಕಣಿಯೆಂದು ಬಗೆವ
ಮರವೆಯನು ಬಡಪಾಯಿ ಮತಿಯಂದು ತಿಳಿವ
ಗುರುತರದ್ರೋಹವನ್ನೆಸಗುತ್ತ ನರರು
ಮನಬಂದ ತೆರದಲ್ಲಿ ದೂರುತ್ತಲಿರುವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆ೦ದು ನುಡಿಯುತಿದೆ ಯಾಕೆಂದು ಕಾಣೆ
ಆರಯ್ಯೆ ಹಾಲುಂಡಪರಿಯಿಂದ ತಿಳಿದು
ಮೀರಿರ್ದ ಬಾಲಗ್ರಹಂಗಳನು ತರಿದು
ಸೇರಿರ್ದ ಕಾಲನುರು ಸಂಕಲೆಯ ಕಡಿದು
ಸೆಟೆದಿರ್ದ ಶಿಶುವನ್ನು ಸುಖವಾಗಿ ನಗೆಪ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆ೦ದು ಕಾಣೆ
ಕಿವಿನೆಟ್ಟಗಿಟ್ಟಿರುವ ಮುಖವನ್ನು ನೋಡಿ
ಬೆರಗಾಗಿ ಮನದಲ್ಲಿ ಮುದದಿಂದ ಕೂಡಿ
ಮೂಡಿರ್ದ ಬಾಳೆಗಳ ಗೊನೆಯಂತೆ ಕಾ೦ಬ
ತುಂಬಿರ್ದ ಸರಳತೆಯು ತುಳುಕುತ್ತಲಿರುವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆ೦ದು ಕಾಣೆ
೧೦
ಮಹಾತ್ಮಾ ಯೇಸುವನು ಹೊರೆಯಾಗಿಹೊತ್ತ
ಪಿರಿದಾದ ಸೈರಣೆಗೆ ನೆಲೆಯಾಗಿ ನಿಂತ
ಗಂಗಾತರಂಗಗಳ ತಟಗಳಲಿ ಮಿಂದು
ಕಂಗೊಳಿಪ ಹಿಮಗಿರಿಯ ದರಿಗಳಲಿ ನಿಂದು
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
೧೧
ತಿಪ್ಪೆಯುಪ್ಪರಿಗೆಗಳ ಹೊಲಬನ್ನು ತಿಳಿದು
ಬಡವಂಗೆ ನೆರೆಕಾಮಧೇನುವಾಗಿರುವ
ನಿಷ್ಕಾಮ ಕರ್ಮವನು ಕಲಿಸುತಿಹ ಋಷಿಯ
ಸತ್ಕಾರ್ಯ ಮಹಿಮೆಯನು ಸಾರುತಿಹ ಸಿರಿಯ
ನಾ ಕಂಡ ಜೀವಿಯನ್ನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
*****
Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...