ನೊಣ

ಕೆಲಸ ಬೊಗಸೆ ಮುಗಿಸಿ ನಾನು
ಬಯಲ ಬೆಳಕ ಬಯಸಿ ನಾನು
ದೇವರೊಲುಮೆಗೆಳಸಿ ನಾನು
ದಿನವು ದಿನವು ಬೆಳಗಿನಲ್ಲಿ ಮನೆಯ ಬಿಡುವೆನು
ಕುಣಿವ ಕುಲಮನಗಳಿಂದ ತಣಿಯುತಿರುವೆನು
ಮಾನ ಧನದ ಪ್ರಾಣಿಯೊಂದು
ಸೇನೆ ಸೇರಿ ಸರಗಿ ಒಂದು
ಶಿರದ ಮೇಲೆ ಸೆಣಸಿ ನಿಂದು
ಕಿರಿದು ನಾದ ಬೀರಿ ನನ್ನ ತಲುಬುತಿರುವುದು
ಬರಿದೆ ಬೆದರ ತೋರೆ ನಾನು ಬೆದರದಿರುವುದು
ಮೈಲು ಮೈಲು ಮೈಲು ಮತ್ತೆ
ಮೈಲ ಮೂರ ಮುಗಿಸಿ ನಿಂದೆ
ಮೈಲನಾರ ಬಳಸಿ ಬ೦ದೆ
ತಲೆಯ ಬಳಿಸಿ ವಲಯಗಟ್ಟಿ ತೇಲುತಿರುವುದು
ಛಲದ ಪಂಥಪಾಡುಗಳನ್ನು ಪಾಡುತಿರುವುದು
ಮಾಡಲೇನು ಮೊಟ್ಟ ಮೊದಲು
ಸಿಟ್ಟಿನಿ೦ದ ಬಿಟ್ಟು ಬಿಡದೆ
ಪೆಟ್ಟನಿತ್ತು ಬಟ್ಟೆಗೆಡಿಸೆ
ರೊಚ್ಚಿನಿಂದ ತುಚ್ಛಮಾಡಿ ಮುಚ್ಚಿಬರುವುದು
ಬಿಚ್ಚಿ ಬಿಚ್ಚಿ ಬೀರ ಸಿರಿಯ ಪೆರ್ಚಿ ತೋರ್ಪುದು
ನಿಲ್ಲು ನಿಲ್ಲು ಬಲ್ಲೆ ನಿನ್ನ
ಭುಲ್ಲವಿಸುತಲೇರಿ ಬರುವ
ಮಲ್ಲಯುದ್ಧ ಹೊಲ್ಲೆನೆಂದು
ಕೊಡೆಯ ಕೋಲ ಕೈದಿನಿಂದೆ ಕಾದುತಿರ್ದೆನು
ಕದನದಿಂಪು ಕದಲದಂತೆ ತೋರಿಸೆಂದೆನು
ಪ್ರಾಣಿ ಸಣ್ಣದಾದರೇನು
ಪ್ರಾಣ ತೊರೆವ ಸಿರಿಯನರಿಯೆ
ಕ್ಷೋಣಿಯಲ್ಲಿ ಎಣೆಯ ಕಾಣೆ
ನಾಣಿನಿಂದ ಶಿರವ ನಾನೆ ಮಣಿಸುತಿರ್ದೆನು
ಕಣದೆ ವೀರಜೋವಿ ಸಿರಿಯನರಿಯುತಿರ್ದೆನು
ಹೆರರ ಸೀಮೆ ನರರು ಸೇರೆ
ಹರಿದು ಹಾಯ್ದ ಹದನವರಿಯೆ
ಹಿರಿದು ಕಿರಿದು ಮಾತದಲ್ಲ
ಸಣ್ಣ ನೊಣವು ಬಣ್ಣಗೆಡದೆ ತನ್ನ ಸೀಮೆಯ
ಸಾರಿ ದೂರಿ ಪೂರೆದ ಸಿರಿಯ ದಾಸನರಿವನೆ
ದಾಸನಾದೆನೆಂತೊ ನಾನು
ನೀತಿ ಶಾಸ್ತ್ರ ಓದಿನೋಡೆ
ಮಾತೆ ಬಾರದಕಟ ದೇವ
ನಾಡವಾಭಿಮಾನರಾಜತೇಜವಡಗಲು
ನಾಡಿನಲ್ಲಿ ಹೇಡಿತನವು ಬೀಡುಗೊ೦ಡಿತು
ಹನಿಯು ಬೀಳೆ ಹುಟ್ಟಿ ಬೆಳೆದು
ಮನೆಯ ಮಾಡಿ ಹುಲ್ಲಿನಲ್ಲಿ
ಜಡಿಯ ಮಳೆಯು ಜಡಿದು ಬೀಳೆ
ಬಿಸಿಯ ಬಿಸಿಲು ವಸುಧೆಗೇರ ನಶಿಸಿಪೋಪುದು
ಹಸರು ಹಸಿಯ ಹುಲ್ಲಿನೊಡನೆ ಬಸೆದು ಬರುವುದು
೧೦
ಬದುಕಿ ಬಾಳ್ವ ಕಾಲ ಕಡಿಮೆ
ಯಾಗಿ ಇಳೆಯೊಳಳಿದರೇನು
ಗಳಿಗೆ ಹೊತ್ತು ಬೆಳಕು ತೋರಿ
ತನುವ ಸದೆಗೆ ಸಾಟಿಮಾಡಿ ಮಡಿವುದೈಸಲೆ
ಜನಪದಸ್ಯ ಸೇವೆಗಿಂತ ಸಾವು ಲೇಸಲೆ
೧೧
ಹರೆಯ ರಕುತ ಹಾರಿ ಹರಿದ
ಧರೆಯ ಸಿರಿಯ ತರುಣರೆಲ್ಲ
ವೀರ ನರವ ಮಿಡಿಸಿ ನುಡಿಸೆ
ನಾಡ ಸಿರಿಯ ನಾಡಿನಲ್ಲಿ ಹಾಡಿ ಬರುವುದು
ನಾಡ ದಾಸತನದ ಬೇಡಿ ಹಾದಿ ಹಿಡಿವುದು
*****
Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...