Home / ಕವನ / ಕವಿತೆ / ಸಾಮ್ರಾಜ್ಯಗಳ ಸಮಾಧಿಯಿಂದ

ಸಾಮ್ರಾಜ್ಯಗಳ ಸಮಾಧಿಯಿಂದ

ಖುರಪುಟದ ಹೆಜ್ಜೆ ಬಡಿತದ ಶಬ್ದ,
ಭಗ್ನ ಅವಶೇಷಗಳಡಿ ಕಾಲನ ಉಸಿರು
ಮುರಿದು ಬಿದ್ದಚಕ್ರದ ಗಾಲಿ,
ಗಡಿಯಾರ ಮುಳ್ಳಿನ ರಿಂಗಣ
ಕಾಮನ ಬಿಲ್ಲಿನ ನೆರಳು ಸಿಗದು.

ಆಗಸದಲಿ ಹರಡಿದ ಬಟ್ಟೆಯಲ್ಲಿ
ತೆಗೆದಿಟ್ಟ ಚುಕ್ಕಿಗಳ ಮೂಟೆ
ಮೌನ ಬಿಕ್ಕುವ ಮಾತುಗಳನ್ನು
ಕೊಳೆಹಾಕಿದೆ ಹಳೆಯ ಕಪಾಟಿನಲ್ಲಿ
ಕೊಂಪೆ ಸಾಮ್ರಾಜ್ಯದ ಪಳಯುಳಿಕೆ

ಹಳಸಿದ ಸಾಕ್ಷ್ಯಗಳ ಚೀಲದಲ್ಲಿ
ಪತನವಾದ ಹಳೇ ಸಾಮ್ರಾಜ್ಯ
ಭಾವಿ ಕಟ್ಟೆಯ ಗಡಗಡೆ ಶಬ್ದ
ಜೊತುಬಿದ್ದ ದಳಪತಿಯ ಖಡ್ಗಕ್ಕೆ
ಜೇನು ಹುಳು ಗೂಡುಕಟ್ಟಿ.
ಎಷ್ಟೊಂದು ಪ್ರಾತಿನಿಧಿಕ ತಿಕ್ಕಾಟ
ಸಿಂಹಾಸನ ಪಲ್ಲಕ್ಕಿಗಳಡಿ
ಆಕಾಶಕ್ಕೆ ಏಣಿ ಹಾಕಿದೆ
ಪರಾಕು, ಪತಾಕೆಗಳ ಉತ್ಪನನದಲ್ಲಿ
ಇಲಿ, ಹೆಗ್ಗಣಗಳ ಜಿರಲೆ ಹರಿದಾಟ.

ಸಾಮ್ರಾಜ್ಯಗಳ ಸಮಾಧಿಯಲ್ಲಿ
ಇಂಗಿಹೋದ ರಕ್ತ ಮಾಂಸಗಳು
ತೇಲಾಡುವ ಅಸ್ತಿ ಪಂಜರಗಳು
ಅವಶೇಷ ಪ್ರೇತಾತ್ಮ
ಕಾಲವಾದ ಅಧಿಪತ್ಯ
ಕ್ಷೀಣ ಕಾಲನ ಬಿಕ್ಕುಗಳು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ