Home / ಕವನ / ಕವಿತೆ / ಖಂಡಿತ ಮಂದಿರದಡಿಯಿಂದ

ಖಂಡಿತ ಮಂದಿರದಡಿಯಿಂದ

ಎಂದೋ-ಯಾರೋ ಉರುಳಿಸಿದ
ಖಂಡಿತ ಮಂದಿರ, ಮಸೀದಿಗಳ
ಅಡಿಪಾಯದಡಿಯಲ್ಲಿ ನನ್ನನ್ನೇಕೆ ಸಿಕ್ಕಿಸುವಿರಿ
ಯಾರೋ ಉರುಳಿಸಿದ ಮಂದಿರಗಳ ಭಾರ
ನನ್ನ ಹೆಗಲಿಗೇಕೆ ಹೊರಿಸುವಿರಿ?
ಯಾರೋ ಮಾಡಿದ ತಪ್ಪಿಗೆ ನನಗೇಕೆ ಬರೆ?
ಛಿದ್ರಗೊಂಡ ಮಂದಿರದ ಕಲ್ಲುಗಳನ್ನೆತ್ತಿ
ನನ್ನ ಮೇಲೇಕೆ ಎಸೆಯುವಿರಿ ಹೇಳಿ?
ಹಾಡು ಹಗಲೇ ಮಸೀದಿಗಳನ್ನೇಕೆ ಉರುಳಿಸುವಿರಿ.
ಈ ಕ್ಷಣ ಹತ್ಯೆಯಾಗುತ್ತಿರುವ ಮನುಷ್ಯರ ಬಗ್ಗೆ
ತಮ್ಮದಲ್ಲದ ತಪ್ಪಿಗೆ ಬಲಿಯಾಗುತ್ತಿರುವವರ ಬಗ್ಗೆ.
ಒಮ್ಮೆ ಕಣ್ಣೀರಾಗಿ, ಮಗದೊಮ್ಮೆ ಕವಿತೆಯಾಗಿ
ಸಿಡಿಯುತ್ತಿರುವ ಸಿಡಿಮದ್ದಾಗಿ
ನನ್ನ ದೇಹದ ತುಂಬ ನೋವಿನ ಗಾಯಗಳ
ಹೆಕ್ಕಿ ಕೆದಕಿ ರಕ್ತಗೊಳಿಸುವಿರೇಕೆ?
ಕೋಮುವಾದಿಗಳ ಜಾಡು ಹಿಡಿದು ಪೀಡಿಸಿ,
ಈ ಮಣ್ಣಿನಲಿ ಒಂದಾದ ನನ್ನ ಪೂರ್ವಜರ
ಮೂಳೆಗಳು ಅಸ್ಥಿಪಂಜರಗಳಿವೆ ನೋಡಿ
ಮೂಳೆಗಳ ಹೇಗೆ ಬೇರ್ಪಡಿಸುವಿರಿ?
ಮಣ್ಣಲ್ಲಿ ಒಂದಾಗಿ ಗೊಬ್ಬರವಾದವರ
ಒಂದಾದ ಮನಸುಗಳ ಹೇಗೆ ಬೇರ್ಪಡಿಸುವಿರಿ?
ಯಾರದೋ ತಪ್ಪಿಗೆ ಯಾರಿಗೋ ಬರೆಯೇಕೆ
ಎಂದೋ ಯಾರೋ ಉರುಳಿಸಿದ ಮಂದಿರದ
ಕಲ್ಲುಗಳ ಭಾರ ನನಗೇಕೆ ಹೊರಿಸುವಿರಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...