Home / ಕವನ / ಕವಿತೆ / ಗಡಿಗಳ ಗೆರೆ ಕೊರೆಯಲಾರೆನು

ಗಡಿಗಳ ಗೆರೆ ಕೊರೆಯಲಾರೆನು

ಎಷ್ಟೊಂದು ನಕ್ಷತ್ರಗಳು
ಅಡ್ಡ ಬಂದವು ಸೂರ್ಯನ ಬೆಳಕಿಗೆ
ಕತ್ತಲೆಯನ್ನು ಕತ್ತರಿಸುವ
ಕೋಲ್ ಮಿಂಚನು ತುಂಡರಿಸಬಹುದೆ?
ಎಷ್ಟೊಂದು ಶಬ್ದ ಕಂಪನಗಳಾಗಿವೆ
ಕತ್ತಲೊಡಗಿನ ಭೂಮಿಯ ಗರ್ಭದಲಿ
ಅಂತರಂಗದ ಕತ್ತಲೆಗೆ ಓಡಿಸಲು
ನಿಶ್ಯಬ್ದದೊಳಗಣ ಶಬ್ದ ಚಿತ್ತಾರ
ಶಬ್ದವಿಲ್ಲ ಬೇರು ಬಿಡಲು ಬ್ರಹ್ಮವೃಕ್ಷಕೆ

ಬದುಕು ಧಾನಸ್ಥ ತಪಸ್ಸಿನ ಮಾದರಿ
ಅಂತಃಕರಣ ತುಂಬಿ ಕಣಕಣದಲಿ
ತನ್ನಾಚೆ ದಿಟ್ಟಿಸುವ ಅಕ್ಷಿಪಟಲದ ನೋಟ
ಕಾಲಮಾನದಾಚೆಗೂ ನುಡಿವ ಸಾಕ್ಷಿಭೂತ
ಅಂತರಂಗ ಅರಳಿಸುವ ಮಹಾಗುರು
ಅರಿವಿನ ಜೋಳಿಗೆಯಲಿ ಹಸಿವಿನ ಹಪಹಪಿ
ಅಕ್ಷರಗಳು ಬಿತ್ತರಿಸುವ ವಿಚಾರವಾದದ ಲಹರಿ
ಸಮತಾವಾದದ ಬೆಳಕಿನ ಕಿಂಡಿ.

ಚೆಲ್ಲಾಪಿಲ್ಲಿಯಾದ ಅಕ್ಷರಗಳಿಗೆ ಪದಗಳ ಹಂಗಿಲ್ಲ
ನಿನ್ನ ಬಣ್ಣಿಸುವ ಮಾತಿಗೂ ಹೊಳಪಿಲ್ಲ
ದಾರಿ ಕ್ರಮಿಸಿದೆ ಬಹುದೂರ ದೂರ..
ಬಾಳ ಬಯಲ ಅಂಗಳದಲಿ ನಿಂತು
ಎದೆಯ ಹಣತೆಯ ಮಂದ ಬೆಳಕಿನಲ್ಲಿ
ಕ್ರಮಿಸಿದ ಸುದೀರ್ಘ ಹಾದಿಯ ನೋಟ
ಅಂಕು ಡೊಂಕುಗಳ ಸಿಂಹಾವಲೋಕನ

ಕನ್ನಡದ ಕಂಪು ರಷ್ಯಾದವರೆಗೂ ಹರಡಿ
ರಾಷ್ಟ್ರಗಳ ಸ್ನೇಹ ಸೇತುಗಳ ಬಿಗಿ ಬಂಧ
ಸೋವಿಯತ್ ಲ್ಯಾಂಡಿನ ಗೌರವದ ಧಿರಿಸು
ತಾಯ್ನಾಡಿನ ನೆಹರು ಪ್ರಶಸ್ತಿಗಳ ಮುಡಿಗೇರಿಸಿ
ಅಸಂಖ್ಯಾತ ಶಿಷ್ಯ ಬಳಗದ ಗುರುವಾಗಿ
ಧಾರವಾಡದ ಕರ್ಮಭೂಮಿಯ ಕಿಂಕರವಾಗಿ
ವಟುವೃಕ್ಷದ ಬೇರು ಎಷ್ಟೊಂದು ಆಳ-ನೀರಾಳ

ದೀಪದಿಂದ ದೀಪ ಹಚ್ಚುವ ನೀಲಾಂಜನ
ಬೆಳಕು ಚೆಲ್ಲಿದೆ ಬುದ್ಧಪೂರ್ಣಿಮೆಯ ಬುದ್ಧಣ್ಣ
ಸುತ್ತ ಹರಡಿದೆ ನೋಡು ಪ್ರಚಂಡ ಪ್ರಭೆ
ಬೆಳಕೆಂದರೆ ದೀಪ, ದೀಪವೆಂದರೆ
ಹಿಂಗಮಿರೆಯೆಂಬ ಬೆಳಕಿನ ಸೆಳಕು
ಹಣತೆ, ಕಂದೀಲು, ಬಲ್ಬು, ದೀಪಗಳು
ಸೂರ್ಯ ಬೆಳಕಿಗೆಲ್ಲಿಯ ಸಾಟಿ ಹೇಳು?

ಉದಯರಾಗದಿಂದ ಉದಯಿಸಿದ ಸೂರ್ಯ
ಭೂಮಿಗೀತದಿಂದ ಬೈಲೋರಷ್ಯದವರೆಗೆ
ಹೊಸ ದಿಕ್ಕುಗಳ ಹುಡುಕಿದ ಸರದಾರನಿಗೆ
ದೇಶ, ಗಡಿ, ಭಾಷೆಗಳ ಗೆರೆ ಕೊರೆಯಲಾರೆನು.
ಹರಿವ ನದಿ, ಸುಳಿವ ಗಾಳಿ, ಸುಗಂಧಗಳಿಗೆ
ಬಂಧನದ ಕಟ್ಟುಗಳನು ಬಿಗಿಯಲಾರೆನು
ಸಮತಾವಾದದ ಸಂತ ಸಾಧಕನಿಗೆ
ಭಾಷೆ, ದೇಶ, ಗಡಿಗಳ ಗೆರೆ ಕೊರೆಯಲಾರೆನು
*****
(ಬುದ್ಧಣ್ಣ ಹಿಂಗಮಿರೆಯವರ ಅಭಿನಂದನ ಗ್ರಂಥಕ್ಕಾಗಿ ಬರೆದ ಕವಿತೆ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...