Home / ಕವನ / ಕವಿತೆ / ಗಡಿಗಳ ಗೆರೆ ಕೊರೆಯಲಾರೆನು

ಗಡಿಗಳ ಗೆರೆ ಕೊರೆಯಲಾರೆನು

ಎಷ್ಟೊಂದು ನಕ್ಷತ್ರಗಳು
ಅಡ್ಡ ಬಂದವು ಸೂರ್ಯನ ಬೆಳಕಿಗೆ
ಕತ್ತಲೆಯನ್ನು ಕತ್ತರಿಸುವ
ಕೋಲ್ ಮಿಂಚನು ತುಂಡರಿಸಬಹುದೆ?
ಎಷ್ಟೊಂದು ಶಬ್ದ ಕಂಪನಗಳಾಗಿವೆ
ಕತ್ತಲೊಡಗಿನ ಭೂಮಿಯ ಗರ್ಭದಲಿ
ಅಂತರಂಗದ ಕತ್ತಲೆಗೆ ಓಡಿಸಲು
ನಿಶ್ಯಬ್ದದೊಳಗಣ ಶಬ್ದ ಚಿತ್ತಾರ
ಶಬ್ದವಿಲ್ಲ ಬೇರು ಬಿಡಲು ಬ್ರಹ್ಮವೃಕ್ಷಕೆ

ಬದುಕು ಧಾನಸ್ಥ ತಪಸ್ಸಿನ ಮಾದರಿ
ಅಂತಃಕರಣ ತುಂಬಿ ಕಣಕಣದಲಿ
ತನ್ನಾಚೆ ದಿಟ್ಟಿಸುವ ಅಕ್ಷಿಪಟಲದ ನೋಟ
ಕಾಲಮಾನದಾಚೆಗೂ ನುಡಿವ ಸಾಕ್ಷಿಭೂತ
ಅಂತರಂಗ ಅರಳಿಸುವ ಮಹಾಗುರು
ಅರಿವಿನ ಜೋಳಿಗೆಯಲಿ ಹಸಿವಿನ ಹಪಹಪಿ
ಅಕ್ಷರಗಳು ಬಿತ್ತರಿಸುವ ವಿಚಾರವಾದದ ಲಹರಿ
ಸಮತಾವಾದದ ಬೆಳಕಿನ ಕಿಂಡಿ.

ಚೆಲ್ಲಾಪಿಲ್ಲಿಯಾದ ಅಕ್ಷರಗಳಿಗೆ ಪದಗಳ ಹಂಗಿಲ್ಲ
ನಿನ್ನ ಬಣ್ಣಿಸುವ ಮಾತಿಗೂ ಹೊಳಪಿಲ್ಲ
ದಾರಿ ಕ್ರಮಿಸಿದೆ ಬಹುದೂರ ದೂರ..
ಬಾಳ ಬಯಲ ಅಂಗಳದಲಿ ನಿಂತು
ಎದೆಯ ಹಣತೆಯ ಮಂದ ಬೆಳಕಿನಲ್ಲಿ
ಕ್ರಮಿಸಿದ ಸುದೀರ್ಘ ಹಾದಿಯ ನೋಟ
ಅಂಕು ಡೊಂಕುಗಳ ಸಿಂಹಾವಲೋಕನ

ಕನ್ನಡದ ಕಂಪು ರಷ್ಯಾದವರೆಗೂ ಹರಡಿ
ರಾಷ್ಟ್ರಗಳ ಸ್ನೇಹ ಸೇತುಗಳ ಬಿಗಿ ಬಂಧ
ಸೋವಿಯತ್ ಲ್ಯಾಂಡಿನ ಗೌರವದ ಧಿರಿಸು
ತಾಯ್ನಾಡಿನ ನೆಹರು ಪ್ರಶಸ್ತಿಗಳ ಮುಡಿಗೇರಿಸಿ
ಅಸಂಖ್ಯಾತ ಶಿಷ್ಯ ಬಳಗದ ಗುರುವಾಗಿ
ಧಾರವಾಡದ ಕರ್ಮಭೂಮಿಯ ಕಿಂಕರವಾಗಿ
ವಟುವೃಕ್ಷದ ಬೇರು ಎಷ್ಟೊಂದು ಆಳ-ನೀರಾಳ

ದೀಪದಿಂದ ದೀಪ ಹಚ್ಚುವ ನೀಲಾಂಜನ
ಬೆಳಕು ಚೆಲ್ಲಿದೆ ಬುದ್ಧಪೂರ್ಣಿಮೆಯ ಬುದ್ಧಣ್ಣ
ಸುತ್ತ ಹರಡಿದೆ ನೋಡು ಪ್ರಚಂಡ ಪ್ರಭೆ
ಬೆಳಕೆಂದರೆ ದೀಪ, ದೀಪವೆಂದರೆ
ಹಿಂಗಮಿರೆಯೆಂಬ ಬೆಳಕಿನ ಸೆಳಕು
ಹಣತೆ, ಕಂದೀಲು, ಬಲ್ಬು, ದೀಪಗಳು
ಸೂರ್ಯ ಬೆಳಕಿಗೆಲ್ಲಿಯ ಸಾಟಿ ಹೇಳು?

ಉದಯರಾಗದಿಂದ ಉದಯಿಸಿದ ಸೂರ್ಯ
ಭೂಮಿಗೀತದಿಂದ ಬೈಲೋರಷ್ಯದವರೆಗೆ
ಹೊಸ ದಿಕ್ಕುಗಳ ಹುಡುಕಿದ ಸರದಾರನಿಗೆ
ದೇಶ, ಗಡಿ, ಭಾಷೆಗಳ ಗೆರೆ ಕೊರೆಯಲಾರೆನು.
ಹರಿವ ನದಿ, ಸುಳಿವ ಗಾಳಿ, ಸುಗಂಧಗಳಿಗೆ
ಬಂಧನದ ಕಟ್ಟುಗಳನು ಬಿಗಿಯಲಾರೆನು
ಸಮತಾವಾದದ ಸಂತ ಸಾಧಕನಿಗೆ
ಭಾಷೆ, ದೇಶ, ಗಡಿಗಳ ಗೆರೆ ಕೊರೆಯಲಾರೆನು
*****
(ಬುದ್ಧಣ್ಣ ಹಿಂಗಮಿರೆಯವರ ಅಭಿನಂದನ ಗ್ರಂಥಕ್ಕಾಗಿ ಬರೆದ ಕವಿತೆ)

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ