Home / ಕವನ / ಕವಿತೆ / ಗೋರಿಗಳ ಸ್ವಗತ

ಗೋರಿಗಳ ಸ್ವಗತ

ಮಮ್ತಾಜ್ ನಾನೆಂತಹ ಬದ್‌ನಸೀಬ್* ನೋಡು
ನೀನು ಬಹಳ ಪುಣ್ಯವಂತೆ
ಬಾದಷಹ ಷಹಜಹಾನನು
ನಿನ್ನ ಅಮರ ಸೌಂದರ್ಯದ ಸ್ಮೃತಿಗೆ
ಸರಿಸಾಟಿಯಿಲ್ಲದ ಸುಂದರ ಇಮಾರತ್ತು ಕಟ್ಟಿಸಿದ.

ಶಹರ ಪಟ್ಟಣಗಳು ನರಕಕೂಪಗಳಾಗಿ
ನಿನ್ನ ಸಮಾಧಿಗೆ ಸಂಗಮರಮರಿಯ
ಹಾಲಿನಂತಹ ತಂಪು ಬೆಳದಿಂಗಳು
ನನ್ನ ಗೋರಿಯ ಸುತ್ತಲೂ ನೋಡು
ನಿಶಾನೆ ಅಳಿಸುತ್ತ ಕತ್ತಲ್ಲನ್ನಪ್ಪಿ ಮಲಗಿದೆ.

ನನ್ನದೆಂತಹ ಖೋಟಾ ನಸೀಬು ನೋಡು
ಸುತ್ತಲೂ ಮುಳ್ಳು ಕಂಟಿ ಗಿಡಗಳು
ನಿನಗೆ ಸಿಕ್ಕ ಸವಲತ್ತು, ದವಲತ್ತು ನನಗೆಲ್ಲಿ
ದಿನವೂ ರೊಟ್ಟಿಗಾಗಿ ಹೋರಾಡುತ್ತಲೇ ಸತ್ತೆ
ಹೆಣ ಹುಗಿಯಲು ಹಣ ಎಲ್ಲಿಂದ ತರಲಿ?
ನಿನ್ನ ಸಮಾಧಿಯನ್ನು ವಿಶ್ವವೇ ನೋಡುತ್ತಿದೆ

ನನ್ನ ಗೋರಿಯ ಗುರುತು ಹೇಗೆ ಉಳಿಸಲಿ?
ನಿನ್ನ ಸಮಾಧಿಯ ಮೇಲೆ ಗಲೀಫ್, ಹೂ, ಚಾದರ
ನನ್ನ ಗೋರಿ ಮೇಲೆ ಒಂದು ದಳವೂ ಇಲ್ಲ
ವಾರಸುದಾರರಿಲ್ಲದ ಪರದೇಶಿ ಗೋರಿ ನನ್ನದು.

ಬಡವರ ಗೋರಿಗೆ ಮಕಮಲ್ಲು ಚಾದರಿಲ್ಲ
ಗುರುತಿನ ಕಲ್ಲಿಲ್ಲ, ನೆರಳಿನ ಮರವಿಲ್ಲ
ಮುಮ್ತಾಜ್ ನೀನೆ ಪುಣ್ಯವಂತೆ ನೋಡು
ತಂಪುಬಿಳುಪಿನ ಸಂಗಮರಮರಿಯ ಛಾವಣಿ
ಕೆತ್ತನೆಯ ಸುಂದರ ಸಮಾಧಿ ನಿನ್ನದು.
ನನ್ನ ಹಾಳುಬಿದ್ದ ಸಮಾಧಿಗೆ ಸುಣ್ಣಬಣ್ಣವಿಲ್ಲ
ಒಣಗಿದ ಹೂವಿಗೂ ಗತಿಯಿಲ್ಲ ನೋಡು.

ನನ್ನ ಕಣ್ಣಿನಿಂದ ಉದುರಿದ ಉಪ್ಪು ನೀರಿಗೆ
ನರಕದ ನಿಗಿನಿಗಿ ಕೆಂಡದ ಬಿಸಿ ಬೂದಿಯಾಯ್ತು.
ಎಲ್ಲರ ಗೋರಿ ಖಬರಸ್ತಾನದಲ್ಲಿದ್ದರೆ ನಿನ್ನದು ಮಾತ್ರ
ಸುಂದರ ಯಮುನೆಯ ತಟದಲ್ಲಿದೆ.
ವಾರಸುದಾರರಿಲ್ಲದ ನನ್ನ ಪರದೇಶಿ ಗೋರಿಗೆ
ಅಸಂಖ್ಯಾತ ಬಡವರ ಕಣ್ಣೀರುಗಳೇ ಕೊಡುಗೆ ನೋಡು.
*****
* ಖೊಟ್ಟಿ ಹಣೆಬರಹ

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ