Home / ಕವನ / ಕವಿತೆ / ಅಂಧೇರಿ ನಗರಿ

ಅಂಧೇರಿ ನಗರಿ

ಎಡೆಬಿಡದೇ ಸುರಿದ ಮಳೆಗೆ
ತತ್ತರಿಸಿದ ಮುಂಬೈ ನಗರಿ
ಚೇತರಿಸಿ ಉಸಿರಾಡುತ್ತಿದ್ದಂತೆಯೇ
ಒಂದರ ಹಿಂದೊಂದರಂತೆ
ಸರಣಿ ಬಾಂಬುಗಳ ಸ್ಪೋಟ
ದುರಂತಗಳ ಮಧ್ಯದಲ್ಲಿಯೇ
ಎದ್ದು ನಿಲ್ಲುತ್ತದೆ ಮುಂಬೈನಗರಿ
ಪಿನಿಕ್ಸ್ ಹಕ್ಕಿಯ ಸಾವಿನಂತೆ
ಮತ್ತೆ ಮತ್ತೆ ಸತ್ತು ಬದುಕುತ್ತದೆ
ಮಾಯಾ ನಗರಿ.

ಹಲವಾರು ಜನಾಂಗಗಳು, ಭಾಷೆಗಳು
ಸೌಹಾರ್ದತೆಯಿಂದ ಬದುಕಿವೆಯಿಲ್ಲಿ
ಕಂಡಿವೆ ಬಿನ್ನತೆಗಳ ಮಧ್ಯೆ ಏಕತೆ
ವಾಣಿಜ್ಯ ನಗರಿಯ ಗರ್ಭದಲ್ಲಿಯೇ
ದುರಂತಗಳ ಅಂಧೇರಿ ನಗರಿ
ಕತ್ತಲೆಯಲ್ಲೂ ಝಾಗಝಾಗಿಸುತ್ತದೆ
ಈ ಮಾಯಾ ನಗರಿ ಮಲಗುವುದೇ ಇಲ್ಲ
ಒತ್ತಡಗಳಲ್ಲಿಯೇ ಬದುಕುತ್ತದೆ.

ಥಳುಕು ಬಳುಕಿನ ಬಾಲಿವುಡ್
ತಾರೆಗಳ ಲೋಕ ಇಲ್ಲಿಯೇ ಇದೆ:
ಭೂಗತ ಜಗತ್ತು ಹೆಣೆದ
ಸಾವಿನ ಸುಳಿಗಳೂ ಇಲ್ಲಿಯೇ ಇವೆ.
ದುರಂತ, ತಲ್ಲಣಗಳ ಮರುಕ್ಷಣವೇ
ಬದುಕು ಚಿಗಿಯುತ್ತದೆ ಇಲ್ಲಿ
ವಿಚಲಿತವಾಗದೆಂದೂ ಸ್ಪೋಟಗಳಿಗೆ
ಎದೆ ನಡುಗಿಸುವ ಶಬ್ದಕ್ಕೂ ಹೆದರದೇ
ಜನಜಂಗುಳಿಯ ಹೊತ್ತು ಮುನ್ನಡೆವ
ಲೋಕಲ್ ಟ್ರೇನುಗಳು ಸಾಲು ಸಾಲು
ಒಂದು ಕ್ಷಣ ಗಕ್ಕನೆ ನಿಂತರೆ ಟ್ರೇನು
ಬದುಕು ಸ್ಥಬ್ಧವಾಗುವುದು ಇಲ್ಲಿ.
ಸಾವಿನ ಕರಿನೆರಳುಗಳ ದಾಟಿದರೆ
ಸ್ಫೋಟದ ಶಬ್ದಕ್ಕೆ ಹರಿದ ಕಿವಿಪಟಲ
ಸಾವು ನೋವಿನ ಆರ್ತನಾದ.
ಭೂಗತ ಉಗ್ರರ ಅಟ್ಟಹಾಸ
ಸರಣಿ ಬಾಂಬುಗಳ ಸ್ಫೋಟ
ಯಾವ ಸಾಧನೆಗಾಗಿ?
ಕೂಡಿ ಬಾಳಿದ ಮುಂಬೈಗೆ
ಅನಾದಿಕಾಲದ ಇತಿಹಾಸವಿದೆ.
ಮಾನವೀಯತೆಯ ಉನ್ನತ ಗುಣವಿದೆ.
ಹಂತಕನಿಗೆ ದೇವರಿಲ್ಲ, ಧರ್ಮಗಳಿಲ್ಲ
ಹಿಂಸೆಯ ಆಯುಷ್ಯವೂ ಅತ್ಯಲ್ಪ.
ಕೊಲ್ಲುವ ಹಂತಕನಿಗೂ ಸಾವು ನಿಶ್ಚಿತ.
*****

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...