Home / ಕವನ / ಕವಿತೆ / ಎಲ್ಲಿಂದಲೋ ಬಂದವರು

ಎಲ್ಲಿಂದಲೋ ಬಂದವರು

ಮಹಾನಗರಗಳ ಕಟ್ಟುವವರು
ಬೀದಿಯಲ್ಲಿ ಮಲಗುವವರು
ಮನೆಮನೆಯ ಮನೆಗೆಲಸ ಮಾಡಿ
ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿಕೊಂಡವರು
ಎಲ್ಲಿಂದಲೋ ಬಂದವರು
ಎಲ್ಲಿಯೂ ನೆಲೆ ಇಲ್ಲದವರು.

ತರಕಾರಿ, ಬೇಳೆ, ಕಾಳು, ಅಕ್ಕಿ ಬೆಲೆ ಗಗನಕ್ಕೇರಿ
ಕೊಳ್ಳಲು ಸಾಧ್ಯವಾಗದ ಸ್ಥಿತಿಯವರು
ಮಳೆಯೂ ಇಲ್ಲ ಬೆಳೆಯೂ ಇಲ್ಲದ ಬೆಂಗಾಡಿನಿಂದ
ಉತ್ತರದ ಗಾಳಿಯಲ್ಲಿ ಗುಳೆ ಬಂದ ಇವರು
ಎಲ್ಲಿಂದಲೋ ಬಂದವರು
ಎಲ್ಲಿಯೂ ನೆಲೆ ಇಲ್ಲದವರು.

ಮನೆಯ ಗಚ್ಚು, ಗಾರೆ ಕೆಲಸ ಮುಗಿವವರೆಗೂ
ಅಲ್ಲಿಯೇ ಠಿಕಾಣಿ ಹೂಡಿ ಮಕ್ಕಳು ಬೀದಿಪಾಲು
ಇವರ ಹೆಣ್ಣು ಮಗು ಕಾಣೆಯಾಗುತ್ತದೆ
ಹರೆಯದ ಹೆಣ್ಣು ಹುಡುಗಿಯೂ ಕಾಣೆಯಾಗುತ್ತಾಳೆ
ಪೋಲೀಸರಿಗೆ ವರದಿಯೂ ಆಗುವುದಿಲ್ಲ
ಎಲ್ಲಿಂದಲೋ ಬಂದವರು
ಎಲ್ಲಿಯೂ ನೆಲೆ ಇಲ್ಲದವರು.

ಪುರುಷರಿಗೂ ಮೀರಿಸುವ ದುಡಿಮೆಯವರು
ಇಟ್ಟಿಗೆ, ಸಿಮೆಂಟು, ಕಲ್ಲು, ಸಲಕರಣೆ ಎತ್ತುವವರು
ಗೇಣು ಹೊಟ್ಟೆಗಾಗಿ ಎಲ್ಲ ಸಹಾಸ ಮಾಡುವವರು
ಇವರಿಗಿಲ್ಲ ಪೆನ್ ಷನ್, ರಿಟಾಯರ್ಮೆಂಟುಗಳು
ಇವರೆಂದಿಗೂ ಸಾಹಸ ಪ್ರಶಸ್ತಿ ಪಡೆದಲಾರದವರು
ಎಲ್ಲಿಂದಲೋ ಬಂದವರು
ಎಲ್ಲಿಯೂ ನೆಲೆ ಇಲ್ಲದವರು.

ಬಯಲು ಆಲಯದೊಳಗೆ ನೆಲೆ ನಿಂತು
ಶೌಚ, ಬಚ್ಚಲುಗಳಿಲ್ಲದ ಟೆಂಟಿನಲ್ಲಿ ಬದುಕು
ಇವರಿಗಿಲ್ಲ ಆಧಾರ, ರೇಶನ್, ಚುನಾವಣಾ ಕಾರ್ಡುಗಳು
ಈ ಕಟ್ಟಡ ಮುಗಿದ ಬಳಿಕ ಮತ್ತೊಂದು
ಅಲೆಮಾರಿಗಳಿಗಿಲ್ಲ ನೆಮ್ಮದಿಯ ನಾಳೆಗಳು.
ಎಲ್ಲಿಂದಲೋ ಬಂದವರು
ಎಲ್ಲಿಯೂ ನೆಲೆ ಇಲ್ಲದವರು
*****

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...