Home / ಕವನ / ಕವಿತೆ / ದಾಮಿನಿ

ದಾಮಿನಿ

ಯಾವ ಹೆಸರಿನಿಂದ ಕರೆಯಲೇ ನಿನಗೆ
ದಾಮಿನಿ, ನಿರ್ಭಯಾ ಏನೋ ಮತ್ತೇನನ್ನೋ|
ಇಲ್ಲಿಯವರೆಗೂ ನಿನ್ನನ್ನು ನೋಡಿಯೇ ಇಲ್ಲ
ನಿನ್ನ ಹೆಸರು ನನಗೆ ಗೊತ್ತೇ ಇಲ್ಲ
ಆದರೂ ನಮ್ಮೆಲ್ಲರ ಆತ್ಮಗಳ ಜಾಲಾಡಿದೆಯಲ್ಲ|

ದುಃಖ ಆವರಿಸಿದೆ ದೇಶದ ಉದ್ದಗಲಕ್ಕೂ
ಪೀಡಿತಗಳ ನ್ಯಾಯಕ್ಕೆ ದಿಲ್ಲಿಯಿನ್ನೂ ಮಲಗಿಲ್ಲ
ಜಾರಿಯಿದೆ ನ್ಯಾಯದ ಹಕ್ಕಿನ ಹೋರಾಟವಿನ್ನೂ
ಗಡಿಗಳಲ್ಲೂ ಸಲ್ಲುತ್ತಿದೆ ಮೌನ ಶೃದ್ಧಾಂಜಲಿ
ಉರಿವ ಕೊಳ್ಳಿ ಹಿಡಿದು ಮನಕಲಕುವ ಪ್ರಾರ್ಥನೆ|

ನಿರಂತರ ಉರಿಯುತ್ತಿರುವ ಈ ಕೊಳ್ಳಿ ಮೇಲಾಣೆ
ಇಷ್ಟಿಷ್ಟೇ ನಿಂತು ಹೋದ ನಿನ್ನ ಉಸಿರಿನಾಣೆ
ಹೊತ್ತಿದ ಬತ್ತಿಗಳು ಉರಿಯಲೇಬೇಕು
ಹೋರಾಟಕೆ ಪ್ರತಿಫಲ ದೊರಕಲೇಬೇಕು
ಒಂದು ದಿನ… ಆ ಒಂದು ದಿನ
ಕಂಡೇ ಕಾಣುವೆವು ನಿನ್ನ ಕಣ್ಣಲ್ಲಿ ನಕ್ಷತ್ರ ಬೆಳಕ|

ದುಃಖದ ಸುನಾಮಿ ಅಲೆಗಳು ಅಪ್ಪಳಿಸುತ್ತಿವೆ
ನೀನಿರುವಲ್ಲಿಂದಲೇ ಒಮ್ಮೆ ಇಣಕಿ ನೋಡು ದಾಮಿನಿ
ಎಲ್ಲರ ಮನದಲಿ ನೀನು ಜೀವಂತವಾಗಿರುವೆ
ಮಾನಿನಯರ ಮಾನ ಕಾಯಲು ಕಾರಣವಾಗಿರುವೆ
ನಿನ್ನಾಣೆ ನಿನ್ನ ನಿಲ್ಲುತ್ತಿರುವ ಉಸಿರಿನಾಣೆ
ಹುಸಿಯಾಗದು ಲಕ್ಷಾಂತರ ಜನರ ಪ್ರಾರ್ಥನೆ.

ಹೋರಾಟದ ದೈತ್ಯ ಅಲೆಗಳ ಮುಂದೆ
ಯಾವ ಶಕ್ತಿಯೂ ನಿಲ್ಲಲಾರದು ನೋಡು
ಹಕ್ಕು ಪಡೆದೇ ತೀರುವ ಛಲವಿದೆ
ಉರಿವ ಕೊಳ್ಳಿ ಹಿಡಿದ ಹೊಸ ವರ್ಷದ ಬೆಳಗು
ಪೀಡಿತ ಹೆಣ್ಣುಗಳಿಗೆ ಸಮರ್ಪಿತ ನೋಡು

ಲೋಕವೇ ಏನಾಗಿದೆ ನಿನ್ನ ಕರುಳಿಗೆ
ದಾಮಿನಿಯ ಉಸಿರು ವ್ಯರ್ಥವಾಗಬೇಕೆ?
ಅವಳು ಬದುಕಿದ್ದಾಳೆ ನನ್ನಲಿ ನಿನ್ನಲಿ ಎಲ್ಲರಲಿ
ಧೈರ್ಯ ಸಾಹಸದ ಕುರುಹಾಗಿ,
ಜೀವನೋತ್ಸಾಹದ ಚಿಲುಮೆಯಾಗಿ
ಬರುವ ನಾಳೆಯ ಭರವಸೆಯ ಬೆಳಕಾಗಿ|

ಹೀಗೆಯೇ ಬಿಡಲಾರೆವು ಆ ಬಲತ್ಕಾರಿಗಳನ್ನು
ಎದೆ ಮೆಟ್ಟಿ ನ್ಯಾಯ ಕೇಳುವ ಬಲವಿದೆ.
ಹಕ್ಕು ಪಡೆದೇ ತೀರುವ ಛಲವಿದೆ.
ಗಲ್ಲು ಶಿಕ್ಷೆ ನೀಡಿಯೇ ತೀರುತ್ತೇವೆ
ಬಲತ್ಕರಿಸಿ, ಸಾಯಿಸಿದ ಎಲ್ಲ ಸೀತೆಯರ ಲೆಕ್ಕ
ಚುಕ್ತಾ ಮಾಡುತ್ತೇವೆ ಇಲ್ಲಿಯೇ ಈ ಭೂಮಿ ಮೇಲೆಯೆ|
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...