Home / ಕವನ / ಕವಿತೆ / ಸೆಲ್ಫೀ ಸಂಭ್ರಮ

ಸೆಲ್ಫೀ ಸಂಭ್ರಮ

ಸೆಲ್ಫೀ ಹಿಡಿದು ಸಂಭ್ರಮಿಸುತ್ತಿರುವ ಅವರು
ನಮ್ಮ ನಾಡಿನವರಲ್ಲ ಬಿಡು ಭಂಟನೆ
ಇಂದು ಜುಲೈ ಐದು, ಎರಡುಸಾವಿರದ ಹದಿನೈದು
ಬದುಕಿದ್ದರೆ ಕಾಸರ್‌ಬಾನು, ಅವಳ ಮಗುವಿಗೆ
ಈಗ ಹದಿಮೂರರ ಹರೆಯ ಮೂಡುತ್ತಿತ್ತು.
ನಿಮ್ಮ ರಕ್ತ ಸಿಕ್ತ ಕ್ರೌರ್ಯದಲ್ಲಿ ಬದುಕುಳಿದಿದ್ದರೆ.
ಬಿಸಿಲನಾಡು ಗುಲಬರ್ಗಾದಿಂದ ಗುಳೆಹೋದ
ಹೊಟ್ಟೆಪಾಡಿನ ಹೆಣ್ಣುಮಗಳು ಕೌಸರ್‌ಬಾನು.

ಇಪ್ಪತ್ತೆರಡರ ಹರೆಯದ ತುಂಬು ಗರ್ಭಿಣಿ
ಕೌಸರಳ ಹೊಟ್ಟೆಗೆ ತ್ರಿಶೂಲದಿಂದ ತಿವಿದು
ಮಗುವ ಬಗೆದು ತ್ರಿಶೂಲಕ್ಕೆ ಸಿಕ್ಕಿಸಿ ಕುಣಿದ
ಅವರು ನಿನ್ನ ರಕ್ಷೆಯಲ್ಲಿರುವ ಏಜೆಂಟರು.
ತನ್ನ ಮಗುವಿನನೊಂದಿಗೆ ಸೆಲ್ಫೀ ಕ್ಲಿಕ್ಕಿಸಲು
ಕೌಸರ್‌ಬಾನು ಕೈಬೀಸಿ ಕರೆಯುತ್ತಿದ್ದಾಳೆ.
ವಿದೇಶಿಯರ ಅಪ್ಪುಗೆಯಲ್ಲಿ ಸೆಲ್ಫಿಗೆ ಪೊಜು
ಕೌಸರಳೊಂದಿಗೆ ಸೆಲ್ಫೀ ತೆಗೆಸಲು
ನಿನಗೆ ಮುಖವಿದೆಯೇ ಭಂಟನೇ?

ಸಂದರ್ಶನದಲ್ಲಿ “ಮನ್ ಕಿಬಾತ್” ಹೇಳುತ್ತೀ
‘ದಿಲ್ ಕೆ ಅಂದರ’ ಒಮ್ಮೆ ಇಣುಕಿ ನೋಡು
ಹೊಟ್ಟೆ ಸೀಳಿಸಿಕೊಂಡು ಒದ್ದಾಡುತ್ತಿದ್ದಾಳೆ ಕೌಸರ್
ಮಾನ ಪ್ರಾಣ ಉಳಿಸಲು ಮೊರೆಯಿಡುತ್ತಿದ್ದಾಳೆ.
ರಕ್ತದ ಮಡುವಿನಲ್ಲಿ ಉರುಳಾಡುತ್ತಿದ್ದಾಳೆ.
ನಿನ್ನ ಕರ್ಣಗಳೇನು ಕೀವುಡಾದವೇ? ಧೈರ್ಯವಿದ್ದರೆ
ಅವಳೊಂದಿಗೆ ಒಂದು ಸೆಲ್ಫೀ ಕ್ಲಿಕ್ಕಿಸಿ ನೋಡು.
ದುಡಿದು ತಿನ್ನುವ ಕೌಸರಳ ಪಾಡಿದು.
ಶಾಸಕ ಎಹ್ಸಾನ್ ಜಾಫ್ರಿಗೂ ಕೊಂದಿರಿ
ಮಗಳು ತೀಸ್ತಾ ಕಟಕಟೆಗೆ ಕರೆಯುತ್ತಿದ್ದಾಳೆ.
ಗುಜುರಾತಿನ ಸೇತುವೆಯಡಿ ಶವದಬೆಟ್ಟವಿದೆ
ಆ ಕೊಳೆತ ಮೂಳೆಗಳು ಕೈಬೀಸಿ ಕರೆಯುತ್ತಿವೆ.
ಅವರೊಂದಿಗೆ ಒಂದು ಬಾರಿ ಒಂದೇ ಒಂದು ಬಾರಿ
ಸೆಲ್ಫೀ ಕ್ಲಿಕ್ಕಿಸಿ ನೋಡು ಚಹಾದಂಗಡಿಯವನೇ.

ಬೆಸ್ಟ್ ಬೇಕರಿಯ ಸುಟ್ಟ ಶವಗಳ ಹೊಗೆಯಲ್ಲಿ
ಕೆಟ್ಟ ಘಮಟು ವಾಸನೆಗೆ ಹೊಟ್ಟೆಯಲ್ಲಿ ತಳಮಳ
ಕೋಮು ಗಲಭೆಯಲಿ-ನೊಂದವರ ಕಣ್ಣೀರು
ಇಂದಿಗೂ ನಿಂತಿಲ್ಲ ದುಃಖದಲೆಗಳ ಅಬ್ಬರ
ನಿನ್ನ ಸೆಲ್ಫೀಯಲ್ಲಿ ಅವರ ಕಣ್ಣೀರ ಚಿತ್ರ
ಹೇಳಿ ನಾಯಕರೆ ಮೂಡಿ ಬರಲಾರದೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...