Home / ಕವನ / ಕವಿತೆ / ಸೆಲ್ಫೀ ಸಂಭ್ರಮ

ಸೆಲ್ಫೀ ಸಂಭ್ರಮ

ಸೆಲ್ಫೀ ಹಿಡಿದು ಸಂಭ್ರಮಿಸುತ್ತಿರುವ ಅವರು
ನಮ್ಮ ನಾಡಿನವರಲ್ಲ ಬಿಡು ಭಂಟನೆ
ಇಂದು ಜುಲೈ ಐದು, ಎರಡುಸಾವಿರದ ಹದಿನೈದು
ಬದುಕಿದ್ದರೆ ಕಾಸರ್‌ಬಾನು, ಅವಳ ಮಗುವಿಗೆ
ಈಗ ಹದಿಮೂರರ ಹರೆಯ ಮೂಡುತ್ತಿತ್ತು.
ನಿಮ್ಮ ರಕ್ತ ಸಿಕ್ತ ಕ್ರೌರ್ಯದಲ್ಲಿ ಬದುಕುಳಿದಿದ್ದರೆ.
ಬಿಸಿಲನಾಡು ಗುಲಬರ್ಗಾದಿಂದ ಗುಳೆಹೋದ
ಹೊಟ್ಟೆಪಾಡಿನ ಹೆಣ್ಣುಮಗಳು ಕೌಸರ್‌ಬಾನು.

ಇಪ್ಪತ್ತೆರಡರ ಹರೆಯದ ತುಂಬು ಗರ್ಭಿಣಿ
ಕೌಸರಳ ಹೊಟ್ಟೆಗೆ ತ್ರಿಶೂಲದಿಂದ ತಿವಿದು
ಮಗುವ ಬಗೆದು ತ್ರಿಶೂಲಕ್ಕೆ ಸಿಕ್ಕಿಸಿ ಕುಣಿದ
ಅವರು ನಿನ್ನ ರಕ್ಷೆಯಲ್ಲಿರುವ ಏಜೆಂಟರು.
ತನ್ನ ಮಗುವಿನನೊಂದಿಗೆ ಸೆಲ್ಫೀ ಕ್ಲಿಕ್ಕಿಸಲು
ಕೌಸರ್‌ಬಾನು ಕೈಬೀಸಿ ಕರೆಯುತ್ತಿದ್ದಾಳೆ.
ವಿದೇಶಿಯರ ಅಪ್ಪುಗೆಯಲ್ಲಿ ಸೆಲ್ಫಿಗೆ ಪೊಜು
ಕೌಸರಳೊಂದಿಗೆ ಸೆಲ್ಫೀ ತೆಗೆಸಲು
ನಿನಗೆ ಮುಖವಿದೆಯೇ ಭಂಟನೇ?

ಸಂದರ್ಶನದಲ್ಲಿ “ಮನ್ ಕಿಬಾತ್” ಹೇಳುತ್ತೀ
‘ದಿಲ್ ಕೆ ಅಂದರ’ ಒಮ್ಮೆ ಇಣುಕಿ ನೋಡು
ಹೊಟ್ಟೆ ಸೀಳಿಸಿಕೊಂಡು ಒದ್ದಾಡುತ್ತಿದ್ದಾಳೆ ಕೌಸರ್
ಮಾನ ಪ್ರಾಣ ಉಳಿಸಲು ಮೊರೆಯಿಡುತ್ತಿದ್ದಾಳೆ.
ರಕ್ತದ ಮಡುವಿನಲ್ಲಿ ಉರುಳಾಡುತ್ತಿದ್ದಾಳೆ.
ನಿನ್ನ ಕರ್ಣಗಳೇನು ಕೀವುಡಾದವೇ? ಧೈರ್ಯವಿದ್ದರೆ
ಅವಳೊಂದಿಗೆ ಒಂದು ಸೆಲ್ಫೀ ಕ್ಲಿಕ್ಕಿಸಿ ನೋಡು.
ದುಡಿದು ತಿನ್ನುವ ಕೌಸರಳ ಪಾಡಿದು.
ಶಾಸಕ ಎಹ್ಸಾನ್ ಜಾಫ್ರಿಗೂ ಕೊಂದಿರಿ
ಮಗಳು ತೀಸ್ತಾ ಕಟಕಟೆಗೆ ಕರೆಯುತ್ತಿದ್ದಾಳೆ.
ಗುಜುರಾತಿನ ಸೇತುವೆಯಡಿ ಶವದಬೆಟ್ಟವಿದೆ
ಆ ಕೊಳೆತ ಮೂಳೆಗಳು ಕೈಬೀಸಿ ಕರೆಯುತ್ತಿವೆ.
ಅವರೊಂದಿಗೆ ಒಂದು ಬಾರಿ ಒಂದೇ ಒಂದು ಬಾರಿ
ಸೆಲ್ಫೀ ಕ್ಲಿಕ್ಕಿಸಿ ನೋಡು ಚಹಾದಂಗಡಿಯವನೇ.

ಬೆಸ್ಟ್ ಬೇಕರಿಯ ಸುಟ್ಟ ಶವಗಳ ಹೊಗೆಯಲ್ಲಿ
ಕೆಟ್ಟ ಘಮಟು ವಾಸನೆಗೆ ಹೊಟ್ಟೆಯಲ್ಲಿ ತಳಮಳ
ಕೋಮು ಗಲಭೆಯಲಿ-ನೊಂದವರ ಕಣ್ಣೀರು
ಇಂದಿಗೂ ನಿಂತಿಲ್ಲ ದುಃಖದಲೆಗಳ ಅಬ್ಬರ
ನಿನ್ನ ಸೆಲ್ಫೀಯಲ್ಲಿ ಅವರ ಕಣ್ಣೀರ ಚಿತ್ರ
ಹೇಳಿ ನಾಯಕರೆ ಮೂಡಿ ಬರಲಾರದೇ?
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...