Home / ಕವನ / ಕವಿತೆ / ಕಾಡುಗೊಲ್ಲತಿಯರ ಪಾಡು

ಕಾಡುಗೊಲ್ಲತಿಯರ ಪಾಡು

ಗೊಲ್ಲರ ಹಟ್ಟಿಯಾಚೆಗಿನ ಕಾಡಿನಲ್ಲಿ
ಬೀಡು ಬಿಟ್ಟಿವೆ ಗೊಲ್ಲತಿಯರ ಕುಟೀರ
ಶಿಲುಬೆಗೇರುವ ಯಾತನಾ ಶಿಬಿರ
ತಿಂಗಳಿಗೊಂದಾವರ್ತಿ ಊರ ಹೊರಗೆ ನಲುಗುವ
ಗೊಲ್ಲತಿಯರ ಹೆಣ್ಣು ಸಂವೇದನೆಗಳು
ಊರೊಳಗಿದ್ದರೆ ಬಾಣಂತಿ, ಮುಟ್ಟಾದ ಹೆಣ್ಣು
ಮನೆಯಲ್ಲಿ ಹಾವು ಚೇಳು ಬರುವವಂತೆ.

ಗೊಲ್ಲರ ಹಟ್ಟಿಯಲಿ ಸೂತಕದ ಮನೆ
ನಾಗರೀಕ ಲೋಕದ ನಿರ್ಲಜ್ಜತೆಗೆ ಪ್ರತೀಕ
ಸರ್ಕಾರವೂ ಕಟ್ಟಿಸಿದೆ ಸೂತಕದ ಮನೆಗಳು
ಹುಲ್ಲ ಗುಡಿಸಲು ಬದಲಿಗೆ ಇಟ್ಟಿಗೆ ಗಾರೆ
ನೀರಿಲ್ಲ, ಬೆಳಕಿಲ್ಲ, ಕಿಟಕಿ, ಬಾಗಿಲುಗಳಿಲ್ಲ
ಶೌಚಾಲಯಗಳೂ ಇಲ್ಲದ ಗೂಡು
ಎದ್ದು ನಿಂತವು ಊರಾಚೆ ಕೃಷ್ಣಕುಟೀರಗಳು
ಮೌಡ್ಯದ ಆಚರಣೆಗೆ ಕೊನೆಯೇ ಇಲ್ಲವೇ?

ಗೊಲ್ಲರ ಹಟ್ಟಿಯ ಆ ಹೆಣ್ಣು
ಗೊಡ್ಡು ಸಂಪ್ರದಾಯ, ಕಟ್ಟಳೆಗೆ ತಲೆಬಾಗಿ
ಹಿರಿಯರ ಮಾತಿಗೆ ಬೆಲೆ ಕೊಟ್ಟು
ಮಳೆ, ಚಳಿ, ಗಾಳಿ, ಬಿಸಿಲು, ಕಾಡುಪ್ರಾಣಿ
ಹುತ್ತ – ಹಾವಿನ ಹರಿದಾಟ ಸರಪರ
ಇನ್ನೆಷ್ಟು ದಿನ ಸಹಿಸಬೇಕಿದೆಯೋ
ಅನಿಷ್ಟಗಳ ಅಳಿಸುವ ಸಂತರ ಆಗಮನಕ್ಕೆ
ಇನ್ನೆಷ್ಟು ದಿನ ಕಾಯಬೇಕಾಗಿದೆಯೋ ಅವಳು ?

ನೂರಾರು ಆವಿಷ್ಕಾರ, ವಿಜ್ಞಾನ, ಸಾಧನೆ
ಮೆಟ್ಟಿಲ್ಲ ಅವಳು ನಾಗರೀಕ ಮೆಟ್ಟಿಲು
ಮುಟ್ಟು, ಬಸಿರು, ಬಾಣಂತನಗಳ ಮಧ್ಯೆ
ಗೊಲ್ಲರ ಹಟ್ಟಿಯ ಹೆಣ್ಣಿನ ಬದುಕು
ಬೆಂಕಿಯಲಿ ನಲುಗುವ ಕಾಡ ಹೂಗಳು
ಅರಣ್ಯದ ಭಯಂಕರ ಪ್ರಾಣಿಗಳ ಮಧ್ಯೆ
ಕಾಡುಗೊಲ್ಲತಿಯರ ಅಘೋರಿ ವಾಸ.

ಆಗಲೇ ಹುಟ್ಟಿದ ಹಸಿ ಮಾಂಸದ ಮುದ್ದೆಗೆ
ಹೊಕ್ಕಳ ಬಳ್ಳಿಯನ್ನು ಕಚ್ಚಿ ಇಲಿ, ಬೆಕ್ಕು
ಜನರಿಲ್ಲ, ದೀಪವಿಲ್ಲ, ವಿಷಜಂತುಗಳ ಹರಿದಾಟ
ಕಾಡಿನ ಕ್ರೂರ ಮೃಗಗಳ ಘರ್ಜನೆ, ಸದ್ದು, ಸಪ್ಪಳ
ತಾಯಿ ಮಗುವಿನ ಮೌನ ರೋದನದ ಬಿಕ್ಕು
ಅರಿವಿನ ಸೂರ್ಯ ಗೊಲ್ಲರ ಗುಡಿಸಲಿಗೆ ಬರಲಿಲ್ಲ.
ಬೆಳೆದ ನಾಗರೀಕತೆ ಕಿವಿಗೆ ತಟ್ಟಲಿಲ್ಲ.

ದಿನ ದಿನದ ಹಿಂಸೆಗೆ ಕೊನೆ ಹೇಳಿ
ಗರ್ಭಕೋಶಕೇ ಕತ್ತರಿ ಹಾಕಿ ಗೊಲ್ಲತಿ
ಮೌಡ್ಯಕ್ಕೆ ಗರ್ಭವೇ ಬಲಿ
ಮುಟ್ಟಿನ ಕಟ್ಟು ಬಿಡಿಸಿಕೊಂಡಳು
ಮುಕ್ತಿ ಹಾಡಿದಳು ಕೃಷ್ಣ ಕುಟೀರಕೆ
ಮುಟ್ಟು ನಿಂತು ಹುಟ್ಟಿದ….
ಪಿಂಡಗಳಿಗೆ ಹಿಡಿ ಶಾಪ ಹಾಕುತ್ತ
ಕಳಂಕ ಕಳಚಿ ಯಾತನೆಗೆ ಕೊನೆ
‘ಹೆಣ್ಣು ಸಂತಾನವೇ ಪ್ರಾಪ್ತವಾಗದಿರಲಿ’
ಹಿಡಿ ಶಾಪ ಹಾಕಿದಳು ಮೌಡ್ಯಕ್ಕೆ
ಗರ್ಭವನ್ನೇ ಕಿತ್ತು ಬಿಸಾಕಿದಳು.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...