Home / ಕವನ / ಅನುವಾದ / ಶ್ರೀಹರೀ ಶ್ರೀಹರೀ ಶ್ರೀಹರೀ

ಶ್ರೀಹರೀ ಶ್ರೀಹರೀ ಶ್ರೀಹರೀ

ಮೂಲ: ಅರವಿಂದ ಗುಹಾ

ಹಿಂದೊಮ್ಮೆ ಒಬ್ಬ ಬೆಲೆವೆಣ್ಣನ್ನು ಕೂಡಿದೆ
ಎರಡೂವರೆ ರೂಪಾಯಿ ಕೊಟ್ಟು,
ಕತ್ತಲ ಓಣಿಯಲ್ಲಿ ಪಡೆದೆ, ಲೆಕ್ಕಾಚಾರದ ಪ್ರೀತಿ
ಕೊಟ್ಟ ಹಣಕ್ಕೆ ತಕ್ಕಷ್ಟು;
ನೆನಪಿಸಿಕೊಳ್ಳಲು ಅವಳ ಎಷ್ಟೋ ಯತ್ನಿಸುತ್ತೇನೆ
ಸ್ಮೃತಿಯ ತಳದಾಳಕ್ಕೇ ಜಾರಿ,
ಏನು ಮಾಡಿದರು ಸಹ ನೆನಪಾಗುತ್ತಿಲ್ಲವೇ
ಶ್ರೀಹರೀ ಶ್ರೀಹರೀ ಶ್ರೀಹರೀ!

ಅವಳ ಹೆಸರೆಂಥದೋ ನೆನಪಾಗುತ್ತಿಲ್ಲ ಈಗ
ಘಟನೆ ಬಲು ಹಿಂದೆ ನಡೆದದ್ದು,
ಏನವಳ ಹೆಸರು? ಮಾಲತಿಯೋ, ತರಂಗಿಣಿಯೊ
ರಾಧಾಮಣಿಯೊ, ನೆನಪು ಮಬ್ಬು;
ಇರಲಿ ಬಿಡಿ ಅದನ್ನೀಗ, ಒಂದು ಮಾತಂತು ನಿಜ
ಅವಳ ಜಡೆ ಬೆನ್ನಲ್ಲಿ ಜಾರಿ,
ಕಾಡಿಗೆ ಹೊಳಪಿನ ನೋಟ ಎದೆ ಸೀಳುವಂತಿತ್ತು
ಶ್ರೀಹರೀ ಶ್ರೀಹರೀ ಶ್ರೀಹರೀ!

ಎಷ್ಟನೆಯ ಸ್ವರ್ಗಕ್ಕೋ ರವಾನೆಯಾದಂತಿದ್ದೆ
ರತಿದೇವಿ ರೆಕ್ಕೆಯನ್ನೇರಿ,
ರೆಕ್ಕೆಯ ಸ್ಪರ್ಶವಷ್ಟೆ ನೆನಪಿನಲ್ಲುಳಿದಿದೆ
ಉಳಿದ ವಿವರಗಳೆಲ್ಲ ತೀರಿ;
ವಿಗ್ರಹದ ಮೂಗು ತುಟಿ ಕೈಕಾಲು ಕೆತ್ತನೆ
ಹೂತುಹೋಗಿದೆ ಮರವೆಯಲ್ಲಿ,
ಕಡೆದಿದ್ದ ಕಲ್ಲಷ್ಟೆ ನೆನಪಲ್ಲಿ ಉಳಿದಿದೆ
ಶ್ರೀಹರೀ ಶ್ರೀಹರೀ ಶ್ರೀಹರಿ!

ಕುರುಡನಿಗೆ ಕಂಡೀತು ಏನು? ಆದರೆ ನೋಡಿ,
ಕತ್ತಲೆಯನ್ನೆ ಅವನು ಹಾಡಬಹುದು,
ಕತ್ತಲೆಯಲ್ಲಿ ನಾನು ಮಟ್ಟೊಂದ ರಚಿಸಿದರೆ
ಹಾಡಲು ಅದಕ್ಕೆ ಒಂದು ಗೀತೆ ಬೇಕು;
ಎರಡೂವರೆ ರೂಪಾಯಿ ಕೊಂಡ ಪ್ರೀತಿಯು ಹೀಗೆ
ಹಾಡೊಂದು ಹುಟ್ಟಲು ಆಯ್ತು ದಾರಿ,
ಆಕಾಶ ಪುಟ್ಟ ಕೊಳದಲ್ಲಿ ಪ್ರತಿಬಿಂಬಿಸಿತು
ಶ್ರೀಹರೀ ಶ್ರೀಹರೀ ಶ್ರೀಹರೀ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...