Home / ಕವನ / ಕವಿತೆ / ವಚನ ಸಂಪತ್ತು

ವಚನ ಸಂಪತ್ತು

ಜೀವನದ ನೆನಹುಗಳ ಮನದಿ ಮೆಲುಕಾಡಿಸಲು
ನೀನಿತ್ತ ವಚನಗಳ ನುಡಿಗೆಕುಲುಕಾಡಿಸಲು ||

ವಚನ ದೇಗುಲದಲ್ಲಿ ಕಂಗೊಳಿಸುತಿದೆ ಶಿಲ್ಪ
ವಚನವೊಂದರಲಿ ಕಂಡುಬರುತಿದೆ ಕಲ್ಪ ||

ವಚನವೆಂದರೆ ಒಂದು ಗೊಂಚಲಿನ ಸವಿದ್ರಾಕ್ಷಿ
ನುಡಿನುಡಿಗು ರಸದುಂಬಿ ಬೀಗಿನಿಂತಿದೆ ಸಾಕ್ಷಿ||

ಕನ್ನಡದ ಪುಣ್ಯವದು ಹಣ್ಣಿಬಂದಿಹ ಕಾಲ
ಕನ್ನಡ ವಾಣಿ ಮನದಿಂಬುಗೊಂಡಿಹ ಕಾಲ ||

ಮಾತಿಗೆಟುಕದ ಭಾವ ಶಬ್ದದಲಿ ತುಂಬಿಟ್ಟು
ಚಿನ್ನರನ್ನಗಳಾಸ್ತಿ ಹರಸಿರುವೆ ನಮಗಿಟ್ಟು||

ನಿನ್ನ ಬಾಯಲಿ ನುಡಿಯು ಶ್ರೀಮಂತವಾಗಿತ್ತು
ನಿನ್ನ ಸಹವಾಸದಲಿ ನುಡಿಗೆ ಮೈ ಬೀಗಿತ್ತು ||

ತಲೆದಡವಿ ತಣಿಸಿತ್ತು ವಚನಾರ್ಥ ತಂಗಾಳಿ
ಮೈದಡವಿ ಸುಖಿಸಿತ್ತು ಸ್ವಚ್ಛಂದ ಸುಳಿಗಾಳಿ ||

ವಚನಗಳ ಬಿರುಗಾಳಿ ಒಮ್ಮೆ ಹುಡಿಯೋಡಿಸಿತು
ಒಮ್ಮೆ ಸುಟ್ಟುರಿಗಾಳಿ ದುರ್ಗಂಧವಡಗಿಸಿತು ||

ಮನೆಮನವ ತಟ್ಟಿತ್ತು ಸೊಡರು ಬೆಳ್ ಬೆಳಕಾಗಿ
ಮನಮನವ ತಟ್ಟಿತ್ತು ಮುದ್ದಿಡುವ ಶಿಶುವಾಗಿ ||

ದಿವ್ಯಲೋಕದ ಭಾವ ನೆಲಕಿಳಿಸಿ ತಂದಿತ್ತು
ಭವ್ಯರೊಳು ಸಲಿಗೆ ಸಲ್ಲಾಪಗಳಿಗಿಂಬಿತ್ತು ||

ವಚನದಲಿ ಹುದುಗಿರುವ ಪರುಷಮಣಿ ಬಲಗೊಂಡು
ಕಬ್ಬುನಕೆ ತಗಲಿ ಹೊನ್ನಾಗಿಸುವ ಪರಿಯೊಂದು ||

ನಿನ್ನ ವಚನವು ಹಾಲಹೊಳೆಯಾಗಿ ಹರಿದಿತ್ತು
ತೀರದಲಿ ಸಕ್ಕರೆಯ ಮಳಲಾಗಿ ಹರಹಿತ್ತು ||

ತವರಾಜದಂಥ ಕೆಸರಾಗಿತ್ತು ತಳದಲ್ಲಿ
ಸವಿದಿನಿಸು ರಸಿಕನಿಗೆ ಹರಿದೋಡಿ ಸವಿದಲ್ಲಿ ||

ಅನುಭಾವದೆಸಕಿನಲಿ ತುಂಬಿತ್ತು ಹೆಜ್ಜೇನು
ಹದವರಿತು ಸವಿಯೆ ಸಂಜೀವ ಸುಧೆ ಹೆಚ್ಚೇನು ||

ಮಾತುರೀತಿಗಳಲ್ಲಿ ಭಾವದಲಿ ಮಿಗಿಲಾಗಿ
ಶಾಶ್ವತದ ಸಾಹಿತ್ಯವೆನಿಸಿತ್ತು ಮುಗಿಲಾಗಿ

ಕಳೆದುಹೋದವು ಇಂದು ಎಂಟು ಶತಮಾನಗಳು
ಅಚ್ಚಳಿಯದುಳಿದಿಹವು ಮೈಗೊಂಡ ಹೊನ್ನುಗಳು ||

ಚಿಕ್ಕ ಮೂರುತಿಗಿಹುದು ಬಿತ್ತರದ ಘನಕೀರ್ತಿ
ಮಾತು ಮಾತಿಗು ಮಿಂಚಿ ಕಣ್ಕುಕ್ಕಿಸುವ ರೀತಿ ||

ಸಾಹಿತ್ಯ ಶಾರದೆಯ ಸಿರಿಮುಡಿಗೆ ಹೂವಾಗಿ
ಸತ್ತಿರುವರೆದೆ ಸೇರಿ ಕಳೆಯಿಡುವಕಾವಾಗಿ ||

ಅನುದಿನವು ಹೊಗರೇರಿ ಹೊಳೆಯುವದು ಈ ವಚನ
ಚಣಚಣವು ತಣಿಸುತಿದೆ ಅನುಭಾವದೀ ರಚನ ||

ವಚನ ಸುಂದರಿಯಲ್ಲ ಮನಸೆಳೆವ ನಲ್ಗೂಸು
ಎಂತು ಮುದ್ದಿಸಲದನು ಮನಕಾಗುವದು ಲೇಸು ||

ಸವಿದು ಮೆಲುಕಾಡಿಸಲು ಅರ್ಥ ಸ್ವಾರಸ್ಯವಿದೆ
ಎಣಿಸಿ ಯೋಚಿಸಿದಲ್ಲಿ ಬುದ್ಧಿ ವೈಶಾಲ್ಯವಿದೆ ||

ಕನ್ನಾಡ ಈ ಬೆಳೆಯು ಅಕ್ಷಯದ ಸಂಪತ್ತು
ಅಟ್ಟುಣ್ಣ ಬಲ್ಲವಗೆ ನೆತ್ತಿಗನ್ನವದಾಯ್ತು ||

ಯಾವ ಮನ್ವಂತರಕು ಈ ವಚನ ಕಲ್ಪತರು
ಕಳೆಯುವದು ಮಾನವನ ಬೆಕ್ಕಸದ ನಿಟ್ಟುಸಿರು ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...