Home / ಕಥೆ / ಜನಪದ / ಗರತಿ ಸಂಗವ್ವ

ಗರತಿ ಸಂಗವ್ವ

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು –
“ಹತ್ತೂರು ಕೊಡುತ್ತೇನೆ, ಮುಖತೋರಿಸು.”

“ಹತ್ತೂರು ಕೊಟ್ಟರೂ ನನ್ನ ನತ್ತಿನ ಬೆಲೆಯಾಗುವುದಿಲ್ಲ.  ಅತ್ತೆಯ ಹೊಟ್ಟೆಯಲ್ಲಿ ಹುಟ್ಟಿದವನು ಪ್ರತ್ಯಕ್ಷ ಅರ್ಜುನನೇ ಆಗಿದ್ದಾನೆ. ಆತನ ಕಾಲಕೆರವಿನ ಬೆಲೆ ನಿನಗಿಲ್ಲ” ಎಂದು ಖಂಡತುಂಡವಾಗಿ ನುಡಿದಳು ಸಂಗಮ್ಮ.  ಆದರೇನು, ಹಸಿದ ಹುಲಿಯನ್ನು ಕೆಣಕಿದೆನಲ್ಲ ಎಂದು ಎದೆಗುದಿ ಉಂಟಾಗದೆ ಇರಲಿಲ್ಲ ಆಕೆಗೆ.

ಹೊಳೆಗೆ ಹೇಗೆ ಹೋದಳೋ ನೀರು ಹೇಗೆ ತುಂಬಿದಳೋ ಆಕೆಗೆ ತಿಳಿಯಲಿಲ್ಲ. ತುಂಬಿದ ಕೊಡವನ್ನು ತಲೆಯಮೇಲೆ ಹೊತ್ತುದೇ ತಡ, ಗಾಳಿವೇಗದಿಂದ ಬಂದು ಮನೆಯನ್ನು ಸೇರಿದಳು. ಹೊಟ್ಟೆಯಲ್ಲಿ ಸಾಸಿವೆಯೆಣ್ಣೆ ಕಲೆಸುತ್ತಿತ್ತು.

ಮನೆಗೆ ಬಂದು ನೀರುಕೊಡವನ್ನು ಇಳುಹಿದವಳೇ ತಲೆಕಟ್ಟಿಕೊಂಡು ಸಂಗವ್ವ ಮಲಗಿಯೇಬಿಟ್ಟಳು.

ಕೆಲಸಕ್ಕೆ ಹೋದ ಮಾವಯ್ಯನು ಮನೆಗೆ ಬಂದು, ಸಂಗವ್ವ ಮಲಗಿದ್ದನ್ನು ಕಂಡನು. ತಲೆದಿಂಬಿನ ಬಳಿ ನಿಂತುಕೊಂಡು – “ಯಾಕೆ ಸಂಗಮ್ಮ ಮಲಗಿರುವೆಯಲ್ಲ” ಎಂದನು.

“ಕೈನೋವು, ಕಾಲುನೋವು. ವಿಚಿತ್ರವಾದ ಹಲವು ನೋವು ಮಾವಯ್ಯ.  ಸಾಯುತ್ತೇನೆ, ನೋವು ತಾಳಲಾಸಲ್ಲ – ತವರವರಿಗೆ ಹೇಳಿಕಳಿಸಿರಿ” ವಿನಯದಿಂದ ಸಂಗವ್ವ ನುಡಿದಳು.

ಕೈಹಿಡಿದ ಪತಿದೇವರು ಹೊರಗಿನಿಂದ ಬಂದು ಮಂಚದ ಬಳಿ ನಿಂತು ಕೇಳುತ್ತಾನೆ – “ಯಾಕೆ, ಮಲಗಿಕೊಂಡೆ ಕೆಳದಿ ?”

ಏನು ಹೇಳಲಿ, ಸಂದುಸಂದಿನ ನೋವು. ಸೂಜಿಯೂರುವಸ್ಟು ಸಹ ಸ್ಥಳ ನೋವಿಲ್ಲದಿಲ್ಲ. ಸಾಯುತ್ತೇನೆ ನನ್ನ ದೊರೆಯೇ ಹೆಚ್ಚಿನ ನೋವು !

ಹಾದಿಬೀದಿ ಉಡುಗಿಸಿ, ಹಾಲಿನ ಚಳಿಕೊಡಿರಿ. ಹಾದಿಯಲ್ಲಿ ನಿಂತವರೆಲ್ಲ ಬದಿಗಾಗಿರಿ. ಸಂಗಮ್ಮನ ತಾಯಿ ಅಳುತ್ತ ಬರುತ್ತಿದ್ದಾಳೆ.

ತಿಪ್ಪೆಯನ್ನು ಉಡುಗಿಸಿರಿ, ತುಪ್ಪದ ಚಳಿಕೊಡಿರಿ. ತಿಪ್ಪೆಯೊಳಗಿನ ಮಂದಿಯೆಲ್ಲ ಬದಿಗಾಗಿರಿ. ಸಂಗಮ್ಮನ ತಂದೆ ಅಳುತ್ತ ಬರುತ್ತಿದ್ದಾನೆ.

ಸಂಜ್ಞೆಯಿಂದ ತಾಯಿತಂದೆಗಳನ್ನು ಹತ್ತಿರಕ್ಕೆ ಕರೆದು ಕಿವಿಯಲ್ಲಿ ಹೇಳಿದಳು – ತಾನು ಹೇಳಬೇಕಾದುದನ್ನು. ಆ ಜೀವಬಿಟ್ಟು ಮೃತ್ಯುವನ್ನು ಗೆದ್ದಳು. ಮುಗಿಲ ದಾರಿಯಲ್ಲಿ ನಿಂತು ಕಿತ್ತೂರದೊರೆಯನ್ನು ಈಡಾಡಿದಳು.

ತಲೆಯಲ್ಲಿ ಚಂಡುಹೂವಿನ ದಂಡೆಯಿಂದ ಶೋಭಿಸುತ್ತಿರುವ ಸಂಗಮ್ಮನನ್ನು ಬಾಳೆಯ ಬನದಲ್ಲಿ ಬಯತಿರಿಸಿದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...