Home / ಕವನ / ಅನುವಾದ / ಗ್ರೀಕ್ ಹನಿಗವಿತೆಗಳು

ಗ್ರೀಕ್ ಹನಿಗವಿತೆಗಳು

ಈ ಹೆಣ್ಣು ಕೈಕೊಟ್ಟದ್ದು ಒಬ್ಬನಿಗೆ ಮಾತ್ರ
ಆದ್ದರಿಂದಲೇ
ಸತ್ತಮೇಲೂ ಇವಳ ಪಾತಿವ್ರತ್ಯ ಪ್ರಸಿದ್ದಿಗೆ ಪಾತ್ರ.
– ಅಜ್ಞಾತ

ಬದುಕಿದ್ದಾಗ ಸರ್ವಾಧಿಕಾರಿಗೆ
ಕಟ್ಟಿದ್ದೇ ದೇವಾಲಯ ಎಲ್ಲೆಲ್ಲೂ
ಸತ್ತಾಗ ಅವನ ಗೋರಿ ನಿಲ್ಲಿಸಲು ಸಹ
ಇರಲಿಲ್ಲ ಒಂದು ಕಲ್ಲು
– ಅಜ್ಞಾತ

ಕದ್ದೋಡಿ ಬಂದ ಡೆಮಿಟ್ರಿಯಸ್
ಕಾಳಗದಿಂದ
ಎಸೆದು ಭಲ್ಲೆ ಗುರಾಣಿ ನಿರ್ಲಜ್ಜೆಯಿಂದ.
ಬಾಗಿಲು ತೆರೆದ ತಾಯಿ
ಇರಿದು ಕೂಗಿದಳು “ನಾಯಿ!
ನಿನ್ನ ಧೈರ್ಯಕ್ಕೆ ಊರು ನಾಚೀತು, ಸಾಯಿ!’
– ಇರೀಸಿಯಸ್. ಕ್ರಿ.ಪೂ. ಒಂದನೆಯ ಶತಮಾನ

ಕೇಶ ದಂತ ಬಣ್ಣ ಸುಣ್ಣ
ಏನೆಲ್ಲ ಕೊಂಡೆ ಚೆನ್ನೆ
ಕೊಳ್ಳಬಹುದಿತ್ತಲ್ಲೆ ಅದರ ಬದಲು
ಭರ್ಜರಿ ಮುಖವನ್ನೆ!
– ಲ್ಯುಸಿಲಿಯಸ್, ಕ್ರಿ.ಪೂ. ಒಂದನೆಯ ಶತಮಾನ

ನಾನು ಮುತ್ತಿಟ್ಟಿದ್ದು ತಪ್ಪು, ಪಾಪ ಎನ್ನಿಸಿದರೆ ನಿನಗೆ
ಶಿಕ್ಷಿಸಿಬಿಡು ಕೂಡಲೆ
ಅದನ್ನು ಹಿಂತಿರುಗಿಸಿ ನನಗೆ
– ಸ್ಟ್ರ್ಯಾಟೊ. ಕ್ರಿ.ಪೂ. ಎರಡನೆಯ ಶತಮಾನ

ಪರಿಚಯ ಕೊಲ್ಲುತ್ತದೆ ಪ್ರೀತಿಯನ್ನ
ಇಲ್ಲ, ಕಾಲ ಮೆಲ್ಲುತ್ತದೆ ನಿಧಾನ
ಎರಡಕ್ಕೂ ತಗ್ಗದಿದ್ದರೆ ಬೆಂಕಿ
ಸ್ವಾಗತಿಸುತ್ತಾನೆ ಪ್ರೇಮಿ ನೇಣನ್ನ
– ಕ್ರೇಟ್ಸ್, ಕ್ರಿ.ಪೂ. ಎರಡನೆಯ ಶತಮಾನ

ವಾಗ್ಮಿಗಳೇ ಬನ್ನಿ ಈಗ
ಬೇಕಾದಷ್ಟು ವಾಕ್ಚಾತುರ್ಯ ತೋರಿ
ಮಹಾವಾಗ್ಮಿ ಆಂಫಿಲೋಕಸನ
ತುಟಿಯನ್ನು ಹೊಲಿದಿದ ಈ ಗೋರಿ
– ಸೇಂಟ್ ಗ್ರಿಗರಿ, ಕ್ರಿ.ಶ. ನಾಲ್ಕನೆಯ ಶತಮಾನ

ಬಡವನಿಗೆ ಸಾವೇ ಇಲ್ಲ.
ಏಕೆಂದರೆ ಅವನು ಬದುಕಿರಲೇ ಇಲ್ಲ;
ಉಸಿರಾಡಲಿಲ್ಲವೆ ಎಂದರೆ
ಅದು ಒಡಲೆನ್ನುವ ಗೋರಿಯಲ್ಲಿ
ಹಣವಿಲ್ಲದೆ ಸಾವು ಸಹ ಸಿಕ್ಕೀತು ಎಲ್ಲಿ?
– ಪಾಲಡಾಸ್, ಕ್ರಿ.ಶ. ಐದನೆಯ ಶತಮಾನ

ನಾಲಿಗೆ ಇಲ್ಲದ ಛಾವಣಿ
ಮಿದುಳಿಲ್ಲದ ಬೋಗುಣಿ
ಆಲಿಯಿರದ ಖಾಲಿಚಿಪ್ಪು
ತಳವಿಲ್ಲದ ಭರಣಿ
ಮೊನ್ನೆ ಹಾಗೆ ಉರಿದ ಬದುಕು
ಈಗ ಬರೀ ಬುರುಡ
ನಾಯಿ ಹೊಯ್ದು ಹೋದರು ಸಹ
ಕಚ್ಚಲಿಲ್ಲ ದವಡೆ!
– ಅಜ್ಞಾತ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...