Home / ಕವನ / ಕವಿತೆ / ಪ್ರತಿಜ್ಞೆ

ಪ್ರತಿಜ್ಞೆ

ಸ್ವಚ್ಛಂದ ಛಂದದಲ್ಲಿ
ಜಲಕ್ರೀಡಾವೃತ್ತದಲ್ಲಿ
ಅನುದಿನವು ತೆರೆಗಳು ಹಿಡಿವ ತಾಳಲಯದಲ್ಲಿ
ಗೀತವನೊರೆದೆನೆಂದು ಗೀಳ್‌ ಮಾಡಬೇಡ!
ಸಮುದ್ರವ ಸೆರೆಹಿಡಿದವರುಂಟೆ?

ಬಾವಿಯ ತೋಡಿ ಮುನ್ನೀರ ಬತ್ತಿಸಬಹುದೆ?
ಅಬ್ಜ ಶಬ್ದಗಳ ಪ್ರಾರಬ್ಧದಲ್ಲಿ ಸಹ
ಮಹಾಬ್ಧಿಯ ಕಣವೊಂದು ಸೆರೆಸಿಕ್ಕದಯ್ಯ!
ಕೊಡದಿರು ಶರಧಿಗೆ ಷಟ್ಟದಿಯ ದೀಕ್ಷೆಯನು!

ನೀರುನೀರಾಗಿ ಬೆಳಗು.
ನಾದಮಯವಾಗು ಹೊರಗು ಒಳಗು.
ಹಿಗ್ಗುಹಿಗ್ಗಾಗಿ ಹರಿ, ತಗ್ಗುತಗ್ಗಾಗಿ ಸರಿ.
ತೆರೆತೆರೆಯಾಗಿ ತೆರೆದರೆ
ನೊರೆನೊರೆಯಾಗಿ ಹರಿದೀತು.
ಉಕ್ಕಲಿ-ಚಿಮ್ಮಲಿ ಸಮುದ್ರದ ಸ್ವಾತಂತ್ರ್ಯ!
ಮಿಕ್ಕಲಿ-ಮೀರಲಿ ಮುನ್ನೀರ ನಿರ್ವಯಲು.
ಜರ್ಜರವಾದುದೆಲ್ಲ ಮುಳುಗಿ ಹೋಗಲಿ,- ಜಲಸಮಾಧಿಯಲ್ಲಿ.
ಹೊಸದೆಲ್ಲ ಹುಟ್ಟಿ ಬರಲಿ-ಹೃದಯದಾಳದಲ್ಲಿ!

ಬೇಡಯ್ಯ! ಬಂಧಗಳ ಬಂದಿವಾಸ;
ಬರೆದದ್ದೇ ಬ೦ಧುರವಾಗಬಹುದು.
ಸಾಕಯ್ಯ! ವೃತ್ತಗಳಾವರ್ತ:
ನಿನ್ನ ಮಣಿತವಿರಲಿ ಸಮುದ್ರದ ಕುಣಿತದಂತೆ!
ತರಂಗತ್ತರಂಗಗಳನೊಳಕೊಂಡ
ನವರಂಗ ವಾರಿಧಿಯಂತೆ

ವೃತ್ತಬಂಧಗಳು ಸಂಧಿಸಿ ಬಂದ
ಸಮುದ್ರವಾಗು, ಕವಿಯೆ!
ಕವಿಗಳ ಸಮುದ್ರಗುಪ್ತನಾಗು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...