Home / ಕವನ / ಕವಿತೆ / ಪ್ರತಿಜ್ಞೆ

ಪ್ರತಿಜ್ಞೆ

ಸ್ವಚ್ಛಂದ ಛಂದದಲ್ಲಿ
ಜಲಕ್ರೀಡಾವೃತ್ತದಲ್ಲಿ
ಅನುದಿನವು ತೆರೆಗಳು ಹಿಡಿವ ತಾಳಲಯದಲ್ಲಿ
ಗೀತವನೊರೆದೆನೆಂದು ಗೀಳ್‌ ಮಾಡಬೇಡ!
ಸಮುದ್ರವ ಸೆರೆಹಿಡಿದವರುಂಟೆ?

ಬಾವಿಯ ತೋಡಿ ಮುನ್ನೀರ ಬತ್ತಿಸಬಹುದೆ?
ಅಬ್ಜ ಶಬ್ದಗಳ ಪ್ರಾರಬ್ಧದಲ್ಲಿ ಸಹ
ಮಹಾಬ್ಧಿಯ ಕಣವೊಂದು ಸೆರೆಸಿಕ್ಕದಯ್ಯ!
ಕೊಡದಿರು ಶರಧಿಗೆ ಷಟ್ಟದಿಯ ದೀಕ್ಷೆಯನು!

ನೀರುನೀರಾಗಿ ಬೆಳಗು.
ನಾದಮಯವಾಗು ಹೊರಗು ಒಳಗು.
ಹಿಗ್ಗುಹಿಗ್ಗಾಗಿ ಹರಿ, ತಗ್ಗುತಗ್ಗಾಗಿ ಸರಿ.
ತೆರೆತೆರೆಯಾಗಿ ತೆರೆದರೆ
ನೊರೆನೊರೆಯಾಗಿ ಹರಿದೀತು.
ಉಕ್ಕಲಿ-ಚಿಮ್ಮಲಿ ಸಮುದ್ರದ ಸ್ವಾತಂತ್ರ್ಯ!
ಮಿಕ್ಕಲಿ-ಮೀರಲಿ ಮುನ್ನೀರ ನಿರ್ವಯಲು.
ಜರ್ಜರವಾದುದೆಲ್ಲ ಮುಳುಗಿ ಹೋಗಲಿ,- ಜಲಸಮಾಧಿಯಲ್ಲಿ.
ಹೊಸದೆಲ್ಲ ಹುಟ್ಟಿ ಬರಲಿ-ಹೃದಯದಾಳದಲ್ಲಿ!

ಬೇಡಯ್ಯ! ಬಂಧಗಳ ಬಂದಿವಾಸ;
ಬರೆದದ್ದೇ ಬ೦ಧುರವಾಗಬಹುದು.
ಸಾಕಯ್ಯ! ವೃತ್ತಗಳಾವರ್ತ:
ನಿನ್ನ ಮಣಿತವಿರಲಿ ಸಮುದ್ರದ ಕುಣಿತದಂತೆ!
ತರಂಗತ್ತರಂಗಗಳನೊಳಕೊಂಡ
ನವರಂಗ ವಾರಿಧಿಯಂತೆ

ವೃತ್ತಬಂಧಗಳು ಸಂಧಿಸಿ ಬಂದ
ಸಮುದ್ರವಾಗು, ಕವಿಯೆ!
ಕವಿಗಳ ಸಮುದ್ರಗುಪ್ತನಾಗು!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...