Home / ಕವನ / ಕವಿತೆ / ಏಕಮೇವ

ಏಕಮೇವ

ಕಿನ್ನರ ಕಿಂಪುರುಷರ ನೌಕೆಗಳಂತೆ
ತೇಲುತಿಹುದು ಬುರುಗಿನ ಬೆಳ್ಳಿ ಶರಧಿಯ ಮೇಲೆ,-
ನೂರೊಂದು ಕಡೆಗೆ ತೇಲುತಿಹುದು ನೋಡಾ!
ಬೆಣ್ಣೆ ಕಡಿದ ಮಜ್ಜಿಗೆಯಂತೆ
ಹುಟ್ಟು ಕಡಿದ ನೀರು ಅಟ್ಟಿಸುತಿಹುದು ನೋಡಾ!
ತಪತಪನೆ ಕಾಯ್ದು ಕೋಟಿ ಸೂರ್ಯರಂತೆ
ಕಣ್ಣು ಕುಕ್ಕಿ ಸುವದು ನೋಡಾ ಸಾಗರವು!
ಹೆಡೆಯಲ್ಲಿ ಪ್ರಷ್ಟರಾಗವಿಹ ಕಾಳಸರ್ಪಗಳಂತೆ
ಸಾಗಿಹುದು ನೋಡಾ ಸಾವಿರ ತೆರೆಗಳ ವೈಭವವು!

ಹಚ್ಚಹಸಿರಿತ್ತು, ಹಿಂದೀ ಮಹಾಸಾಗರದ ಬಣ್ಣ,
ಕಪ್ಪುಹಸಿರಿತ್ತು ಮತ್ತೆ!
ಅರಬ್ಬಿಯ ಮುನ್ನೀರಿಗೆ ಕರಿನೀಲಿ ಬಣ್ಣವುಂಟು;
ಮುಂದೆ ಬಂದಿಹುದು ಕೆಂಪು ಸಮುದ್ರವೊಂದು.
ನಿನ್ನ ಬಣ್ಣವಾವುದು, ಸಮುದ್ರರಾಜ?
ಸಪ್ತವರ್ಣದ ಇಂದ್ರಧನುಸ್ಸನ್ನು ಹಿಡಿದು
ಆಕಾಶರಾಜನ ಸರಿಗಟ್ಟಿದೆ ನೀನು.
ಚಣಕೊಮ್ಮೆ ಬಣ್ಣವ ಬದಲಿಸಿ ಚೆಲುವಿಕೆಯನಾಂತು
ಭೂದೇವಿಯನು ಪಾತಾಳಕೆ ಮೆಟ್ಟಿದೆ ನೀನು!

ಮುಗಿಲಿಗಿಂತ ಮಿಗಿಲು ಸಾಗರದ ನೀಲಿ!
ಸಾಗರದ ತುದಿ ತಟ್ಟಿ ಮುಗಿಲೆಲ್ಲ ನೀಲಿಯಾಗಿಹುದು.
ಮುಗಿಲನಂತತೆಯೆಲ್ಲ ಮುನ್ನೀರ ಗರ್ಭಪಿಂಡ!
ಮೋಡಗಳೆಂಬ ಓಡಗಳು ಬಾಂದಳದಿ ತೇಲುವಲ್ಲಿ
ಹಕ್ಕಿಯೆಂಬ ಚಿಕ್ಕಿ ಮಿನುಗಿದವು ಕಡಲಿನೊಡಲ ಮೇಲ್ಗಡೆಗೆ!
ಗಾಳಿಯಲಿ ರೆಕ್ಕೆ ಬೀಸುತಿದೆ ಪಕ್ಷಿಗಣವು,-
ಈಸುತಿದೆ ಗಾಳಿ, ನೀರಿನಲಿ ರೆಕ್ಕೆ ಬಡೆದು!

ನೆಲ ಗಾಳೆಯುರಿ, ಮುಗಿಲು,-
ಪೆಡಂಭೂತಗಳಿವು ನಾಲ್ಕು.
ಈ ಮಹಾಭೂತಗಳ ನುಂಗಿ ನೀರ್ಕುಡಿಯುತ್ತ
ಮತ್ತಮದಗಜದಂತೆ ಕ್ರೀಡಿಸುತ ನಿಂತ ಪಂಚಾನನ!
ನಿನ್ನೆದುರು ನರನೆಂಬ ಪಿಳ್ಳೆ, ಬರಿ ನೀರ್ಗುಳ್ಳಿ;
ಕೆರಳದಿರು! ಕರುಣಿಸು! ಶರಣು! ಶರಣು!!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...