Home / ಕವನ / ಕವಿತೆ / ಏಕಮೇವ

ಏಕಮೇವ

ಕಿನ್ನರ ಕಿಂಪುರುಷರ ನೌಕೆಗಳಂತೆ
ತೇಲುತಿಹುದು ಬುರುಗಿನ ಬೆಳ್ಳಿ ಶರಧಿಯ ಮೇಲೆ,-
ನೂರೊಂದು ಕಡೆಗೆ ತೇಲುತಿಹುದು ನೋಡಾ!
ಬೆಣ್ಣೆ ಕಡಿದ ಮಜ್ಜಿಗೆಯಂತೆ
ಹುಟ್ಟು ಕಡಿದ ನೀರು ಅಟ್ಟಿಸುತಿಹುದು ನೋಡಾ!
ತಪತಪನೆ ಕಾಯ್ದು ಕೋಟಿ ಸೂರ್ಯರಂತೆ
ಕಣ್ಣು ಕುಕ್ಕಿ ಸುವದು ನೋಡಾ ಸಾಗರವು!
ಹೆಡೆಯಲ್ಲಿ ಪ್ರಷ್ಟರಾಗವಿಹ ಕಾಳಸರ್ಪಗಳಂತೆ
ಸಾಗಿಹುದು ನೋಡಾ ಸಾವಿರ ತೆರೆಗಳ ವೈಭವವು!

ಹಚ್ಚಹಸಿರಿತ್ತು, ಹಿಂದೀ ಮಹಾಸಾಗರದ ಬಣ್ಣ,
ಕಪ್ಪುಹಸಿರಿತ್ತು ಮತ್ತೆ!
ಅರಬ್ಬಿಯ ಮುನ್ನೀರಿಗೆ ಕರಿನೀಲಿ ಬಣ್ಣವುಂಟು;
ಮುಂದೆ ಬಂದಿಹುದು ಕೆಂಪು ಸಮುದ್ರವೊಂದು.
ನಿನ್ನ ಬಣ್ಣವಾವುದು, ಸಮುದ್ರರಾಜ?
ಸಪ್ತವರ್ಣದ ಇಂದ್ರಧನುಸ್ಸನ್ನು ಹಿಡಿದು
ಆಕಾಶರಾಜನ ಸರಿಗಟ್ಟಿದೆ ನೀನು.
ಚಣಕೊಮ್ಮೆ ಬಣ್ಣವ ಬದಲಿಸಿ ಚೆಲುವಿಕೆಯನಾಂತು
ಭೂದೇವಿಯನು ಪಾತಾಳಕೆ ಮೆಟ್ಟಿದೆ ನೀನು!

ಮುಗಿಲಿಗಿಂತ ಮಿಗಿಲು ಸಾಗರದ ನೀಲಿ!
ಸಾಗರದ ತುದಿ ತಟ್ಟಿ ಮುಗಿಲೆಲ್ಲ ನೀಲಿಯಾಗಿಹುದು.
ಮುಗಿಲನಂತತೆಯೆಲ್ಲ ಮುನ್ನೀರ ಗರ್ಭಪಿಂಡ!
ಮೋಡಗಳೆಂಬ ಓಡಗಳು ಬಾಂದಳದಿ ತೇಲುವಲ್ಲಿ
ಹಕ್ಕಿಯೆಂಬ ಚಿಕ್ಕಿ ಮಿನುಗಿದವು ಕಡಲಿನೊಡಲ ಮೇಲ್ಗಡೆಗೆ!
ಗಾಳಿಯಲಿ ರೆಕ್ಕೆ ಬೀಸುತಿದೆ ಪಕ್ಷಿಗಣವು,-
ಈಸುತಿದೆ ಗಾಳಿ, ನೀರಿನಲಿ ರೆಕ್ಕೆ ಬಡೆದು!

ನೆಲ ಗಾಳೆಯುರಿ, ಮುಗಿಲು,-
ಪೆಡಂಭೂತಗಳಿವು ನಾಲ್ಕು.
ಈ ಮಹಾಭೂತಗಳ ನುಂಗಿ ನೀರ್ಕುಡಿಯುತ್ತ
ಮತ್ತಮದಗಜದಂತೆ ಕ್ರೀಡಿಸುತ ನಿಂತ ಪಂಚಾನನ!
ನಿನ್ನೆದುರು ನರನೆಂಬ ಪಿಳ್ಳೆ, ಬರಿ ನೀರ್ಗುಳ್ಳಿ;
ಕೆರಳದಿರು! ಕರುಣಿಸು! ಶರಣು! ಶರಣು!!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...