Home / ಕವನ / ಕವಿತೆ / ಏಕಮೇವ

ಏಕಮೇವ

ಕಿನ್ನರ ಕಿಂಪುರುಷರ ನೌಕೆಗಳಂತೆ
ತೇಲುತಿಹುದು ಬುರುಗಿನ ಬೆಳ್ಳಿ ಶರಧಿಯ ಮೇಲೆ,-
ನೂರೊಂದು ಕಡೆಗೆ ತೇಲುತಿಹುದು ನೋಡಾ!
ಬೆಣ್ಣೆ ಕಡಿದ ಮಜ್ಜಿಗೆಯಂತೆ
ಹುಟ್ಟು ಕಡಿದ ನೀರು ಅಟ್ಟಿಸುತಿಹುದು ನೋಡಾ!
ತಪತಪನೆ ಕಾಯ್ದು ಕೋಟಿ ಸೂರ್ಯರಂತೆ
ಕಣ್ಣು ಕುಕ್ಕಿ ಸುವದು ನೋಡಾ ಸಾಗರವು!
ಹೆಡೆಯಲ್ಲಿ ಪ್ರಷ್ಟರಾಗವಿಹ ಕಾಳಸರ್ಪಗಳಂತೆ
ಸಾಗಿಹುದು ನೋಡಾ ಸಾವಿರ ತೆರೆಗಳ ವೈಭವವು!

ಹಚ್ಚಹಸಿರಿತ್ತು, ಹಿಂದೀ ಮಹಾಸಾಗರದ ಬಣ್ಣ,
ಕಪ್ಪುಹಸಿರಿತ್ತು ಮತ್ತೆ!
ಅರಬ್ಬಿಯ ಮುನ್ನೀರಿಗೆ ಕರಿನೀಲಿ ಬಣ್ಣವುಂಟು;
ಮುಂದೆ ಬಂದಿಹುದು ಕೆಂಪು ಸಮುದ್ರವೊಂದು.
ನಿನ್ನ ಬಣ್ಣವಾವುದು, ಸಮುದ್ರರಾಜ?
ಸಪ್ತವರ್ಣದ ಇಂದ್ರಧನುಸ್ಸನ್ನು ಹಿಡಿದು
ಆಕಾಶರಾಜನ ಸರಿಗಟ್ಟಿದೆ ನೀನು.
ಚಣಕೊಮ್ಮೆ ಬಣ್ಣವ ಬದಲಿಸಿ ಚೆಲುವಿಕೆಯನಾಂತು
ಭೂದೇವಿಯನು ಪಾತಾಳಕೆ ಮೆಟ್ಟಿದೆ ನೀನು!

ಮುಗಿಲಿಗಿಂತ ಮಿಗಿಲು ಸಾಗರದ ನೀಲಿ!
ಸಾಗರದ ತುದಿ ತಟ್ಟಿ ಮುಗಿಲೆಲ್ಲ ನೀಲಿಯಾಗಿಹುದು.
ಮುಗಿಲನಂತತೆಯೆಲ್ಲ ಮುನ್ನೀರ ಗರ್ಭಪಿಂಡ!
ಮೋಡಗಳೆಂಬ ಓಡಗಳು ಬಾಂದಳದಿ ತೇಲುವಲ್ಲಿ
ಹಕ್ಕಿಯೆಂಬ ಚಿಕ್ಕಿ ಮಿನುಗಿದವು ಕಡಲಿನೊಡಲ ಮೇಲ್ಗಡೆಗೆ!
ಗಾಳಿಯಲಿ ರೆಕ್ಕೆ ಬೀಸುತಿದೆ ಪಕ್ಷಿಗಣವು,-
ಈಸುತಿದೆ ಗಾಳಿ, ನೀರಿನಲಿ ರೆಕ್ಕೆ ಬಡೆದು!

ನೆಲ ಗಾಳೆಯುರಿ, ಮುಗಿಲು,-
ಪೆಡಂಭೂತಗಳಿವು ನಾಲ್ಕು.
ಈ ಮಹಾಭೂತಗಳ ನುಂಗಿ ನೀರ್ಕುಡಿಯುತ್ತ
ಮತ್ತಮದಗಜದಂತೆ ಕ್ರೀಡಿಸುತ ನಿಂತ ಪಂಚಾನನ!
ನಿನ್ನೆದುರು ನರನೆಂಬ ಪಿಳ್ಳೆ, ಬರಿ ನೀರ್ಗುಳ್ಳಿ;
ಕೆರಳದಿರು! ಕರುಣಿಸು! ಶರಣು! ಶರಣು!!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...