ಶಿವಪಾರ್ವತಿಯರ ಸೋಲು

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು.

ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ ಬಂದರು. “ಇಲ್ಲೇಕೆ ದಡ್ಡಿ” ಎಂದು ಕೇಳಿದರು.

“ಅದಕ್ಕೇನೂ ಆಗುವದಿಲ್ಲ” ಎಂದನು ಬೀರನು.

“ಮಳೆ ಆಗಿಬಿಟ್ಟರೆ ಹಳ್ಳಕೊಳ್ಳ ತುಂಬಿ ಬರುವದಿಲ್ಲವೇ?” ಎಂದು ಶಿವ ಪಾರ್ವತಿ ಕೇಳಿದರು.

“ಮಳೆ ಹೋಯಿತು ತನ್ನ ನಾಡಿಗೆ ಮೂರು ತಿಂಗಳು” ಎಂದು ಬೀರನು ಅವರಿಗೆ ಮರುನುಡಿದನು.

ಶಿವಪಾರ್ವತಿಯರು ಅಲ್ಲಿ ನಿಲ್ಲದೆ ಹೋಗಿಬಿಟ್ಟರು. ಅವರು ನೇರವಾಗಿ ವರುಣನ ಲೋಕಕ್ಕೆ ತೆರಳಿ – “ಈಗಲೇ ಮಳೆರಾಯನನ್ನು ಕಳಿಸಿಕೊಡು” ಎಂದು ಹೇಳಿದರು.

“ಮಳೆರಾಯನನ್ನು ಬೇರೆ ನಾಡಿಗೆ ಕಳಿಸಿದ್ದೇನೆ. ಅವನು ಬರುವುದು ಮೂರು ತಿಂಗಳು ಕಳೆದ ಬಳಿಕ” ಎಂದು ವರುಣನು ತಿಳಿಸಿದನು.

ಆ ಮಾತು ಕೇಳಿ ಶಿವಪಾರ್ವತಿಯರ ಮುಖ ಬಾಡಿಹೋದವು. ಮರುನುಡಿಯದೆ ಅವರು ಕೈಲಾಸಕ್ಕೆ ಹೊರಟುಹೋದರು.

ಬೀರನ ದಡ್ಡಿ ಹಳ್ಳದಲ್ಲಿ. ಅವನ ಕುರಿಗಳು ಹಳ್ಳದ ದಂಡೆಯಲ್ಲಿ ಬೀಡುಬಿಟ್ಟು ತಂಗಿದವು. ಹಳ್ಳದ ದಡದಲ್ಲಿ ಬೆಳೆದು ನಿಂತ ಹುಲ್ಲು ಮೇದು ಹಳ್ಳದ ನೀರು ಕುಡಿಯುತ್ತ ಮೂರು ತಿಂಗಳು ಕಳೆದವು.

ಆ ಸಂದರ್ಭದಲ್ಲಿ ಅತ್ತ ಕಡೆಯಿಂದ ಶಿವಪಾರ್ವತಿಯರು ಬಂದರು. ಕೇಳಿದರು – “ಬೀರಾ, ದಡ್ಡಿ ಕಿತ್ತಿದೆಯಲ್ಲ ! ಯಾಕೆ ?” “ಮಳೆರಾಜ ಬಂದಿರುವನಲ್ಲವೇ ನಮ್ಮ ನಾಡಿಗೆ” ಇದು ಬೀರನ ಮರುನುಡಿ. “ಎಷ್ಟು ಸೊಕ್ಕು ಈ ಕುರುಬನಿಗೆ ? ಮಳೆ ಬರುವದೆಂದು ಸ್ಪಷ್ಟವಾಗಿ ಹೇಳುತ್ತಿರುವನಲ್ಲ! ಏತರ ಮೇಲಿಂದ ಹೇಳುತ್ತಾನೆ ಹೀಗೆ ?” ಎಂದು ಶಿವಪಾರ್ವತಿ ತಮ್ಮತಮ್ಮಲ್ಲಿಯೇ ಅಂದುಕೊಂಡು, ನೇರವಾಗಿ ದೇವಲೋಕಕ್ಕೆ ನಡೆದರು. ಅಲ್ಲಿ ವರುಣನ ಬಳಿಗೆ ಹೋಗಿ ಹೇಳಿದರು – “ಮಳೆರಾಯನನ್ನು ಮರಳಿ ಕರೆಯಿಸು.”

ವರುಣ ಬಿನ್ನಯಿಸಿದನು – “ಆ ಹೊತ್ತು ನೀವು ಸೂಚಿಸಿದಂತೆ ಆತನನ್ನು ಇಂದೇ ಅತ್ತಕಡೆ ಕಳಿಸಿದ್ದೇನೆ. ಮೋಡಗಳು ಮುಂದೆ ಮುಂದೆ, ಸಿಡಿಲು ಮಿಂಚುಗಳು ಹಿಂದೆ ಹಿಂದೆ ಹೋಗಿವೆ. ನನ್ನ ಕೈಯಲ್ಲಿ ಏನಿದೆ ? ಕೊಟ್ಟ ಹುಕುಮು ಅವರ ಕೈಯಲ್ಲಿದೆ.”

ಆ ಮಾತು ಕೇಳಿ ಶಿವಪಾರ್ವತಿಯರು ಅಂದುಕೊಂಡರು – “ನಾವಿಂದು ಕುರುಬನಿಗೆ ಸೋತೆವು.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಘವೇಂದ್ರ ಭಾರತಿ ಅಂಬೋ ಆಸಾಮಿಗೆ ಬಡಿದ ಗೋ-ಗ್ರಹಣ
Next post ಬಿಜೆಪಿ ಎಂಬ ಶಬರಿಯೂ ಕೊಮಾರನೆಂಬ ರಾಮನೂ…

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…