Home / ಕಥೆ / ಜನಪದ / ಶಿವಪಾರ್ವತಿಯರ ಸೋಲು

ಶಿವಪಾರ್ವತಿಯರ ಸೋಲು

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು.

ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ ಬಂದರು. “ಇಲ್ಲೇಕೆ ದಡ್ಡಿ” ಎಂದು ಕೇಳಿದರು.

“ಅದಕ್ಕೇನೂ ಆಗುವದಿಲ್ಲ” ಎಂದನು ಬೀರನು.

“ಮಳೆ ಆಗಿಬಿಟ್ಟರೆ ಹಳ್ಳಕೊಳ್ಳ ತುಂಬಿ ಬರುವದಿಲ್ಲವೇ?” ಎಂದು ಶಿವ ಪಾರ್ವತಿ ಕೇಳಿದರು.

“ಮಳೆ ಹೋಯಿತು ತನ್ನ ನಾಡಿಗೆ ಮೂರು ತಿಂಗಳು” ಎಂದು ಬೀರನು ಅವರಿಗೆ ಮರುನುಡಿದನು.

ಶಿವಪಾರ್ವತಿಯರು ಅಲ್ಲಿ ನಿಲ್ಲದೆ ಹೋಗಿಬಿಟ್ಟರು. ಅವರು ನೇರವಾಗಿ ವರುಣನ ಲೋಕಕ್ಕೆ ತೆರಳಿ – “ಈಗಲೇ ಮಳೆರಾಯನನ್ನು ಕಳಿಸಿಕೊಡು” ಎಂದು ಹೇಳಿದರು.

“ಮಳೆರಾಯನನ್ನು ಬೇರೆ ನಾಡಿಗೆ ಕಳಿಸಿದ್ದೇನೆ. ಅವನು ಬರುವುದು ಮೂರು ತಿಂಗಳು ಕಳೆದ ಬಳಿಕ” ಎಂದು ವರುಣನು ತಿಳಿಸಿದನು.

ಆ ಮಾತು ಕೇಳಿ ಶಿವಪಾರ್ವತಿಯರ ಮುಖ ಬಾಡಿಹೋದವು. ಮರುನುಡಿಯದೆ ಅವರು ಕೈಲಾಸಕ್ಕೆ ಹೊರಟುಹೋದರು.

ಬೀರನ ದಡ್ಡಿ ಹಳ್ಳದಲ್ಲಿ. ಅವನ ಕುರಿಗಳು ಹಳ್ಳದ ದಂಡೆಯಲ್ಲಿ ಬೀಡುಬಿಟ್ಟು ತಂಗಿದವು. ಹಳ್ಳದ ದಡದಲ್ಲಿ ಬೆಳೆದು ನಿಂತ ಹುಲ್ಲು ಮೇದು ಹಳ್ಳದ ನೀರು ಕುಡಿಯುತ್ತ ಮೂರು ತಿಂಗಳು ಕಳೆದವು.

ಆ ಸಂದರ್ಭದಲ್ಲಿ ಅತ್ತ ಕಡೆಯಿಂದ ಶಿವಪಾರ್ವತಿಯರು ಬಂದರು. ಕೇಳಿದರು – “ಬೀರಾ, ದಡ್ಡಿ ಕಿತ್ತಿದೆಯಲ್ಲ ! ಯಾಕೆ ?” “ಮಳೆರಾಜ ಬಂದಿರುವನಲ್ಲವೇ ನಮ್ಮ ನಾಡಿಗೆ” ಇದು ಬೀರನ ಮರುನುಡಿ. “ಎಷ್ಟು ಸೊಕ್ಕು ಈ ಕುರುಬನಿಗೆ ? ಮಳೆ ಬರುವದೆಂದು ಸ್ಪಷ್ಟವಾಗಿ ಹೇಳುತ್ತಿರುವನಲ್ಲ! ಏತರ ಮೇಲಿಂದ ಹೇಳುತ್ತಾನೆ ಹೀಗೆ ?” ಎಂದು ಶಿವಪಾರ್ವತಿ ತಮ್ಮತಮ್ಮಲ್ಲಿಯೇ ಅಂದುಕೊಂಡು, ನೇರವಾಗಿ ದೇವಲೋಕಕ್ಕೆ ನಡೆದರು. ಅಲ್ಲಿ ವರುಣನ ಬಳಿಗೆ ಹೋಗಿ ಹೇಳಿದರು – “ಮಳೆರಾಯನನ್ನು ಮರಳಿ ಕರೆಯಿಸು.”

ವರುಣ ಬಿನ್ನಯಿಸಿದನು – “ಆ ಹೊತ್ತು ನೀವು ಸೂಚಿಸಿದಂತೆ ಆತನನ್ನು ಇಂದೇ ಅತ್ತಕಡೆ ಕಳಿಸಿದ್ದೇನೆ. ಮೋಡಗಳು ಮುಂದೆ ಮುಂದೆ, ಸಿಡಿಲು ಮಿಂಚುಗಳು ಹಿಂದೆ ಹಿಂದೆ ಹೋಗಿವೆ. ನನ್ನ ಕೈಯಲ್ಲಿ ಏನಿದೆ ? ಕೊಟ್ಟ ಹುಕುಮು ಅವರ ಕೈಯಲ್ಲಿದೆ.”

ಆ ಮಾತು ಕೇಳಿ ಶಿವಪಾರ್ವತಿಯರು ಅಂದುಕೊಂಡರು – “ನಾವಿಂದು ಕುರುಬನಿಗೆ ಸೋತೆವು.”
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...