Home / ಕವನ / ಕವಿತೆ / ಓಂ! ನಮೋ!

ಓಂ! ನಮೋ!

ನಿನ್ನ ಮಗಳಾದ ಲಕ್ಷ್ಮಿಯಂತೆ ಸೌಂದರ್ಯದ ತವರಲ್ಲ ನಾನು
ಓ! ಸಮುದ್ರ!
ಆದರೆ ಮಗುವಿನಂತೆ ನಿನ್ನನು ಪ್ರೀತಿಸಿದೆ! ಕರುಣಿಸು ತಂದೆ!
ನಾರಾಯಣನಂತೆ ಲಕ್ಷ್ಮೀಲೋಲನಲ್ಲ, ಶೇಷಶಾಯಿಯಲ್ಲ ಓ! ಸಮುದ್ರ!
ಅವನಂತೆ ಪಾರಾಯಣ ಮಾಡಿದೆ ನಿನ್ನ! ಉರವಣಿಸೆನ್ನ ಮನವ, ತಂದೆ!
ಚಂದ್ರನಂತೆ ನಿನ್ನ ಹೈದಯವನು ಉಕ್ಕೇರಿಸಿದವನಲ್ಲ, ಓ! ಸಮುದ್ರ!
ಆದರೆ ನಿನ್ನ ಮಹಿಮೆಯ ನೋಡಿ ಉಕ್ಕೇರಿದವನು, ತಂದೆ!
ನೀಲಕಂಠನಂತೆ,-ನಿನ್ನನುರಿಸಿದ ವಿಷವ ನುಂಗಿಲ್ಲ, ಓ! ಸಮುದ್ರ!
ಆದರೆ ರಾಕ್ಷಸರಂತೆ ಅಮೃತವನೊಂದೆ ಬಯಸಿದವನಲ್ಲ, ಕರುಣಿಸು ತಂದೆ!
ದೇವನಂತೆ ಮತ್ಸ್ಯಕೂರ್ಮವಾಗಿ ನಿನ್ನ ತೊಡೆಯ ಮೇಲಾಡಿಲ್ಲ,
ಓ! ಸಮುದ್ರ!
ಆದರೆ ಕೂರ್ಮ-ಮತ್ಸ್ಯಗಳಲ್ಲಿ ಸಹ ದೇವರನ್ನು ಕಂಡಿರುವೆನು, ತಂದೆ!
ದೇವತೆಗಳಂತೆ ನಿನ್ನಾಳವನು ಮಂಥಿಸಿ ತಿಳಿದಿಲ್ಲ, ಓ! ಸಮುದ್ರ!
ಆದರೆ ಚಿಂತಿಸಲು ಅದು ಕಣ್ಣೆದುರಿಗೆ ತಾನಾಗಿ ಹೊಳೆದಿಹುದು, ತಂದೆ!
ಶೆಲ್ಲಿಯಂತೆ ಮರಣದ ತೆರೆಯೆತ್ತಿ, ನಿನ್ನನ್ನು ನೋಡಿದವನಲ್ಲ
ಓ! ಸಮುದ್ರ!
ಆದರೆ ನಿನ್ನ ತೆರೆತೆರೆಯಲ್ಲಿ ಹುಟ್ಟುಸಾವಿನ ಗುಟ್ಟನು, ಕಾವ್ಯದ
ಶೆಲೆಯನು ಕಂಡೆನು, ತಂದೆ!
ಹಿಂದಿನ ಕಾವ್ಯದಲ್ಲಿಯಂತೆ ನಿನ್ನ ರೂಪವಿಲ್ಲಿ ಥಳಥಳಿಸಿಲ್ಲ, ಓ! ಸಮುದ್ರ!
ಆದರೆ ನಿನ್ನನ್ನು ನೋಡದೆ ಬಣ್ಣಿಸಿ ನಾನು ಹಳಹಳಿಸಿಲ್ಲ, ತಂದೆ!
ನಿನ್ನ ಸಾವಿರ ಭಂಗಿಗಳನ್ನು ಕೀರ್ತಿಸಲು ಸ್ವರವಿಲ್ಲ, ನನ್ನ ಪುಂಗಿಗೆ.
ನಿನ್ನ ಬಣ್ಣ-ಬಣ್ಣಗಳ ಬಣ್ಣಿಸುವ ಕುಸುರಿಲ್ಲ ನನ್ನ ಕಲೆಗೆ.
ಒ೦ದೇ ಒಂದು ಮಾತನು ನೂರೊಂದು ಸಲ ಸಾರುವೆನು,-
ನಿನ್ನ ನೋಡಿ ನನ್ನ ಜೀವನಕೆ ಮ೦ಗಳವಾಯ್ತು, ಮ೦ಗಳವಾಯ್ತು,
ಮಹಾಮಂಗಳವಾಯ್ತು!
ಓಂ! ನಮೋ! ಸಮುದ್ರಪುರುಷಾಯ!
*****
Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...