Home / ಕವನ / ಕವಿತೆ / ಮೇಘಮಯೂರ

ಮೇಘಮಯೂರ

ಕುಣಿಯ ತೊಡಗಿತು ಮೇಘಮಯೂರ
ಭವ್ಯಭೀಕರಾ ಬೃಹದಾಕಾರ
ರುದ್ರವಾದರೂ ಶುಭಶ್ರೀಕಾರ
ಕುಣಿಯ ತೊಡಗಿತು ಮೇಘಮಯೂರ |

ಗಗನರಂಗವನು ತುಂಬಿ ಬೆಳೆಯಿತು
ಚಿಕ್ಕೆಗಣ್ಣಿನಾ ಪಿಚ್ಛ ಹರಡಿತು
ಸಿಡಿಲು ಮಾಲೆಯಲಿ ಮುಡಿಯ ಕಟ್ಟಿತು
ಥಕಥೋಂ ಥಕಥೈ ಕಾಲು ಹಾಕಿತು |

ಹೆಜ್ಜೆ ಹೆಜ್ಜೆಯಲಿ ಗೆಜ್ಜೆ ನುಡಿಯಿತು
ಮೃದಂಗ ಬಾನೊಳು ಗುಡುಗು ಮೊಳಗಿತು
ಪದ ಘಟ್ಟನೆಯಲಿ ಭುವನ ನಡುಗಿತು
ಕುಣಿದ ಭಾವದಲಿ ಮಿಂಚು ಮೆರೆಯಿತು |

ಬುವಿಯ ದೇಗುಲದ ಬಾಗಿಲೆದುರಿನಲಿ
ಚಿಕ್ಕೆ ಚಿಗಿತ ಅಂಗಳದ ರಂಗದಲಿ
ದೇವದಾಸಿ ಕುಣಿದಂತೆ ಕುಣಿಯಿತು
ದೇವಲೋಕವೇ ನಿಂತು ನೋಡಿತು |

ಹಾಲು ಜೇನು ಜಲಕುಂಭವೆತ್ತಿತು
ನೀಲಕಂಠನಭಿಷೇಕ ನಡೆಯಿತು
ಜಗ ಮೂಕವಾಗಿ ತಲೆವಾಗಿ ನಿಂತಿತು
ಇಂದ್ರಲೋಕವತಿ ಚಿಕಿತವಾಯಿತು |

ಮುರಿಯ ಬಂದಿತೆನುವಂತೆ ಕುಣಿಯಿತು
ಪ್ರಮತ್ತ ಪ್ರಳಯಾವೇಶ ಬೆಳೆಯಿತು
ಸುಪ್ತ ಸಮೀರಣ ರೊಚ್ಚಿಗೆದ್ದಿತು
ಸಪ್ತ ಸಮುದ್ರದಿ ಹುಚ್ಚು ಕುಣಿಯಿತು |

ಬೆಂದ ನೆಲವು ಎದೆ ತೆರೆದು ಬೇಡಿತು
ಕಮರಿ ಹೋದ ಕಾಡೆಲ್ಲ ಕೆದರಿತು
ಕಣ್ಣು ಹಿಗ್ಗಿಸುತ ಗುಡ್ಡ ನೋಡಿತು
ವಿಶ್ವವೆಲ್ಲ ಹಾತೊರೆದು ನಿಂತಿತು |

ಮರಣ ಬಂದರೂ ಹರಣ ಸೊಕ್ಕಿತು
ಚರಣ ಚರಣದಲಿ ಜೀವ ಚಿಗುರಿತು
ಹಚ್ಚ ಹಸಿರು ಹುಚ್ಚೆದ್ದು ಚಿಮ್ಮಿತು
ಬಣ್ಣ ಬಣ್ಣಗಳ ಬಾಳು ಬೆಳೆಯಿತು |

ಮಣ್ಣನೆತ್ತಿ ಅರಮನೆಯ ಕಟ್ಟಿತು
ಇಂದ್ರ ಚಾಪಗಳ ಚೆಲುವ ತೋರಿತು
ಬೆಂದ ಬಾಳಿನಲಿ ತಂಪನೆರೆಯಿತು
ಬಂದುದೆಲ್ಲ ಬಹು ಚಂದವಾಯಿತು |

ತೊಳೆದು ಹೋಯಿತೆಲೆ ಜಗದ ಮೈಲಿಗೆ
ಇಟ್ಟಿತೆಲ್ಲೆಡೆಗೆ ಧೂಪ ದೀವಿಗೆ
ಮನದಿ ಅರಳಿಸಿತು ಜಾಜಿ ಮಲ್ಲಿಗೆ
ಭಾವ ಭಕುತಿಯಲಿ ದೇವ ಪೂಜೆಗೆ |

ಕುಣಿಯ ತೊಡಗಿತು ಮೇಘಮಯೂರ
ಭವ್ಯ ಭೀಕರ ಬೃಹದಾಕಾರ
ರುದ್ರವಾದರೂ ಶುಭ ಶ್ರೀಕಾರ
ಕುಣಿಯತೊಡಗಿತು ಮೇಘಮಯೂರ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...