Home / ಕವನ / ಕವಿತೆ / ವಸಂತ ಲಕ್ಷ್ಮಿ

ವಸಂತ ಲಕ್ಷ್ಮಿ

ಇಳೆಗೆ ಬಂದಳದೋ ಲಕ್ಷ್ಮಿ
ಮಧುಮಾಸದ ಅಮೃತ ರಶ್ಮಿ!

ಮಿಂದು ಬಂತು ನೆಲಜಲ
ಸ್ವಾಗತಿಸಿತು ಭೂತಲ
ದಿಸೆ ದಿಸೆಯೂ ಹೊಳೆವ ಹವಳ
ಸ್ವಸ್ತಿ ಲಿಖಿತ ಹೊಸ್ತಿಲ!

ಗಗನ ಕರದ ನೀಲಕಮಲ
ಅರ್ಘ್ಯವೀಯೆ ಕಿರಣ ಸುಜಲ
ಕೈ ಮುಗಿಯಿತು ಜೀವಕುಲ
ಭಾವ ಪಕ್ವ ಫಲವಲ!

ಪುರೂರವನ ಎದುರು ನಿಂತ
ಇವಳಪ್ಸರೆ ಊರ್ವಶಿ!
ಬಾನ್ನೆಲದಲಿ ಬೆಳದನಂತ
ಮತ್ತಧವಳ ಸುಖಶಶಿ!

ಜನ ಬನಗಳ ಅಂತರಂಗ
ಮಥಿಸಿ ಬಂತು ಹೃತ್ತರಂಗ
ವಿಶ್ವವಾಯ್ತು ನೃತ್ಯರಂಗ
ಈ ವಸಂತ ಲಕ್ಷ್ಮಿಗೆ!

ಹಸುರಿನ ಕೊನೆ ಕೆಂಪೊಡೆಯಿತು
ಎಡೆಯೆಡೆಯಲಿ ಕಂಪಡರಿತು
ಹಸಿದೆದೆಯಲಿ ಕಂಡರಸಿತು
ಕನಸಿನ ಕಮನೀಯತೆ!

ಸುಳಿದಾಡಿತು ಗಂಧಪವನ
ಸ್ಫೂರ್ತಿಸಿರಲು ಪ್ರೇಮ ಕವನ
ತುಂಬಿತುಟಿಯು ನುಡಿಸಿಯದನ
ಬನ ಬನವನು ಕುಣಿಸಿತು!

ಅದೊ ಕೋಕಿಲ ಮತ್ತಗೀತ
ವನಮೋದದಿ ರೋಮಾಂಚಿತ
ಹೆಣ್ಣುಗಂಡು ಕಾಮವ್ಯಥಿತ
ಸುಖ ಝೇಂಕೃತ ಭಾವವು!

ವೈರಾಗ್ಯದ ಬಗೆ ಚೆದರಿತು
ಅನುರಾಗದ ತಪ ಕೊನರಿತು
ನಂಜುಂಡನ ತುಟಿ ಅದುರಿತು
ಅಶುಭದ ವಿಷ ನೆಕ್ಕಿತು!

ಯುಗ ಯುಗಗಳ ಸೃಜನಗೀತ
ಹೊಮ್ಮಿ ಬರಲು, ವಿಶ್ವ ಪ್ರೀತ
ಈ ಲೋಕವು ಪುಣ್ಯ ತೀರ್ಥ
ಹೃನ್ನದಿಗಳು ಬೆರೆಯಲು!

ಸಂಸಾರದ ಕಟು ಬಂಧನ-
ವಾಯ್ತು ಇಂದು ನವನಂದನ
ಎದೆಯೆದೆಯಲಿ ಮಧು ನರ್ತನ
ನಗೆ ಕೊನರಿತಕಾರಣ!

ಬಾರೆ ಬಾರೆ ಭಾಗ್ಯಲಕ್ಷ್ಮಿ
ನಾಕ ತೊರೆದ ಪುಣ್ಯರಶ್ಮಿ
ಜಗ ಕೋರಿದೆ ಸುಸ್ವಾಗತ
ಬಾರೊಲವಿನ ಅಭ್ಯಾಗತ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...