Home / ಕವನ / ಕವಿತೆ / ಕ್ಷಿತಿಜಯಕ್ಷ

ಕ್ಷಿತಿಜಯಕ್ಷ

ಬಾಳ್ಗಡಲು ಕೆರಳಿಹುದು, ಕಾರಿರುಳು ಬೆಳೆದಿಹುದು
ಮನದ ಮನೆಯಲಿ ಭೀತಿ ನಡುಗುತಿಹುದು
ನೀಲಿಮಾಪಥದಲ್ಲಿ ಅಭ್ರರಥ ತಾರೆಗಳ
ತುಳಿದರೆದು ಬಾನೆದೆಯ ಸೀಳಿರುವುದು

ಅಪ್ಪಿ ತಿರೆಯೆದೆಯನ್ನು ತೆಪ್ಪಗಿಹ ಮೆಲುಗಾಳಿ
ನೂರು ನಾಲಗೆ ಚಾಚಿ ಒದರುತಿಹುದು
-‘ಗುಡ್ಡಗಳ ಚಲಿಸುವೆನ್ಮು ಕಡಲನ್ನು ಕಡೆಯುವೆನು
ಸ್ವರ್ಗಸಿಂಹಾಸನವ ನಡುಗಿಸುವೆನು’

ಕಡಲತೆರೆ ಹುಚ್ಚೆದ್ದು ಹಾವಿನೊಲು ಹೆಡೆಗಳನು
ಅಪ್ಪಳಸಿ ಅಬ್ಬರಿಸಿ ಮುತ್ತುತಿಹವು
ಮರಣ ಜಿವ್ಹೆಯ ಹಾಗೆ ತುತ್ತಲಿಕೆ ಸುತ್ತಿಹವು
ತಮ್ಮ ಬಲೆಯನು ಹರಡಿ, ಎಳೆಯುತಿಹವು.

ನನ್ನ ಈ ಕಿರಿ ನಾವೆ ಹಿರಿಗಡಲ ಮಡಿಲಲ್ಲಿ
ಏಳುತ್ತ ಮುಳುಗುತ್ತ ತೇಲುತಿಹುದು
ನೀರಗೋರಿಯ ಕಂಡ ನೂರು ನಾವೆಯಕಂಡು
ತತ್ತರಿಸಿ ಒಳಗೊಳಗೆ ಕುಸಿಯುತಿಹುದು.

ತೆರೆಗೆ ತುತ್ತಾಗುವುದೊ? ದೈವರಕ್ಷಿತವಾಗಿ
ದಂಡೆಯಲಿ ಬಂದರವ ಸೇರಬಹುದೊ?
-ದಿಗ್ಭ್ರಾಂತ ನಿರೆಯಿಂತು ಆಕಾಶದಂಚಿನಲಿ
ಹೊನ್ನ ಹೊಳೆಯೊಲು ಕಾಂತಿ ಹೊಮ್ಮುತಿಹುದು

ಬಾನ್ನೀರ ಚುಂಬನದ ಚೆಲುವು ನೈದಿಲೆಯಲ್ಲಿ
ಕಿರಣ ಪಿಚ್ಛವ ಹರಡಿ ಕುಳಿತಿರುವನು
ದೇವನೋ ಯಕ್ಷನೋ, ಸ್ವಪ್ನ ಮಂದಿರ ರಚಿಸಿ
ಸಾಹಸಕೆ ಕರೆಯುತಿಹ ಶಿಲ್ಪಿವರನು.

ಅದುವೆನಗೆ ನಿತ್ಯವೂ ಧೈರ್ಯ, ಜೀವನ ಸ್ಫುರಣ,
ಆಸೆಗಳ ಚಿರವಾದ ಸುಮಬಂಧನ.
ಅದ ನೋಡಿದೀ ನಾವೆ ಪಕ್ಕಗಳ ಹರಡುವುದು
ನೀರ್ವಕ್ಕಿಯೊಲು ನೆಗೆದು ಮುನ್ನಡೆವುದು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...