Home / ಕವನ / ಕವಿತೆ / ಕವನ ಕಂಬನಿ!

ಕವನ ಕಂಬನಿ!

ರಘುಪತಿ ರಾಘವ ರಾಜಾರಾಮ
ಮಹಾಜೀವನಕೆ
ಇಂದು ಬರೆದೆಯಾ
ದೇವನೆ, ಪೂರ್ಣವಿರಾಮ!
ರಘುಪತಿ ರಾಘವ ರಾಜಾರಾಮ!

ಪತಿತ ಪಾವನ!
ಪಟೇಲ ಜೀವನ
ವಾಯಿತು ದೇವನ-
ಮುರಲೀವಾದನ
ಸ್ವಾತಂತ್ರ್ಯದ ಆ ವೀರೋದಾಮನ
ಬೆಳೆಯಿತು ತಾನ ವಿತಾನ
ದೇವಾ, ಸಖ್ಯ ಸೌಖ್ಯ, ಸಂಧ
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ
ವಿಧಿಯ ಘಟನೆಯಲಿ
ಘೋರ ಮರಣದಲಿ
ಪಡೆದಿತು ಗಾನವಿರಾಮ
ಸುಂದರ ಮಾಧವ ಮೇಘಶ್ಯಾಮ


ಜರೆಯನು ಜರೆದನು
ಅವನೇ ನಿರ್ಜರ
ದುಡಿಮೆಗೆ ಎಂದಿಗು
ಇಲ್ಲ ಅಂತರ
ಮಿಂಚು ತೂರಿತೆನೆ
ಹರಿದು ನಿರ್ಝರ
ದೇಹದಿ ಉಕ್ಕಿತು
ಪ್ರಾಣಸಾಗರ
ನಾಡಿನ ಪುಣ್ಯದ
ಉದಿತ ಭಾಸ್ಕರ
ಅದೋ ನಮ್ಮ ಸರದಾರ
ಅವನ ದರ್ಶನ
ಉತ್ಸಾಹದ ಸಂಚಾರ
ರಘುಪತಿ ರಾಘವ ರಾಜಾರಾಮ
ಭಾರತ ಪಂಚ ಪ್ರಾಣ
ಬತ್ತಿತು
ಅಯ್ಯೋ ಮೇಫಶ್ಯಾಮ!


ಆತ್ಮ ಕವಚವದು
ವಜ್ರ ಕೇವಲ
ಒಳಗೆ ಬೆಳೆಯಿತೈ
ಕಮಲ ಕೋಮಲ
ಭಾರತ ಭಾಗ್ಯದ
ಗಂಧ ಪರಿಮಳ
ಹರಿಯಿತು ಸಾಗರ ಪಾರ
ದೇವಾ,
ಏನು ಮಹಾ ಸರದಾರ!
ಕೇಳು ದೇವನೆ
ದೇಶ ಕೂಗುತಿದೆ
ಅಣ್ಣನ ವಾರಂವಾರ
ರಘುಪತಿ ರಾಘವ ರಾಜಾರಾಮ


ಯುದ್ಧ ಭೂಮಿಯಲಿ
ಸ್ಫುರಣ ಕಾರಣ
ಕಾಡ ಸವರಿದನು
ವೈರಿ ಮರ್‍ದನ
ನಾಡ ಕಟ್ಟಿದನು
ಭೀಮ ಯೋಧನ
ಸ್ವಾತಂತ್ರ್ಯದ ಸಂಗ್ರಾಮ
ಗೆದ್ದನು,
ಅವನಿಗೆ ಪ್ರೇಮ ಪ್ರಣಾಮ
ರಘುಪತಿ ರಾಘವ ರಾಜಾರಾಮ!


ದೇಹ ಮುರಿದರೂ
ಸಾವು ಬಾರದು
ಅಮೃತ ಪುತ್ರನಾ
ಸತ್ವ ಸರಿಯದು
ಅವನ ಧೈರ್ಯದಾ
ಕವಚ ನಾಡಿಗೆ
ಅವನ ಉಕ್ಕಿನಾ
ಹುರಿಯು ಮನಸಿಗೆ
ಅವನ ಪುಣ್ಯದಾ
ರಕ್ಷೆ ಬೆನ್ನಿಗೆ
ಅವನ ಕನಸಿನಾ-
ಮಾಲೆ ಕೊರಳಿಗೆ
ಅವನ ಧ್ಯೇಯದಾ
ಮೂರ್ತಿ ಕಣ್ಣಿಗೆ
ಇರಲು ಎಲ್ಲಿಯಾ
ಸಾವು ಅವನಿಗೆ


ದುಃಖ ಸಂವೃತ
ತಾಳು ಭಾರತ
ಮೋಹ ವಿಸ್ಮೃತ
ಏಳು ಭಾರತ
ಪ್ರಗತಿ ಸುವ್ರತ
ಬಾಳು ಅಮೃತ!
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...