Home / ಕವನ / ಕವಿತೆ / ಕವನ ಕಂಬನಿ!

ಕವನ ಕಂಬನಿ!

ರಘುಪತಿ ರಾಘವ ರಾಜಾರಾಮ
ಮಹಾಜೀವನಕೆ
ಇಂದು ಬರೆದೆಯಾ
ದೇವನೆ, ಪೂರ್ಣವಿರಾಮ!
ರಘುಪತಿ ರಾಘವ ರಾಜಾರಾಮ!

ಪತಿತ ಪಾವನ!
ಪಟೇಲ ಜೀವನ
ವಾಯಿತು ದೇವನ-
ಮುರಲೀವಾದನ
ಸ್ವಾತಂತ್ರ್ಯದ ಆ ವೀರೋದಾಮನ
ಬೆಳೆಯಿತು ತಾನ ವಿತಾನ
ದೇವಾ, ಸಖ್ಯ ಸೌಖ್ಯ, ಸಂಧ
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ
ವಿಧಿಯ ಘಟನೆಯಲಿ
ಘೋರ ಮರಣದಲಿ
ಪಡೆದಿತು ಗಾನವಿರಾಮ
ಸುಂದರ ಮಾಧವ ಮೇಘಶ್ಯಾಮ


ಜರೆಯನು ಜರೆದನು
ಅವನೇ ನಿರ್ಜರ
ದುಡಿಮೆಗೆ ಎಂದಿಗು
ಇಲ್ಲ ಅಂತರ
ಮಿಂಚು ತೂರಿತೆನೆ
ಹರಿದು ನಿರ್ಝರ
ದೇಹದಿ ಉಕ್ಕಿತು
ಪ್ರಾಣಸಾಗರ
ನಾಡಿನ ಪುಣ್ಯದ
ಉದಿತ ಭಾಸ್ಕರ
ಅದೋ ನಮ್ಮ ಸರದಾರ
ಅವನ ದರ್ಶನ
ಉತ್ಸಾಹದ ಸಂಚಾರ
ರಘುಪತಿ ರಾಘವ ರಾಜಾರಾಮ
ಭಾರತ ಪಂಚ ಪ್ರಾಣ
ಬತ್ತಿತು
ಅಯ್ಯೋ ಮೇಫಶ್ಯಾಮ!


ಆತ್ಮ ಕವಚವದು
ವಜ್ರ ಕೇವಲ
ಒಳಗೆ ಬೆಳೆಯಿತೈ
ಕಮಲ ಕೋಮಲ
ಭಾರತ ಭಾಗ್ಯದ
ಗಂಧ ಪರಿಮಳ
ಹರಿಯಿತು ಸಾಗರ ಪಾರ
ದೇವಾ,
ಏನು ಮಹಾ ಸರದಾರ!
ಕೇಳು ದೇವನೆ
ದೇಶ ಕೂಗುತಿದೆ
ಅಣ್ಣನ ವಾರಂವಾರ
ರಘುಪತಿ ರಾಘವ ರಾಜಾರಾಮ


ಯುದ್ಧ ಭೂಮಿಯಲಿ
ಸ್ಫುರಣ ಕಾರಣ
ಕಾಡ ಸವರಿದನು
ವೈರಿ ಮರ್‍ದನ
ನಾಡ ಕಟ್ಟಿದನು
ಭೀಮ ಯೋಧನ
ಸ್ವಾತಂತ್ರ್ಯದ ಸಂಗ್ರಾಮ
ಗೆದ್ದನು,
ಅವನಿಗೆ ಪ್ರೇಮ ಪ್ರಣಾಮ
ರಘುಪತಿ ರಾಘವ ರಾಜಾರಾಮ!


ದೇಹ ಮುರಿದರೂ
ಸಾವು ಬಾರದು
ಅಮೃತ ಪುತ್ರನಾ
ಸತ್ವ ಸರಿಯದು
ಅವನ ಧೈರ್ಯದಾ
ಕವಚ ನಾಡಿಗೆ
ಅವನ ಉಕ್ಕಿನಾ
ಹುರಿಯು ಮನಸಿಗೆ
ಅವನ ಪುಣ್ಯದಾ
ರಕ್ಷೆ ಬೆನ್ನಿಗೆ
ಅವನ ಕನಸಿನಾ-
ಮಾಲೆ ಕೊರಳಿಗೆ
ಅವನ ಧ್ಯೇಯದಾ
ಮೂರ್ತಿ ಕಣ್ಣಿಗೆ
ಇರಲು ಎಲ್ಲಿಯಾ
ಸಾವು ಅವನಿಗೆ


ದುಃಖ ಸಂವೃತ
ತಾಳು ಭಾರತ
ಮೋಹ ವಿಸ್ಮೃತ
ಏಳು ಭಾರತ
ಪ್ರಗತಿ ಸುವ್ರತ
ಬಾಳು ಅಮೃತ!
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...