Home / ಕವನ / ಕವಿತೆ / ಕವನ ಕಂಬನಿ!

ಕವನ ಕಂಬನಿ!

ರಘುಪತಿ ರಾಘವ ರಾಜಾರಾಮ
ಮಹಾಜೀವನಕೆ
ಇಂದು ಬರೆದೆಯಾ
ದೇವನೆ, ಪೂರ್ಣವಿರಾಮ!
ರಘುಪತಿ ರಾಘವ ರಾಜಾರಾಮ!

ಪತಿತ ಪಾವನ!
ಪಟೇಲ ಜೀವನ
ವಾಯಿತು ದೇವನ-
ಮುರಲೀವಾದನ
ಸ್ವಾತಂತ್ರ್ಯದ ಆ ವೀರೋದಾಮನ
ಬೆಳೆಯಿತು ತಾನ ವಿತಾನ
ದೇವಾ, ಸಖ್ಯ ಸೌಖ್ಯ, ಸಂಧ
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ
ವಿಧಿಯ ಘಟನೆಯಲಿ
ಘೋರ ಮರಣದಲಿ
ಪಡೆದಿತು ಗಾನವಿರಾಮ
ಸುಂದರ ಮಾಧವ ಮೇಘಶ್ಯಾಮ


ಜರೆಯನು ಜರೆದನು
ಅವನೇ ನಿರ್ಜರ
ದುಡಿಮೆಗೆ ಎಂದಿಗು
ಇಲ್ಲ ಅಂತರ
ಮಿಂಚು ತೂರಿತೆನೆ
ಹರಿದು ನಿರ್ಝರ
ದೇಹದಿ ಉಕ್ಕಿತು
ಪ್ರಾಣಸಾಗರ
ನಾಡಿನ ಪುಣ್ಯದ
ಉದಿತ ಭಾಸ್ಕರ
ಅದೋ ನಮ್ಮ ಸರದಾರ
ಅವನ ದರ್ಶನ
ಉತ್ಸಾಹದ ಸಂಚಾರ
ರಘುಪತಿ ರಾಘವ ರಾಜಾರಾಮ
ಭಾರತ ಪಂಚ ಪ್ರಾಣ
ಬತ್ತಿತು
ಅಯ್ಯೋ ಮೇಫಶ್ಯಾಮ!


ಆತ್ಮ ಕವಚವದು
ವಜ್ರ ಕೇವಲ
ಒಳಗೆ ಬೆಳೆಯಿತೈ
ಕಮಲ ಕೋಮಲ
ಭಾರತ ಭಾಗ್ಯದ
ಗಂಧ ಪರಿಮಳ
ಹರಿಯಿತು ಸಾಗರ ಪಾರ
ದೇವಾ,
ಏನು ಮಹಾ ಸರದಾರ!
ಕೇಳು ದೇವನೆ
ದೇಶ ಕೂಗುತಿದೆ
ಅಣ್ಣನ ವಾರಂವಾರ
ರಘುಪತಿ ರಾಘವ ರಾಜಾರಾಮ


ಯುದ್ಧ ಭೂಮಿಯಲಿ
ಸ್ಫುರಣ ಕಾರಣ
ಕಾಡ ಸವರಿದನು
ವೈರಿ ಮರ್‍ದನ
ನಾಡ ಕಟ್ಟಿದನು
ಭೀಮ ಯೋಧನ
ಸ್ವಾತಂತ್ರ್ಯದ ಸಂಗ್ರಾಮ
ಗೆದ್ದನು,
ಅವನಿಗೆ ಪ್ರೇಮ ಪ್ರಣಾಮ
ರಘುಪತಿ ರಾಘವ ರಾಜಾರಾಮ!


ದೇಹ ಮುರಿದರೂ
ಸಾವು ಬಾರದು
ಅಮೃತ ಪುತ್ರನಾ
ಸತ್ವ ಸರಿಯದು
ಅವನ ಧೈರ್ಯದಾ
ಕವಚ ನಾಡಿಗೆ
ಅವನ ಉಕ್ಕಿನಾ
ಹುರಿಯು ಮನಸಿಗೆ
ಅವನ ಪುಣ್ಯದಾ
ರಕ್ಷೆ ಬೆನ್ನಿಗೆ
ಅವನ ಕನಸಿನಾ-
ಮಾಲೆ ಕೊರಳಿಗೆ
ಅವನ ಧ್ಯೇಯದಾ
ಮೂರ್ತಿ ಕಣ್ಣಿಗೆ
ಇರಲು ಎಲ್ಲಿಯಾ
ಸಾವು ಅವನಿಗೆ


ದುಃಖ ಸಂವೃತ
ತಾಳು ಭಾರತ
ಮೋಹ ವಿಸ್ಮೃತ
ಏಳು ಭಾರತ
ಪ್ರಗತಿ ಸುವ್ರತ
ಬಾಳು ಅಮೃತ!
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...