Home / ಕವನ / ಕವಿತೆ / ಕವನ ಕಂಬನಿ!

ಕವನ ಕಂಬನಿ!

ರಘುಪತಿ ರಾಘವ ರಾಜಾರಾಮ
ಮಹಾಜೀವನಕೆ
ಇಂದು ಬರೆದೆಯಾ
ದೇವನೆ, ಪೂರ್ಣವಿರಾಮ!
ರಘುಪತಿ ರಾಘವ ರಾಜಾರಾಮ!

ಪತಿತ ಪಾವನ!
ಪಟೇಲ ಜೀವನ
ವಾಯಿತು ದೇವನ-
ಮುರಲೀವಾದನ
ಸ್ವಾತಂತ್ರ್ಯದ ಆ ವೀರೋದಾಮನ
ಬೆಳೆಯಿತು ತಾನ ವಿತಾನ
ದೇವಾ, ಸಖ್ಯ ಸೌಖ್ಯ, ಸಂಧ
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ
ವಿಧಿಯ ಘಟನೆಯಲಿ
ಘೋರ ಮರಣದಲಿ
ಪಡೆದಿತು ಗಾನವಿರಾಮ
ಸುಂದರ ಮಾಧವ ಮೇಘಶ್ಯಾಮ


ಜರೆಯನು ಜರೆದನು
ಅವನೇ ನಿರ್ಜರ
ದುಡಿಮೆಗೆ ಎಂದಿಗು
ಇಲ್ಲ ಅಂತರ
ಮಿಂಚು ತೂರಿತೆನೆ
ಹರಿದು ನಿರ್ಝರ
ದೇಹದಿ ಉಕ್ಕಿತು
ಪ್ರಾಣಸಾಗರ
ನಾಡಿನ ಪುಣ್ಯದ
ಉದಿತ ಭಾಸ್ಕರ
ಅದೋ ನಮ್ಮ ಸರದಾರ
ಅವನ ದರ್ಶನ
ಉತ್ಸಾಹದ ಸಂಚಾರ
ರಘುಪತಿ ರಾಘವ ರಾಜಾರಾಮ
ಭಾರತ ಪಂಚ ಪ್ರಾಣ
ಬತ್ತಿತು
ಅಯ್ಯೋ ಮೇಫಶ್ಯಾಮ!


ಆತ್ಮ ಕವಚವದು
ವಜ್ರ ಕೇವಲ
ಒಳಗೆ ಬೆಳೆಯಿತೈ
ಕಮಲ ಕೋಮಲ
ಭಾರತ ಭಾಗ್ಯದ
ಗಂಧ ಪರಿಮಳ
ಹರಿಯಿತು ಸಾಗರ ಪಾರ
ದೇವಾ,
ಏನು ಮಹಾ ಸರದಾರ!
ಕೇಳು ದೇವನೆ
ದೇಶ ಕೂಗುತಿದೆ
ಅಣ್ಣನ ವಾರಂವಾರ
ರಘುಪತಿ ರಾಘವ ರಾಜಾರಾಮ


ಯುದ್ಧ ಭೂಮಿಯಲಿ
ಸ್ಫುರಣ ಕಾರಣ
ಕಾಡ ಸವರಿದನು
ವೈರಿ ಮರ್‍ದನ
ನಾಡ ಕಟ್ಟಿದನು
ಭೀಮ ಯೋಧನ
ಸ್ವಾತಂತ್ರ್ಯದ ಸಂಗ್ರಾಮ
ಗೆದ್ದನು,
ಅವನಿಗೆ ಪ್ರೇಮ ಪ್ರಣಾಮ
ರಘುಪತಿ ರಾಘವ ರಾಜಾರಾಮ!


ದೇಹ ಮುರಿದರೂ
ಸಾವು ಬಾರದು
ಅಮೃತ ಪುತ್ರನಾ
ಸತ್ವ ಸರಿಯದು
ಅವನ ಧೈರ್ಯದಾ
ಕವಚ ನಾಡಿಗೆ
ಅವನ ಉಕ್ಕಿನಾ
ಹುರಿಯು ಮನಸಿಗೆ
ಅವನ ಪುಣ್ಯದಾ
ರಕ್ಷೆ ಬೆನ್ನಿಗೆ
ಅವನ ಕನಸಿನಾ-
ಮಾಲೆ ಕೊರಳಿಗೆ
ಅವನ ಧ್ಯೇಯದಾ
ಮೂರ್ತಿ ಕಣ್ಣಿಗೆ
ಇರಲು ಎಲ್ಲಿಯಾ
ಸಾವು ಅವನಿಗೆ


ದುಃಖ ಸಂವೃತ
ತಾಳು ಭಾರತ
ಮೋಹ ವಿಸ್ಮೃತ
ಏಳು ಭಾರತ
ಪ್ರಗತಿ ಸುವ್ರತ
ಬಾಳು ಅಮೃತ!
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...