Home / ಕವನ / ಕವಿತೆ / ಸೋತವನ ಹಾಡು

ಸೋತವನ ಹಾಡು

ಕಟ್ಟಿರಲು ಮಾನವನ ಹಣೆಗೆ ಮುಳ್ಳಿನ ಮುಕುಟ
ತಣಿವ ತಂಪನು ಮನದಿ ತಳೆಯಬಹುದೆ?
ಕಲಮಲನೆ ಸಿಡಿದುರಿದು ಬೆಂಕಿಬಳ್ಳಿಯು ಹರಡೆ
ಒಡಲಲ್ಲಿ ಶಾಂತಿಯದು ಆರಳಬಹುದೆ?
ಆಳಿದಿರುವ ‘ನಿನ್ನೆ’ ಗಳ ಹೆಣಗಳನು ಹೊತ್ತಿಹೆವು
‘ಇಂದು’ಗಳಿಗಾಳಾಗಿ ದುಡಿಯುತಿಹೆವು
ಮುಂದಿರುವ ‘ನಾಳೆ’ಗಳ ನೆಳಲಲ್ಲಿ ಚಿಂತೆಗಳ
ಚಿಗುರಿಸುತ ಎದೆಗುದಿಯ ಬೆಳೆಸುತಿಹೆವು.

ಸಾಕಾಯ್ತು ಬಾಳುವೆಯ ಕುರುಡು ಕಾಮನೆಯಾಟ
ಅನ್ಯಾಯ ಮೋಸಗಳ ಮೋಹದಾಟ
ನುಗ್ಗಿ ಬಹ ತೆರೆಗಳೇರಾಟ ಕಾಟದಿ ನನ್ನ
ಅಂಗಾಂಗವಾಯಾಸ ವಿದ್ಧವಕಟ
ಬೇಡಿದೆನೆ ಬಾನಿನಲಿ ಬೆಳೆವ ಅಮೃತದ ಹನಿಯ
ದೇವತೆಯ ವೈಭವವ ಕಾಮಿಸಿದೆನೆ ?
ಹುಲುಮನುಜನೆದೆಯೊಳಿಹ ಕಿರಿಯಾಸೆಗೂ ದೈವ
ಮುಚ್ಚಿರುವ ಬಾಗಿಲವ ತೆರೆಯಿತೇನೆ?

ಕೆರಳಿರುವ ಬಾಳ್ಗಡಲ ತೊರೆದು ಬಾ ನೀರೆಯೆ
ಏರಿಳಿತವಿಬ್ಲದೀಯುಸುಕಿನಲ್ಲಿ
ಧೆರ್ಮಬಂಧನ ಜರೆದು ಕರ್ಮಕ್ರಂದನ ತೊರೆದು
ಕೊರಳ ಕೊಯ್ಯುವ ಬಾಳನೊಗವ ಹರಿದು
ಸಿಕತಸೀಮೆಯ ಸೌಮ್ಯ ಶಾಂತಿಯಲಿ ಇಲ್ಲಿ ಬಾ
ಆಯಾಸವಾರಿಸುವ ವಿಶ್ರಾಂತಿಗೆ
ಕನಸಿನಾರಾಮದಲಿ ಕೊನರಬಹುದೆಲೆ ತಣಿವು
ಮರೆಯಬಹುದೆಲೆ ಮಲೆತ ವ್ಯಥೆಯಮೊನೆಯು

ಕಡಲತ್ತ ತನ್ನೆದೆಯ ಕದಡಿಸಿದ ಚಂದಿರನ
ಮಕ್ಕಲಿಕೆ ನಾಲಗೆಯ ಚಾಚುತಿರಲಿ
ಕಾಲ್ಕೆಳಗೆ ಸುಳಿಯುತಿಹ ಶೇಷನನು ಕುಕ್ಕಲಿಕೆ
ಪಾತಾಳವನು ಅಗಿದು ಮೊರೆಯುತಿರಲಿ
ಇಲ್ಲಿ ಕಾಣುವುದೇನು?- ನೀರ್‌ನೊರೆಯ ಬಿಳಿಗೆರೆಯೆ
ಕಡಲ ಮೊಳಗೂ ಕೂಡ ಕಿವಿಯ ಪುಗದು.
ಇಲ್ಲಿ ಗಾಳಿಯು ಕೂಡ ದಣಿದು ಗರಿಗಳ ಮುಗಿದು
ಹೂವಿನುಯ್ಯಲೆಯಲ್ಲಿ ಮಲಗಿರುವುದು.

ರಿಕ್ತವಹ ಸಂತಾಪ ಪರಿತಾಪಗಳ ತೊರೆದು
ಸೌಮ್ಯಸುಪ್ತಿಯಲೆದೆಯು ಮಿಡಿಯುತಿರಲಿ
ಇಲ್ಲಿರುವ ಗಿರಿಗಳಲಿ, ಹರಿಯುತಿಹ ಹೊಳೆಗಳಲಿ
ಹಸಿರಿನಲಿ ಬಿತ್ತರದ ಉಸುಕಿನಲ್ಲಿ
ಅಕ್ಷಯ್ಯ ಶಾಂತಿಯದು ನೆಲೆಸಿರಲು ನಾವೇಕೆ
ವ್ಯರ್ಥವಾದೆಣಿಕೆಯಲ್ಲಿ ನವೆಯಬೇಕು?
ಕನಸಿನಲಿ ಕಣ್ತೆರೆದು ನಸುಕಿನಲಿ ನಸುಬೆಳೆದು
ಅರಳಿಯಳಿವಲರಿನಾ ಬಾಳೆ ಸಾಕು!

ಮುಳುಗಲಿಹ ನೇಸರನು, ಮೂಡಲಿಹ ಚಂದಿರನು
ಮೆರೆಯುತಿಹರಾಗಸದ ಅಂಚುಗಳಲಿ
ಕ್ಷಣಕಾಲ ಮರೆತಿಹರು ರೇಗಿಸುವ ಕದನವನು
ಶಾಂತಿಯಾ ಕಾಂತಿಯನೆ ಕರೆಯುತಿಹರು,
ಗೆಳತಿ, ವೀಣೆಯಮೇಲೆ ತಂತಿ ನೋಯದೊಲಿನ್ನು
ಮೆಲ್ಪೆಲರಿಗೂ ಮಿದುವು ಬೆರಳಾಡಲಿ
ಗಾಳಿಗೂ ತಿಳಿಯದೊಲು ಮೌನವೂ ಮುರಿಯದೊಲು
ಗೀತಗಳು ಕಿವಿಯಲ್ಲಿ ಮೆಲ್ಲುಲಿಯಲಿ!

ಹುಸಿಯಾಸೆಗಳ ಪಾಶ, ಕೃತಿ ವಿರಸದಾಯಾಸ
ಮಾಯವಾಗುವುವೆಲ್ಲ ಸುಪ್ತಿಯಲ್ಲಿ
ಮಲೆತು ಮುರಿಯುವುದೇನು? ಅಲೆದು ಅರಸುವುದೇನು?
ಬಾಳೆಲ್ಲ ಸುಖಪಡೆಯೆ ವಿರತಿಯಲ್ಲಿ
ಸುಪ್ತಿಯೇ ಜೀವನದ ಸುಖ ಪೂರ್ಣ ಭುಕ್ತಿ
ಭಾವಗಳ ರಾಗಗಳ ಕೊನೆಯ ತೃಪ್ತಿ
ಪ್ರಕ್ಷುಬ್ಧ ಜಲಧಿಯಾ ಜಲವೆ ಶಿಲೆಯಾಗಿರುವ
ಹಮವತಿಯ ಸಿದ್ಧಿಯೂ ದೀರ್ಫ ಸುಪ್ತಿ.

ಸುಪ್ತಿ ಶುಕ್ತಿಯ ಸೇರೆ ಮನವು ಮೌಕ್ತಿಕವಾಗಿ
ಪಡೆಯಬಹುದೆಲೆ, ನಲ್ಲೆ, ನಿತ್ಯ ಮುಕ್ತಿ!
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...