Home / ಕವನ / ಕವಿತೆ / ಸೋತವನ ಹಾಡು

ಸೋತವನ ಹಾಡು

ಕಟ್ಟಿರಲು ಮಾನವನ ಹಣೆಗೆ ಮುಳ್ಳಿನ ಮುಕುಟ
ತಣಿವ ತಂಪನು ಮನದಿ ತಳೆಯಬಹುದೆ?
ಕಲಮಲನೆ ಸಿಡಿದುರಿದು ಬೆಂಕಿಬಳ್ಳಿಯು ಹರಡೆ
ಒಡಲಲ್ಲಿ ಶಾಂತಿಯದು ಆರಳಬಹುದೆ?
ಆಳಿದಿರುವ ‘ನಿನ್ನೆ’ ಗಳ ಹೆಣಗಳನು ಹೊತ್ತಿಹೆವು
‘ಇಂದು’ಗಳಿಗಾಳಾಗಿ ದುಡಿಯುತಿಹೆವು
ಮುಂದಿರುವ ‘ನಾಳೆ’ಗಳ ನೆಳಲಲ್ಲಿ ಚಿಂತೆಗಳ
ಚಿಗುರಿಸುತ ಎದೆಗುದಿಯ ಬೆಳೆಸುತಿಹೆವು.

ಸಾಕಾಯ್ತು ಬಾಳುವೆಯ ಕುರುಡು ಕಾಮನೆಯಾಟ
ಅನ್ಯಾಯ ಮೋಸಗಳ ಮೋಹದಾಟ
ನುಗ್ಗಿ ಬಹ ತೆರೆಗಳೇರಾಟ ಕಾಟದಿ ನನ್ನ
ಅಂಗಾಂಗವಾಯಾಸ ವಿದ್ಧವಕಟ
ಬೇಡಿದೆನೆ ಬಾನಿನಲಿ ಬೆಳೆವ ಅಮೃತದ ಹನಿಯ
ದೇವತೆಯ ವೈಭವವ ಕಾಮಿಸಿದೆನೆ ?
ಹುಲುಮನುಜನೆದೆಯೊಳಿಹ ಕಿರಿಯಾಸೆಗೂ ದೈವ
ಮುಚ್ಚಿರುವ ಬಾಗಿಲವ ತೆರೆಯಿತೇನೆ?

ಕೆರಳಿರುವ ಬಾಳ್ಗಡಲ ತೊರೆದು ಬಾ ನೀರೆಯೆ
ಏರಿಳಿತವಿಬ್ಲದೀಯುಸುಕಿನಲ್ಲಿ
ಧೆರ್ಮಬಂಧನ ಜರೆದು ಕರ್ಮಕ್ರಂದನ ತೊರೆದು
ಕೊರಳ ಕೊಯ್ಯುವ ಬಾಳನೊಗವ ಹರಿದು
ಸಿಕತಸೀಮೆಯ ಸೌಮ್ಯ ಶಾಂತಿಯಲಿ ಇಲ್ಲಿ ಬಾ
ಆಯಾಸವಾರಿಸುವ ವಿಶ್ರಾಂತಿಗೆ
ಕನಸಿನಾರಾಮದಲಿ ಕೊನರಬಹುದೆಲೆ ತಣಿವು
ಮರೆಯಬಹುದೆಲೆ ಮಲೆತ ವ್ಯಥೆಯಮೊನೆಯು

ಕಡಲತ್ತ ತನ್ನೆದೆಯ ಕದಡಿಸಿದ ಚಂದಿರನ
ಮಕ್ಕಲಿಕೆ ನಾಲಗೆಯ ಚಾಚುತಿರಲಿ
ಕಾಲ್ಕೆಳಗೆ ಸುಳಿಯುತಿಹ ಶೇಷನನು ಕುಕ್ಕಲಿಕೆ
ಪಾತಾಳವನು ಅಗಿದು ಮೊರೆಯುತಿರಲಿ
ಇಲ್ಲಿ ಕಾಣುವುದೇನು?- ನೀರ್‌ನೊರೆಯ ಬಿಳಿಗೆರೆಯೆ
ಕಡಲ ಮೊಳಗೂ ಕೂಡ ಕಿವಿಯ ಪುಗದು.
ಇಲ್ಲಿ ಗಾಳಿಯು ಕೂಡ ದಣಿದು ಗರಿಗಳ ಮುಗಿದು
ಹೂವಿನುಯ್ಯಲೆಯಲ್ಲಿ ಮಲಗಿರುವುದು.

ರಿಕ್ತವಹ ಸಂತಾಪ ಪರಿತಾಪಗಳ ತೊರೆದು
ಸೌಮ್ಯಸುಪ್ತಿಯಲೆದೆಯು ಮಿಡಿಯುತಿರಲಿ
ಇಲ್ಲಿರುವ ಗಿರಿಗಳಲಿ, ಹರಿಯುತಿಹ ಹೊಳೆಗಳಲಿ
ಹಸಿರಿನಲಿ ಬಿತ್ತರದ ಉಸುಕಿನಲ್ಲಿ
ಅಕ್ಷಯ್ಯ ಶಾಂತಿಯದು ನೆಲೆಸಿರಲು ನಾವೇಕೆ
ವ್ಯರ್ಥವಾದೆಣಿಕೆಯಲ್ಲಿ ನವೆಯಬೇಕು?
ಕನಸಿನಲಿ ಕಣ್ತೆರೆದು ನಸುಕಿನಲಿ ನಸುಬೆಳೆದು
ಅರಳಿಯಳಿವಲರಿನಾ ಬಾಳೆ ಸಾಕು!

ಮುಳುಗಲಿಹ ನೇಸರನು, ಮೂಡಲಿಹ ಚಂದಿರನು
ಮೆರೆಯುತಿಹರಾಗಸದ ಅಂಚುಗಳಲಿ
ಕ್ಷಣಕಾಲ ಮರೆತಿಹರು ರೇಗಿಸುವ ಕದನವನು
ಶಾಂತಿಯಾ ಕಾಂತಿಯನೆ ಕರೆಯುತಿಹರು,
ಗೆಳತಿ, ವೀಣೆಯಮೇಲೆ ತಂತಿ ನೋಯದೊಲಿನ್ನು
ಮೆಲ್ಪೆಲರಿಗೂ ಮಿದುವು ಬೆರಳಾಡಲಿ
ಗಾಳಿಗೂ ತಿಳಿಯದೊಲು ಮೌನವೂ ಮುರಿಯದೊಲು
ಗೀತಗಳು ಕಿವಿಯಲ್ಲಿ ಮೆಲ್ಲುಲಿಯಲಿ!

ಹುಸಿಯಾಸೆಗಳ ಪಾಶ, ಕೃತಿ ವಿರಸದಾಯಾಸ
ಮಾಯವಾಗುವುವೆಲ್ಲ ಸುಪ್ತಿಯಲ್ಲಿ
ಮಲೆತು ಮುರಿಯುವುದೇನು? ಅಲೆದು ಅರಸುವುದೇನು?
ಬಾಳೆಲ್ಲ ಸುಖಪಡೆಯೆ ವಿರತಿಯಲ್ಲಿ
ಸುಪ್ತಿಯೇ ಜೀವನದ ಸುಖ ಪೂರ್ಣ ಭುಕ್ತಿ
ಭಾವಗಳ ರಾಗಗಳ ಕೊನೆಯ ತೃಪ್ತಿ
ಪ್ರಕ್ಷುಬ್ಧ ಜಲಧಿಯಾ ಜಲವೆ ಶಿಲೆಯಾಗಿರುವ
ಹಮವತಿಯ ಸಿದ್ಧಿಯೂ ದೀರ್ಫ ಸುಪ್ತಿ.

ಸುಪ್ತಿ ಶುಕ್ತಿಯ ಸೇರೆ ಮನವು ಮೌಕ್ತಿಕವಾಗಿ
ಪಡೆಯಬಹುದೆಲೆ, ನಲ್ಲೆ, ನಿತ್ಯ ಮುಕ್ತಿ!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...