Home / ಕವನ / ಕವಿತೆ / ಸಂಜೆಗೆ

ಸಂಜೆಗೆ

(ಒಂದು ಪ್ರಗಾಥ)

ಹೃದಯ ಕಂಪಿಸುತಿಹುದು ಆನಂದ ದೂರ್ಮಿಯಲಿ
ತುಂಬಿ ಮೈಮನವನ್ನು ಬಂಧಿಸಿಹುದು
ಇಹುದೆ ಇಂತಹ ಚೆಲುವು ಲೋಕದಲಿ ನಾಕದಲಿ
ನಿನ್ನವೊಲು, ಶ್ಯಾಮಲೆಯೆ, ಮಾಗಿದೊಲವು
ಹರಣಗಳ ನಯನದಲಿ ಅರಳಿಸುತ ನೋಡುವೆನು.
ಕಡಲನ್ನೆ ಕುಡಿಯುವೊಲು ದಿಟ್ಟಿಸುವೆನು.

ಹಗಲಿರುಳು ತೆರೆ ಸರಿಸಿ ಬಂದೆ ಮಂಥರೆ, ಮಧುರೆ
ನಿಮಿಷಾರ್ಧವೇ ನಿಂತು ನಡುವೆ ಮರೆಗೆ
ಆದರೆಲ್ಲೆಡೆ ನೀನು ಮಂತ್ರ ಮೌಕ್ತಿಕ ಜಲವ
ತೂರುತಿರೆ ದೇಶ ದಿಶೆ ಹೂ ಹಾಸಿಗೆ.
ಜರೆಯ ಮರೆಯಿತು ಗಿರಿಯು ಹೆರೆಯತಳೆದಿತು ತಿರೆಯು
ನನ್ನ ಕರಳೂ ಅರಳ ಗಮಗಮಿಸಿತು.

ಸ್ವರ್ಗಲೋಕದ ಮಾರ್ಗ ದುರ್ಗಮವೆ ಈ ಕ್ಷಣದಿ
ನಾಕವೇ ನಗುತಿರಲು ನಿನ್ನುಡಿಯಲಿ
ಚೆಲುವಿನಾ ಬಲೆಯಾಗಿ ಒಲವಿನಾ ಸೆಲೆಯಾಗಿ
ಮುಣ್ಣಿಗೂ ಬಣ್ಣನೆಯ ಲೀಲೆ ದೋರೆ
ನೆಲದಿ ನೆಲೆಯಾಗಿರುವ ನನ್ನ ನನ್ನಿಗಳೆಲ್ಲ
ನಿನ್ನ ತೇಜೋರಥದಿ ಸಾಗುತಿಹವು.

ಬಲ್ಲೆಯಾ ನನ್ನೆದೆಯ ಏಕತಾರಿಯ ಮೇಲೆ
ಅಸೆಮಿಡಿಯುವ ಭಗ್ನಗೀತಗಳನು
ಮನದ ಮಂಗಲವನ್ನು ಮೃತಿಗೊಳಿಸಿ ಜೀವನದ
ಹಸಿವೆಯನೆ ಬತ್ತಿಸುವ ರಾಗಗಳನು.
ಚೆಲುವಾಗಿ ಚಣವರಳಿ ಅಳಿದ ನನ್ನೊಲವಿನಲಿ
ನೆನಹು ನೋವಿಗೆ ನೀರನುಣಿಸುತಿಹುದು.

ಬಾನ್ನೆಲದ ಬೇಟಕ್ಕೆ ಬೆಳೆದ ಸಂಧ್ಯಾ ಕುವರಿ
ದಿನದಗ್ನಿತಪ ಹೂತ ಪುಣ್ಯ ನೀನು
ನೋವು ನನೆಕೊನೆಯೇರಿ ನಲಿವಾಯಿತೆನ್ನುವೊಲು
ಬಾಂಬಸಿರ ಕಿಚ್ಚಿ ನಿಂದೆದ್ದೆ ನೀನು.
ಪಡುವಣದ ಮಡುವಿನಲಿ ನೂರೆಸಳನೈದಿಲೆಯು
ಅರಳಿದೊಲು ಹರಿಸಿರುವೆ ಕಾಂತಿಯನ್ನು

ಸಾಂಧ್ಯ ಸುಂದರಿ ನಿನ್ನ ಸೊಬಗಿನಾರಾಧನೆಗೆ
ನನ್ನ ಮನವೇ ಬಾಗಿ ನಿಂತಿರುವುದು
ಕೋಟಲೆಯ ಕದಡನ್ನು ತಿಳಿದು ಪಾವನವಾಗಿ
ಆತುರದಿ ಕಲ್ಯಾಣ ಬಯಸುತಿಹುದು.
ಸೋತೆದೆಯ ಸರಸಿಯಲಿ ಅರಳಿರುವುದರವಿಂದ
ಶಾಂತಿಯಲಿ ತೋಷವನು ತಳೆದಿರುವುದು.

ಮರೆಯಾದೆಯಾ ದೇವಿ! ಮನವು ಮುಕುಲಿತವಾಯ್ತು
ತಿರೆಯು ಕಣ್ಣಿಂಗಿದೊಲು ಮುಗ್ಗುರಿಸಿತ್ತು.
ಆದರೂ ನಿಮಿಷದಲಿ ಜೀವನವನರಳಿಸಿದ
ನಿನ್ನ ಪ್ರೀತಿಯ ರೀತಿ ಅನೃತವೆಂತು?
ವಿಲಯ ತಾಳಲಯಕ್ಕೆ ಕುಣಿವ ಬಾಳಿನ ಕತೆಗೆ
ಅಮೃತ ಗತದ ರಸವು ತುಂಬಿಬಂತು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್